ETV Bharat / state

ರಾಣೆಬೆನ್ನೂರು ಚೌಡೇಶ್ವರಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು

author img

By

Published : May 10, 2020, 10:50 PM IST

ಗಂಗಾಜಲ ಚೌಡೇಶ್ವರಿ ದೇವಸ್ಥಾನದ ಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು, ಸುಮಾರು ಆರೇಳು ಕಾಣಿಕೆ ಡಬ್ಬಿಗಳಲ್ಲಿದ್ದ ಕಾಣಿಕೆ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ.

Theft at the Chowdeshwari Temple
ರಾಣೇಬೆನ್ನೂರು ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ರಾಣೆಬೆನ್ನೂರು: ನಗರದ ಅಧಿದೇವತೆ ಗಂಗಾಜಲ ಚೌಡೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಗೆ ಕಳ್ಳರು ಕನ್ನ ಹಾಕಿದ್ದಾರೆ.

ರಾಣೆಬೆನ್ನೂರು ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನ
ಕಳೆದ ರಾತ್ರಿ ನಗರದಲ್ಲಿರುವ ದೇವಸ್ಥಾನದ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು, ಸುಮಾರು ಆರೇಳು ಕಾಣಿಕೆ ಡಬ್ಬಿಗಳಲ್ಲಿದ್ದ ಕಾಣಿಕೆ ಹಣವನ್ನು ದೋಚಿದ್ದಾರೆ. ಅಂದಾಜು 20 ಸಾವಿರ ರೂ. ಕಾಣಿಕೆ ಹಣ ದೋಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಕಳ್ಳತನ ಮಾಡಿರುವ ವಿಡಿಯೋ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತನಿಖೆ ನಂತರ ಕಳ್ಳರು ಯಾರು ಎಂಬುದು ಗೊತ್ತಾಗಲಿದೆ ಎಂದು ಅಪರಾಧ ವಿಭಾಗದ ಎಸ್ಐ ಉದಗಟ್ಟಿ ತಿಳಿಸಿದ್ದಾರೆ. ಈ ಸಂಬಂಧ ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಣೆಬೆನ್ನೂರು: ನಗರದ ಅಧಿದೇವತೆ ಗಂಗಾಜಲ ಚೌಡೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಗೆ ಕಳ್ಳರು ಕನ್ನ ಹಾಕಿದ್ದಾರೆ.

ರಾಣೆಬೆನ್ನೂರು ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನ
ಕಳೆದ ರಾತ್ರಿ ನಗರದಲ್ಲಿರುವ ದೇವಸ್ಥಾನದ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು, ಸುಮಾರು ಆರೇಳು ಕಾಣಿಕೆ ಡಬ್ಬಿಗಳಲ್ಲಿದ್ದ ಕಾಣಿಕೆ ಹಣವನ್ನು ದೋಚಿದ್ದಾರೆ. ಅಂದಾಜು 20 ಸಾವಿರ ರೂ. ಕಾಣಿಕೆ ಹಣ ದೋಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಕಳ್ಳತನ ಮಾಡಿರುವ ವಿಡಿಯೋ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತನಿಖೆ ನಂತರ ಕಳ್ಳರು ಯಾರು ಎಂಬುದು ಗೊತ್ತಾಗಲಿದೆ ಎಂದು ಅಪರಾಧ ವಿಭಾಗದ ಎಸ್ಐ ಉದಗಟ್ಟಿ ತಿಳಿಸಿದ್ದಾರೆ. ಈ ಸಂಬಂಧ ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.