ETV Bharat / state

ಹಾವೇರಿಯಲ್ಲಿ ಸ್ಮಶಾನ ಸಮಸ್ಯೆ: ಜಮೀನು, ರಸ್ತೆ ಪಕ್ಕದಲ್ಲೇ ನಡೆಯುತ್ತಿದೆ ಅಂತ್ಯಕ್ರಿಯೆ

ಹತ್ತಿಮತ್ತೂರು ಗ್ರಾಮದಲ್ಲಿ ಉತ್ತಮ ವ್ಯವಸ್ಥೆಯುಳ್ಳ ಸ್ಮಶಾನವಿಲ್ಲ. ಗ್ರಾಮಸ್ಥರು ತಮ್ಮ ಜಮೀನುಗಳಲ್ಲಿ ಮೃತದೇಹಗಳ ಅಂತ್ಯಕ್ರಿಯೆ ನಡೆಸಿದರೆ, ಜಮೀನು ಇಲ್ಲದವರು ರಸ್ತೆ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ.

author img

By

Published : Jul 22, 2022, 2:16 PM IST

there is no burial ground facility in hattimatturu of haveri
ಹಾವೇರಿ ಸ್ಮಶಾನ ಸಮಸ್ಯೆ

ಹಾವೇರಿ: ಸವಣೂರು ತಾಲೂಕಿನ ಹೋಬಳಿ ಕೇಂದ್ರವಾಗಿರುವ ಹತ್ತಿಮತ್ತೂರು 10 ಸಾವಿರ ಜನಸಂಖ್ಯೆ ಹೊಂದಿರುವ ದೊಡ್ಡ ಪ್ರದೇಶ. ಆದರೆ ಈ ಗ್ರಾಮದಲ್ಲಿ ಸೂಕ್ತ ವ್ಯವಸ್ಥೆಯುಳ್ಳ ಸ್ಮಶಾನವಿಲ್ಲ. ಇದರಿಂದಾಗಿ ಗ್ರಾಮಸ್ಥರು ತಮ್ಮ ತಮ್ಮ ಜಮೀನುಗಳಲ್ಲಿ ಶವಗಳ ಅಂತ್ಯಕ್ರಿಯೆ ನಡೆಸಿದರೆ, ಜಮೀನು ಇಲ್ಲದವರು ರಸ್ತೆ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ.


ಹತ್ತಿಮತ್ತೂರು ಗ್ರಾಮದಲ್ಲಿ ಸರ್ಕಾರ ಸರ್ವೇ ನಂಬರ್ 163ರಲ್ಲಿ ಎರಡು ಎಕರೆ ಜಮೀನನ್ನು ಸಾರ್ವಜನಿಕರ ರುದ್ರಭೂಮಿಗಾಗಿ ಮೀಸಲಿಟ್ಟಿದೆ. 2018-2019ರಲ್ಲಿಯೇ ಸರ್ಕಾರ ರುದ್ರಭೂಮಿಗೆ ಜಾಗ ಗುರುತಿಸಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರುದ್ರಭೂಮಿ ನಿರ್ವಹಣೆ ಮಾಡತಕ್ಕದ್ದು ಎಂದು ಆದೇಶ ನೀಡಿದೆ. ಆದರೆ ಸರ್ಕಾರ ಗುರುತಿಸಿರುವ ರುದ್ರಭೂಮಿ ಈವರೆಗೆ ಅಭಿವೃದ್ಧಿ ಕಂಡಿಲ್ಲ. ರುದ್ರಭೂಮಿ ಸುಧಾರಣೆಯಾಗದ ಕಾರಣ ಯಾರೂ ಅಲ್ಲಿಗೆ ಶವ ತಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸುವುದಿಲ್ಲ. ಸ್ಮಶಾನಕ್ಕೆ ಮೀಸಲಿಟ್ಟಿರುವ ಎಕರೆ ಜಮೀನನ್ನು ಅಭಿವೃದ್ಧಿ ಮಾಡಿ ಎಂದು ಗ್ರಾಮಸ್ಥರು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: 'ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ' ಎಂದು ಘೋಷಣೆ ಕೂಗಿದ ಕಾಂಗ್ರೆಸ್​ ಕಾರ್ಯಕರ್ತರು

ಅಲ್ಲದೇ, ರುದ್ರಭೂಮಿಗೆ ಹೋಗಲು ಸರಿಯಾದ ರಸ್ತೆ ಇಲ್ಲ. ರುದ್ರಭೂಮಿಯಲ್ಲಿ ಚಿತಾಗಾರ, ನೀರಿನ ಸೌಲಭ್ಯ, ವಿದ್ಯುತ್ ದೀಪದ ವ್ಯವಸ್ಥೆ, ಬೀದಿ ದೀಪ, ರಕ್ಷಣಾ ಗೋಡೆ ಇಲ್ಲ ಎಂದು ಗ್ರಾಮಸ್ಥರು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.

ಹಾವೇರಿ: ಸವಣೂರು ತಾಲೂಕಿನ ಹೋಬಳಿ ಕೇಂದ್ರವಾಗಿರುವ ಹತ್ತಿಮತ್ತೂರು 10 ಸಾವಿರ ಜನಸಂಖ್ಯೆ ಹೊಂದಿರುವ ದೊಡ್ಡ ಪ್ರದೇಶ. ಆದರೆ ಈ ಗ್ರಾಮದಲ್ಲಿ ಸೂಕ್ತ ವ್ಯವಸ್ಥೆಯುಳ್ಳ ಸ್ಮಶಾನವಿಲ್ಲ. ಇದರಿಂದಾಗಿ ಗ್ರಾಮಸ್ಥರು ತಮ್ಮ ತಮ್ಮ ಜಮೀನುಗಳಲ್ಲಿ ಶವಗಳ ಅಂತ್ಯಕ್ರಿಯೆ ನಡೆಸಿದರೆ, ಜಮೀನು ಇಲ್ಲದವರು ರಸ್ತೆ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ.


ಹತ್ತಿಮತ್ತೂರು ಗ್ರಾಮದಲ್ಲಿ ಸರ್ಕಾರ ಸರ್ವೇ ನಂಬರ್ 163ರಲ್ಲಿ ಎರಡು ಎಕರೆ ಜಮೀನನ್ನು ಸಾರ್ವಜನಿಕರ ರುದ್ರಭೂಮಿಗಾಗಿ ಮೀಸಲಿಟ್ಟಿದೆ. 2018-2019ರಲ್ಲಿಯೇ ಸರ್ಕಾರ ರುದ್ರಭೂಮಿಗೆ ಜಾಗ ಗುರುತಿಸಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರುದ್ರಭೂಮಿ ನಿರ್ವಹಣೆ ಮಾಡತಕ್ಕದ್ದು ಎಂದು ಆದೇಶ ನೀಡಿದೆ. ಆದರೆ ಸರ್ಕಾರ ಗುರುತಿಸಿರುವ ರುದ್ರಭೂಮಿ ಈವರೆಗೆ ಅಭಿವೃದ್ಧಿ ಕಂಡಿಲ್ಲ. ರುದ್ರಭೂಮಿ ಸುಧಾರಣೆಯಾಗದ ಕಾರಣ ಯಾರೂ ಅಲ್ಲಿಗೆ ಶವ ತಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸುವುದಿಲ್ಲ. ಸ್ಮಶಾನಕ್ಕೆ ಮೀಸಲಿಟ್ಟಿರುವ ಎಕರೆ ಜಮೀನನ್ನು ಅಭಿವೃದ್ಧಿ ಮಾಡಿ ಎಂದು ಗ್ರಾಮಸ್ಥರು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: 'ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ' ಎಂದು ಘೋಷಣೆ ಕೂಗಿದ ಕಾಂಗ್ರೆಸ್​ ಕಾರ್ಯಕರ್ತರು

ಅಲ್ಲದೇ, ರುದ್ರಭೂಮಿಗೆ ಹೋಗಲು ಸರಿಯಾದ ರಸ್ತೆ ಇಲ್ಲ. ರುದ್ರಭೂಮಿಯಲ್ಲಿ ಚಿತಾಗಾರ, ನೀರಿನ ಸೌಲಭ್ಯ, ವಿದ್ಯುತ್ ದೀಪದ ವ್ಯವಸ್ಥೆ, ಬೀದಿ ದೀಪ, ರಕ್ಷಣಾ ಗೋಡೆ ಇಲ್ಲ ಎಂದು ಗ್ರಾಮಸ್ಥರು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.