ETV Bharat / state

ಸಿಗದ ಪರಿಹಾರ.. ರಾಷ್ಟ್ರಪತಿಗೆ ಪತ್ರ ಬರೆದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕುಟುಂಬ

author img

By

Published : Nov 7, 2022, 9:45 PM IST

ಹಾವೇರಿ ತಾಲೂಕು ಹೊಸಳ್ಳಿ ಗ್ರಾಮದ ಕುಟುಂಬವೊಂದು ಸರ್ಕಾರದಿಂದ ಪರಿಹಾರದ ಹಣ ಬಂದಿಲ್ಲ ಎಂದು ತಹಶೀಲ್ದಾರ್​ ಮೂಲಕ ರಾಷ್ಟ್ರಪತಿಯವರಿಗೆ ಪತ್ರ ಬರೆದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದೆ.

ರಾಷ್ಟ್ರಪತಿಯವರಿಗೆ ಪತ್ರ ಬರೆದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕುಟುಂಬ
ರಾಷ್ಟ್ರಪತಿಯವರಿಗೆ ಪತ್ರ ಬರೆದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕುಟುಂಬ

ಹಾವೇರಿ: ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳಿಂದ ಸುರಿದ ಬಾರಿ ಮಳೆಗೆ ನೂರಾರು ಮನೆಗಳು ಧರೆಗುರುಳಿವೆ. ಅದರಲ್ಲಿ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಮನೆ ಬಿದ್ದ ಪ್ರಮಾಣದ ಮೇಲೆ ಎ.ಬಿ.ಸಿ ಎಂದು ವರ್ಗಿಸಿ ಪರಿಹಾರ ನೀಡುತ್ತಿದೆ. ಈ ಮಧ್ಯ ಅಧಿಕಾರಿಗಳು ಮನೆ ಪರಿಹಾರ ನೀಡುವಲ್ಲಿ ತಾರತಮ್ಯ ಎಸಗಿದ್ದಾರೆ ಎಂದು ಹಲವು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಅಲೆದಾಡುತ್ತಿದ್ದಾರೆ.

ರಾಷ್ಟ್ರಪತಿಯವರಿಗೆ ಪತ್ರ ಬರೆದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕುಟುಂಬ

ಅಧಿಕಾರಿಗಳು ಲಂಚ ಪಡೆದು ಮನೆ ಬೀಳದವರಿಗೆ ಸಹ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ. ಈ ಮಧ್ಯೆ ತಮಗೆ ಸಮರ್ಪಕ ಪರಿಹಾರ ನೀಡಿ, ಇಲ್ಲದಿದ್ದರೆ ದಯಾಮರಣಕ್ಕೆ ಅವಕಾಶ ಕಲ್ಪಿಸಿ ಎಂದು ಹಾವೇರಿ ತಾಲೂಕು ಹೊಸಳ್ಳಿ ಗ್ರಾಮದ ಕುಟುಂಬವೊಂದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

ಹೊಸಳ್ಳಿ ಗ್ರಾಮದ ಶಾಂತವ್ವ ನಿಂಬಕ್ಕನವರ್ ಮತ್ತು ಅವರ ಮಗ ಪ್ರಕಾಶ್ ನಿಂಬಕ್ಕನವರ್ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಶಾಂತವ್ವ ನಿಂಬಕ್ಕನವರ್ ಕಳೆದ ಹಲವು ವರ್ಷಗಳಿಂದ ಮನೆಯಲ್ಲಿ ವಾಸವಾಗಿದ್ದರು. ಒಬ್ಬ ಮಗ- ಮಗಳ ಜೊತೆ ಜೀವನ ನಡೆಸುತ್ತಿದ್ದ ಶಾಂತವ್ವಳ ಮನೆ ಕಳೆದ ಕೆಲ ತಿಂಗಳ ಹಿಂದೆ ಬಾರಿ ಮಳೆಗೆ ಕುಸಿದು ಬಿದ್ದಿತ್ತು. ಇದರಿಂದ ಪಕ್ಕದ ಮನೆಯಲ್ಲಿ ವಾಸವಾಗಿರುವ ಶಾಂತವ್ವ ಮತ್ತು ಮಕ್ಕಳು ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಪೂರ್ಣ ಮನೆ ನೆಲಕ್ಕುರುಳಿದರೂ ಅಧಿಕಾರಿಗಳು ಈ ಕುಟುಂಬಕ್ಕೆ 50 ಸಾವಿರ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.

ಇದರಿಂದ ನೊಂದ ಈ ಕುಟುಂಬ ಕಳೆದ ಮೂರು ತಿಂಗಳಿಂದ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದೆ. ಕಚೇರಿ ಅಲೆದು ಅಲೆದು ಸಾಕಾಗಿ ಇದೀಗ ನಮಗೆ ದಯಾಮರಣ ಕಲ್ಪಿಸಿ ಎಂದು ರಾಷ್ಟ್ರಪತಿಗಳಿಗೆ ಮನವಿ ಪತ್ರ ನೀಡಿದೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಶಾಂತವ್ವ ಮತ್ತು ಪ್ರಕಾಶ್​ ತಮಗೆ ಸೂಕ್ತ ಪರಿಹಾರ ನೀಡಿ ಇಲ್ಲವೇ ದಯಾಮರಣ ನೀಡಿ ಎಂದು ಮನವಿ ಮಾಡಿದೆ.

ಕೂಲಿನಾಲಿ ಮಾಡಿ ಮಕ್ಕಳನ್ನ ಓದಿಸುತ್ತಿದ್ದೇನೆ. ನನ್ನಿಂದ ಮನೆ ಕಟ್ಟಿಸಲು ಸಾಧ್ಯವಿಲ್ಲ. ಕಳೆದ ಹಲವು ವರ್ಷಗಳಿಂದ ಆಶ್ರಯ ನೀಡಿದ್ದ ಮನೆ ಧರೆಗುರುಳಿದೆ. ಜೀವನ ಸಾಗಿಸುವುದೇ ದುಸ್ತರವಾಗಿದ್ದಾಗ ಮನೆ ಎಲ್ಲಿಂದ ಕಟ್ಟಿಸಲಿ ಎನ್ನುತ್ತಿದ್ದಾರೆ ಶಾಂತವ್ವ. ತಾಯಿ ಅಸಹಾಯಕತೆ ಕಂಡ ಪ್ರಕಾಶ್ ಇದೀಗ ತನಗೂ ಸಹ ದಯಾಮರಣಕ್ಕೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಓದಿ: 11 ಮಕ್ಕಳಿದ್ದರೂ ತುತ್ತು ಅನ್ನಕ್ಕೆ ವೃದ್ಧೆ ಪರದಾಟ.. ದಯಾಮರಣ ಕೋರಿ ಹಾವೇರಿ ಜಿಲ್ಲಾಧಿಕಾರಿಗೆ ಅರ್ಜಿ

ಹಾವೇರಿ: ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳಿಂದ ಸುರಿದ ಬಾರಿ ಮಳೆಗೆ ನೂರಾರು ಮನೆಗಳು ಧರೆಗುರುಳಿವೆ. ಅದರಲ್ಲಿ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಮನೆ ಬಿದ್ದ ಪ್ರಮಾಣದ ಮೇಲೆ ಎ.ಬಿ.ಸಿ ಎಂದು ವರ್ಗಿಸಿ ಪರಿಹಾರ ನೀಡುತ್ತಿದೆ. ಈ ಮಧ್ಯ ಅಧಿಕಾರಿಗಳು ಮನೆ ಪರಿಹಾರ ನೀಡುವಲ್ಲಿ ತಾರತಮ್ಯ ಎಸಗಿದ್ದಾರೆ ಎಂದು ಹಲವು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಅಲೆದಾಡುತ್ತಿದ್ದಾರೆ.

ರಾಷ್ಟ್ರಪತಿಯವರಿಗೆ ಪತ್ರ ಬರೆದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕುಟುಂಬ

ಅಧಿಕಾರಿಗಳು ಲಂಚ ಪಡೆದು ಮನೆ ಬೀಳದವರಿಗೆ ಸಹ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ. ಈ ಮಧ್ಯೆ ತಮಗೆ ಸಮರ್ಪಕ ಪರಿಹಾರ ನೀಡಿ, ಇಲ್ಲದಿದ್ದರೆ ದಯಾಮರಣಕ್ಕೆ ಅವಕಾಶ ಕಲ್ಪಿಸಿ ಎಂದು ಹಾವೇರಿ ತಾಲೂಕು ಹೊಸಳ್ಳಿ ಗ್ರಾಮದ ಕುಟುಂಬವೊಂದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

ಹೊಸಳ್ಳಿ ಗ್ರಾಮದ ಶಾಂತವ್ವ ನಿಂಬಕ್ಕನವರ್ ಮತ್ತು ಅವರ ಮಗ ಪ್ರಕಾಶ್ ನಿಂಬಕ್ಕನವರ್ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಶಾಂತವ್ವ ನಿಂಬಕ್ಕನವರ್ ಕಳೆದ ಹಲವು ವರ್ಷಗಳಿಂದ ಮನೆಯಲ್ಲಿ ವಾಸವಾಗಿದ್ದರು. ಒಬ್ಬ ಮಗ- ಮಗಳ ಜೊತೆ ಜೀವನ ನಡೆಸುತ್ತಿದ್ದ ಶಾಂತವ್ವಳ ಮನೆ ಕಳೆದ ಕೆಲ ತಿಂಗಳ ಹಿಂದೆ ಬಾರಿ ಮಳೆಗೆ ಕುಸಿದು ಬಿದ್ದಿತ್ತು. ಇದರಿಂದ ಪಕ್ಕದ ಮನೆಯಲ್ಲಿ ವಾಸವಾಗಿರುವ ಶಾಂತವ್ವ ಮತ್ತು ಮಕ್ಕಳು ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಪೂರ್ಣ ಮನೆ ನೆಲಕ್ಕುರುಳಿದರೂ ಅಧಿಕಾರಿಗಳು ಈ ಕುಟುಂಬಕ್ಕೆ 50 ಸಾವಿರ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.

ಇದರಿಂದ ನೊಂದ ಈ ಕುಟುಂಬ ಕಳೆದ ಮೂರು ತಿಂಗಳಿಂದ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದೆ. ಕಚೇರಿ ಅಲೆದು ಅಲೆದು ಸಾಕಾಗಿ ಇದೀಗ ನಮಗೆ ದಯಾಮರಣ ಕಲ್ಪಿಸಿ ಎಂದು ರಾಷ್ಟ್ರಪತಿಗಳಿಗೆ ಮನವಿ ಪತ್ರ ನೀಡಿದೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಶಾಂತವ್ವ ಮತ್ತು ಪ್ರಕಾಶ್​ ತಮಗೆ ಸೂಕ್ತ ಪರಿಹಾರ ನೀಡಿ ಇಲ್ಲವೇ ದಯಾಮರಣ ನೀಡಿ ಎಂದು ಮನವಿ ಮಾಡಿದೆ.

ಕೂಲಿನಾಲಿ ಮಾಡಿ ಮಕ್ಕಳನ್ನ ಓದಿಸುತ್ತಿದ್ದೇನೆ. ನನ್ನಿಂದ ಮನೆ ಕಟ್ಟಿಸಲು ಸಾಧ್ಯವಿಲ್ಲ. ಕಳೆದ ಹಲವು ವರ್ಷಗಳಿಂದ ಆಶ್ರಯ ನೀಡಿದ್ದ ಮನೆ ಧರೆಗುರುಳಿದೆ. ಜೀವನ ಸಾಗಿಸುವುದೇ ದುಸ್ತರವಾಗಿದ್ದಾಗ ಮನೆ ಎಲ್ಲಿಂದ ಕಟ್ಟಿಸಲಿ ಎನ್ನುತ್ತಿದ್ದಾರೆ ಶಾಂತವ್ವ. ತಾಯಿ ಅಸಹಾಯಕತೆ ಕಂಡ ಪ್ರಕಾಶ್ ಇದೀಗ ತನಗೂ ಸಹ ದಯಾಮರಣಕ್ಕೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಓದಿ: 11 ಮಕ್ಕಳಿದ್ದರೂ ತುತ್ತು ಅನ್ನಕ್ಕೆ ವೃದ್ಧೆ ಪರದಾಟ.. ದಯಾಮರಣ ಕೋರಿ ಹಾವೇರಿ ಜಿಲ್ಲಾಧಿಕಾರಿಗೆ ಅರ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.