ETV Bharat / state

ಭೀಕರ ರಸ್ತೆ ಅಪಘಾತ : ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಹಮಾಲರ ಸಾವು

author img

By

Published : Jan 24, 2022, 4:41 PM IST

Updated : Jan 24, 2022, 6:48 PM IST

ಲಾರಿ ಕೆಳಗೆ‌ ಸಿಲುಕಿಕೊಂಡು ಈ ಮೂವರು ಹಮಾಲರು ದುರಂತ ಅಂತ್ಯ ಕಂಡಿದ್ದಾರೆ. ಮೂವರ ಮೃತದೇಹಗಳನ್ನ ಸ್ಥಳೀಯರು ಹಾಗೂ ಪೊಲೀಸರು ಹೊರತಗೆದಿದ್ದಾರೆ..

ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಹಮಾಲರ ಸಾವು
ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಹಮಾಲರ ಸಾವು

ಹಾವೇರಿ : ತಾಲೂಕಿನ ಹೊಸರಿತ್ತಿ ಬಳಿಯ ಕೊರಡೂರು ಗ್ರಾಮದ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೆಕ್ಕೆಜೋಳದ ಚೀಲಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.

ಮೃತರನ್ನ ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದ ಮಂಜುನಾಥ(33), ಮಂಜುನಾಥ (35) ಮತ್ತು ಆನಂದ (37) ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿದೆ.

ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಹಮಾಲರ ಸಾವು

ಲಾರಿ ಕೆಳಗೆ‌ ಸಿಲುಕಿಕೊಂಡು ಈ ಮೂವರು ಹಮಾಲರು ದುರಂತ ಅಂತ್ಯ ಕಂಡಿದ್ದಾರೆ. ಮೂವರ ಮೃತದೇಹಗಳನ್ನ ಸ್ಥಳೀಯರು ಹಾಗೂ ಪೊಲೀಸರು ಹೊರತಗೆದಿದ್ದಾರೆ. ಸ್ಥಳಕ್ಕೆ ಗುತ್ತಲ ಪಿಎಸ್ಐ ಜಗದೀಶ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಹಾವೇರಿ : ತಾಲೂಕಿನ ಹೊಸರಿತ್ತಿ ಬಳಿಯ ಕೊರಡೂರು ಗ್ರಾಮದ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೆಕ್ಕೆಜೋಳದ ಚೀಲಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.

ಮೃತರನ್ನ ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದ ಮಂಜುನಾಥ(33), ಮಂಜುನಾಥ (35) ಮತ್ತು ಆನಂದ (37) ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿದೆ.

ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಹಮಾಲರ ಸಾವು

ಲಾರಿ ಕೆಳಗೆ‌ ಸಿಲುಕಿಕೊಂಡು ಈ ಮೂವರು ಹಮಾಲರು ದುರಂತ ಅಂತ್ಯ ಕಂಡಿದ್ದಾರೆ. ಮೂವರ ಮೃತದೇಹಗಳನ್ನ ಸ್ಥಳೀಯರು ಹಾಗೂ ಪೊಲೀಸರು ಹೊರತಗೆದಿದ್ದಾರೆ. ಸ್ಥಳಕ್ಕೆ ಗುತ್ತಲ ಪಿಎಸ್ಐ ಜಗದೀಶ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 24, 2022, 6:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.