ETV Bharat / state

ಬೈಕ್ ಮೇಲಿಂದ ಬಿದ್ದು ಮೃತಪಟ್ಟ ಶಿಕ್ಷಕಿ: ಮೃತದೇಹದ ಮೆರವಣಿಗೆ ನಡೆಸಿ ಗ್ರಾಮಸ್ಥರಿಂದ ಅಂತಿಮ ನಮನ

author img

By

Published : Oct 31, 2019, 8:57 PM IST

Updated : Oct 31, 2019, 9:02 PM IST

ಶಾಲೆಗೆ ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಬೈಕ್ ಮೇಲಿಂದ ಬಿದ್ದು ಮೃತಪಟ್ಟ ಶಿಕ್ಷಕಿಯ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಬೈಕ್ ಮೇಲಿಂದ ಬಿದ್ದು ಮೃತಪಟ್ಟ ಶಿಕ್ಷಕಿ: ಪಾರ್ಥೀವ ಶರೀರದ ಮೆರವಣಿಗೆ ನಡೆಸಿದ ಗ್ರಾಮಸ್ಥರು

ರಾಣೆಬೆನ್ನೂರು: ಶಾಲೆಗೆ ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮೃತಪಟ್ಟ ಶಿಕ್ಷಕಿಯ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗ್ಗೆ ರಾಣೆಬೆನ್ನೂರು ನಗರದಿಂದ ಮೆಡ್ಲೇರಿ ಗ್ರಾಮದಲ್ಲಿರೋ ಶಾಲೆಗೆ ಪತಿ ಜೊತೆ ಬೈಕ್‌ನಲ್ಲಿ ಬರ್ತಿದ್ದ ವೇಳೆ ಶಿಕ್ಷಕಿ ಲೀಲಾವತಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಗ್ರಾಮದ ಬೀರೇಶ್ವರ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ವಿಷಯ ಬೋಧನೆ ಮಾಡ್ತಿದ್ದ ಶಿಕ್ಷಕಿ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು. ಶಿಕ್ಷಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಪಾರ್ಥಿವ ಶರೀರವನ್ನು ಮೆಡ್ಲೇರಿ ಗ್ರಾಮಕ್ಕೆ ತಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆ ನಂತರ ಶಿಕ್ಷಕಿಯ ಸ್ವಗ್ರಾಮ ರಾಣೆಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಲಾಗಿದೆ.

ರಾಣೆಬೆನ್ನೂರು: ಶಾಲೆಗೆ ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮೃತಪಟ್ಟ ಶಿಕ್ಷಕಿಯ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗ್ಗೆ ರಾಣೆಬೆನ್ನೂರು ನಗರದಿಂದ ಮೆಡ್ಲೇರಿ ಗ್ರಾಮದಲ್ಲಿರೋ ಶಾಲೆಗೆ ಪತಿ ಜೊತೆ ಬೈಕ್‌ನಲ್ಲಿ ಬರ್ತಿದ್ದ ವೇಳೆ ಶಿಕ್ಷಕಿ ಲೀಲಾವತಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಗ್ರಾಮದ ಬೀರೇಶ್ವರ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ವಿಷಯ ಬೋಧನೆ ಮಾಡ್ತಿದ್ದ ಶಿಕ್ಷಕಿ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು. ಶಿಕ್ಷಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಪಾರ್ಥಿವ ಶರೀರವನ್ನು ಮೆಡ್ಲೇರಿ ಗ್ರಾಮಕ್ಕೆ ತಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆ ನಂತರ ಶಿಕ್ಷಕಿಯ ಸ್ವಗ್ರಾಮ ರಾಣೆಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Intro:ANCHOR ಶಾಲೆಗೆ ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಬೈಕ್ ಮೇಲಿಂದ ಬಿದ್ದು ಮೃತಪಟ್ಟ ಶಿಕ್ಷಕಿಯ ಪಾರ್ಥೀವ ಶರೀರದ ಮೆರವಣಿಗೆ ನಡೆಸಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ನಡೆದಿದೆ. ಇವತ್ತು ಬೆಳಿಗ್ಗೆ ರಾಣೇಬೆನ್ನೂರು ನಗರದಿಂದ ಮೆಡ್ಲೇರಿ ಗ್ರಾಮದಲ್ಲಿರೋ ಶಾಲೆಗೆ ಪತಿ ಜೊತೆ ಬೈಕ್ ಮೇಲೆ ಬರ್ತಿದ್ದ ವೇಳೆ ಶಿಕ್ಷಕಿ ಮೂವತ್ತು ನಾಲ್ಕು ವರ್ಷ ವಯಸ್ಸಿನ ಲೀಲಾವತಿ ಹೊಳೆಯಮ್ಮನವರ ಗಂಗಾಜಲ ತಾಂಡಾದ ಬಳಿ ಚಲಿಸುತ್ತಿದ್ದ ಬೈಕ್ ನಿಂದ ಬಿದ್ದು ಮೃತಪಟ್ಟಿದ್ಲು. ಗ್ರಾಮದ ಬೀರೇಶ್ವರ ಪ್ರೌಢಶಾಲೆಯಲ್ಲಿ ಇಂಗ್ಲೀಷ ಬೋದನೆ ಮಾಡ್ತಿದ್ದ ಶಿಕ್ಷಕಿ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು. ಶಿಕ್ಷಕಿಯ ಮರಣೋತ್ತರ ಪರೀಕ್ಷೆ ನಂತರ ಪಾರ್ಥೀವ ಶರೀರವನ್ನ ಶಿಕ್ಷಕಿ ಕಲಿಸ್ತಿದ್ದ ಮೆಡ್ಲೇರಿ ಗ್ರಾಮಕ್ಕೆ ತಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯ್ತು. ತಮ್ಮನ್ನಗಲಿದ ನೆಚ್ಚಿನ ಶಿಕ್ಷಕಿಯ ಪಾರ್ಥೀವ ಶರೀರದ ಮೆರವಣಿಗೆ ವೇಳೆ ವಿದ್ಯಾರ್ಥಿಗಳ ಕಣ್ಣಾಲಿಗಳು ತುಂಬಿ ಬಂದಿದ್ದವು. ಮೆರವಣಿಗೆ ನಂತರ ಶಿಕ್ಷಕಿಯ ಸ್ವಗ್ರಾಮ ರಾಣೇಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮಕ್ಕೆ ಪಾರ್ಥೀವ ಶರೀರ ತೆಗೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನಡೆಸಲಾಯ್ತು.Body:sameConclusion:same
Last Updated : Oct 31, 2019, 9:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.