ETV Bharat / state

ಅನಾರೋಗ್ಯದಿಂದ ಮೃತಪಟ್ಟ 'ಪ್ರಳಯ'ನಿಗೆ ಮನುಷ್ಯರ ರೀತಿಯಲ್ಲೇ ಶಾಸ್ತ್ರೋಕ್ತ ಅಂತ್ಯಕ್ರಿಯೆ! - haveri bull died news

ಹೋರಿ ಬೆದರಿಸೋ ಸ್ಪರ್ಧೆಯ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡಿ ಜನಪ್ರೀಯತೆ ಗಳಿಸಿದ್ದ ಹೋರಿ 'ಪ್ರಳಯ' ಇವತ್ತು ಅನಾರೋಗ್ಯದಿಂದ ಮೃತಪಟ್ಟಿದೆ.

haveri
ಮೃತಪಟ್ಟ ಹೋರಿ
author img

By

Published : Jan 19, 2020, 8:30 PM IST

ಹಾವೇರಿ: ಹೋರಿ ಬೆದರಿಸೋ ಸ್ಪರ್ಧೆಯ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಮಿಂಚಿನ ವೇಗದಲ್ಲಿ ಓಡಿ ಫೇಮಸ್ ಆಗಿದ್ದ ಹೋರಿ ಇವತ್ತು ಅನಾರೋಗ್ಯದಿಂದ ಮೃತಪಟ್ಟಿದೆ. ಈ ಹೋರಿಯನ್ನು ಮನೆ ಮಗನಂತೆ ಸಾಕಿದ ಮಾಲೀಕ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ.

ತನ್ನ ನೆಚ್ಚಿನ ಹೋರಿಯ ಅಂತ್ಯಕ್ರಿಯೆಯನ್ನು ಹೋರಿ ಮಾಲೀಕ ರೇಣುಕಯ್ಯ ಹಿರೇಮಠ ಮನುಷ್ಯರ ಅಂತ್ಯಕ್ರಿಯೆಯಂತೆ ನೆರವೇರಿಸಿ ಗಮನ ಸೆಳೆದಿದ್ದಾರೆ. ಮೃತ ಹೋರಿಗೆ ಪೂಜೆ ಸಲ್ಲಿಸಿ, ಗ್ರಾಮದ ತುಂಬೆಲ್ಲಾ ವಾದ್ಯಮೇಳಗಳ ಸಮೇತ ಮೆರವಣಿಗೆ ಮಾಡಿದ್ದಾರೆ. ನಂತರ ತಮ್ಮ ಜಮೀನಿನಲ್ಲಿ ವಿಧಿ ವಿಧಾನಗಳ ಮೂಲಕ ಶಾಸ್ತ್ರೋಕ್ತ ರೀತಿಯಲ್ಲಿ ಮಣ್ಣು ಮಾಡಿದರು.

ಅನಾರೋಗ್ಯದಿಂದ ಮೃತಪಟ್ಟ ಹೋರಿಗೆ ಮನುಷ್ಯರಂತೆ ಶಾಸ್ತ್ರೋಕ್ತ ರೀತಿಯಲ್ಲಿ ಅಂತ್ಯಕ್ರಿಯೆ

ಹಾವೇರಿ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧೆಡೆಗಳಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಪ್ರಳಯ ಹೆಸರಿ ಹೋರಿ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡಿ, ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.

ಹೋರಿ ಮಾಲೀಕ ರೇಣುಕಯ್ಯನ ಕೆಲಸಕ್ಕೆ ಗ್ರಾಮಸ್ಥರು ಸಾಥ್ ನೀಡಿ ಮೆರವಣಿಗೆ, ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಹಾವೇರಿ: ಹೋರಿ ಬೆದರಿಸೋ ಸ್ಪರ್ಧೆಯ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಮಿಂಚಿನ ವೇಗದಲ್ಲಿ ಓಡಿ ಫೇಮಸ್ ಆಗಿದ್ದ ಹೋರಿ ಇವತ್ತು ಅನಾರೋಗ್ಯದಿಂದ ಮೃತಪಟ್ಟಿದೆ. ಈ ಹೋರಿಯನ್ನು ಮನೆ ಮಗನಂತೆ ಸಾಕಿದ ಮಾಲೀಕ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ.

ತನ್ನ ನೆಚ್ಚಿನ ಹೋರಿಯ ಅಂತ್ಯಕ್ರಿಯೆಯನ್ನು ಹೋರಿ ಮಾಲೀಕ ರೇಣುಕಯ್ಯ ಹಿರೇಮಠ ಮನುಷ್ಯರ ಅಂತ್ಯಕ್ರಿಯೆಯಂತೆ ನೆರವೇರಿಸಿ ಗಮನ ಸೆಳೆದಿದ್ದಾರೆ. ಮೃತ ಹೋರಿಗೆ ಪೂಜೆ ಸಲ್ಲಿಸಿ, ಗ್ರಾಮದ ತುಂಬೆಲ್ಲಾ ವಾದ್ಯಮೇಳಗಳ ಸಮೇತ ಮೆರವಣಿಗೆ ಮಾಡಿದ್ದಾರೆ. ನಂತರ ತಮ್ಮ ಜಮೀನಿನಲ್ಲಿ ವಿಧಿ ವಿಧಾನಗಳ ಮೂಲಕ ಶಾಸ್ತ್ರೋಕ್ತ ರೀತಿಯಲ್ಲಿ ಮಣ್ಣು ಮಾಡಿದರು.

ಅನಾರೋಗ್ಯದಿಂದ ಮೃತಪಟ್ಟ ಹೋರಿಗೆ ಮನುಷ್ಯರಂತೆ ಶಾಸ್ತ್ರೋಕ್ತ ರೀತಿಯಲ್ಲಿ ಅಂತ್ಯಕ್ರಿಯೆ

ಹಾವೇರಿ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧೆಡೆಗಳಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಪ್ರಳಯ ಹೆಸರಿ ಹೋರಿ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡಿ, ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.

ಹೋರಿ ಮಾಲೀಕ ರೇಣುಕಯ್ಯನ ಕೆಲಸಕ್ಕೆ ಗ್ರಾಮಸ್ಥರು ಸಾಥ್ ನೀಡಿ ಮೆರವಣಿಗೆ, ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

Intro:ANCHOR ಹೋರಿ ಬೆದರಿಸೋ ಸ್ಪರ್ಧೆಯ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡಿ ಫೇಮಸ್ ಆಗಿದ್ದ ಕೊಬ್ಬರಿ ಹೋರಿ ಇವತ್ತು ಅನಾರೋಗ್ಯದಿಂದ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ. ಫೇಮಸ್ ಆಗಿದ್ದ ನೆಚ್ಚಿನ ಹೋರಿಯ ಅಂತ್ಯಕ್ರಿಯೆಯನ್ನ ಹೋರಿ ಮಾಲೀಕ ರೇಣುಕಯ್ಯ ಹಿರೇಮಠ ಎಂಬುವರು ಮನುಷ್ಯರ ಅಂತ್ಯಕ್ರಿಯೆ ಮಾಡುವಂತೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಮೃತ ಹೋರಿಗೆ ಪೂಜೆ ಸಲ್ಲಿಸಿ, ಗ್ರಾಮದ ತುಂಬ ವಾದ್ಯ ಮೇಳಗಳ ಸಮೇತ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆ ನಂತರ ತಮ್ಮ ಜಮೀನಿನಲ್ಲಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಹಾವೇರಿ, ಶಿವಮೊಗ್ಗ, ದಾವಣಗೆರೆ ಸೇರಿದಂತಡ ವಿವಿಧ ಕಡೆಗಳಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಪ್ರಳಯ ಹೆಸರಿನಿಂದ ಫೇಮಸ್ ಆಗಿದ್ದ ರೇಣುಕಯ್ಯನವರ ಹೋರಿ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡಿ, ಅನೇಕ ಪ್ರಶಸ್ತಿಗಳನ್ನ ಬಾಚಿಕೊಂಡಿತ್ತು. ಮನೆಯ ಮಗನಂತೆ ಸಾಕಿದ್ದ ಹೋರಿ ಇವತ್ತು ಅನಾರೋಗ್ಯದಿಂದ ಮೃತಪಟ್ಟಿದ್ದರಿಂದ ಮನುಷ್ಯರ ಅಂತ್ಯಕ್ರಿಯೆ ಮಾಡುವಂತೆ ಹೋರಿ ಅಂತ್ಯಕ್ರಿಯೆ ಮಾಡಿದ್ದಾರೆ. ಹೋರಿ ಮಾಲೀಕ ರೇಣುಕಯ್ಯನ ಕೆಲಸಕ್ಕೆ ಗ್ರಾಮಸ್ಥರು ಸಾಥ್ ನೀಡಿ ಮೆರವಣಿಗೆ, ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ರು.Body:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.