ETV Bharat / state

ನಾನು ಎಲ್ಲರೊಂದಿಗೆ ಅಡ್ಜಸ್ಟ್ ಆಗಿದ್ದರೆ ನೀವ್ಯಾರು ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಯತ್ನಾಳ್​

author img

By

Published : Aug 23, 2022, 7:45 PM IST

ಪಂಚಮಸಾಲಿ ಮೀಸಲಾತಿ ಕುರಿತು ಹಾವೇರಿ ಜಿಲ್ಲೆಯಲ್ಲಿ ಬಸನ​ಗೌಡ ಪಾಟೀಲ್​ ಯತ್ನಾಳ್​ ಮಾತನಾಡಿ, ಧ್ವನಿಯಿಲ್ಲದ ಸಮಾಜಗಳಿಗೆ ನಮ್ಮ ಸ್ವಾಮೀಜಿ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

Kn_hvr_02_yatnal_7202143
ಬಸವನ್​ಗೌಡ ಪಾಟೀಲ್​ ಯತ್ನಾಳ್​

ಹಾವೇರಿ: ನಾನು ಎಲ್ಲರೊಂದಿಗೆ ಅಡ್ಜಸ್ಟ್ ಆಗಿದ್ದರೆ ನೀವ್ಯಾರು ಮುಖ್ಯಮಂತ್ರಿ ಆಗುತ್ತಿರಲಿಲ್ಲ ನಾನೇ ಸಿಎಂ ಆಗಿರುತ್ತಿದ್ದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯಪಟ್ಟಿದ್ದಾರೆ.

ಶಿಗ್ಗಾಂವಿ ಪಟ್ಟಣದಲ್ಲಿ ಕಿತ್ತೂರು ರಾಣೆ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಎಲ್ಲಾರೊಂದಿಗೆ ಅಡ್ಜಸ್ಟ್​ ಆದರೇ ನಾನು ಮುಖ್ಯಮಂತ್ರಿ ಆಗುತ್ತಿದೆ. ಇನ್ನು, ಪಂಚಮಸಾಲಿ ಮೀಸಲಾತಿ ಕುರಿತಂತೆ ನಿನ್ನೆ ಸಿಎಂ ಬೊಮ್ಮಾಯಿಯವರು ನಮ್ಮ ಸಮಾಜದ ಸಚಿವ ಸಿ.ಸಿ. ಪಾಟೀಲರನ್ನು ಕರೆದು ಮತ್ತೊಂದು ಅವಕಾಶ ಕೇಳಿದ್ದಾರೆ‌.

ಧ್ವನಿಯಿಲ್ಲದ ಸಮಾಜಗಳಿಗೆ ನಮ್ಮ ಸ್ವಾಮೀಜಿ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಯತ್ನಾಳ್ ತಿಳಿಸಿದರು. ಮುಂದಿನ ಹೋರಾಟದ ಕುರಿತು ಇವತ್ತು ನಿರ್ಣಯ ಮಾಡುತ್ತೇವೆ. ಮುಂದಿನ ಎರಡು ತಿಂಗಳಲ್ಲಿ 25 ಲಕ್ಷ ಜನರನ್ನು ಸೇರಿಸಿ ನಿರ್ಣಯ ಮಾಡುತ್ತೇವೆ ಎಂದು ಯತ್ನಾಳ್ ತಿಳಿಸಿದರು.

ಮೊನ್ನೆ ಸಿದ್ದರಾಮಯ್ಯನವರು ಶಕ್ತಿ ಪ್ರದರ್ಶನ ಮಾಡಿದ್ಮೇಲೆ ಜಾದೂನೆ ಬದಲಾಗಿದೆ. ನಾವೂ ಇಪ್ಪತ್ತೈದು ಲಕ್ಷ ಜನರನ್ನು ಸೇರಿಸಿ ಜಾದೂ ಮಾಡೋಣ ಒಂದು ಕೋಟಿ ಇರೋ ದೊಡ್ಡ ಸಮುದಾಯ ನಮ್ಮದು ಎಂದು ಸಿದ್ದರಾಮಯ್ಯ ಅಮೃತಮಹೋತ್ಸವವನ್ನ ಉದಾಹರಣೆಯಾಗಿ ನೀಡಿದರು.

ಇನ್ನು ನಾನು ಮೊನ್ನೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರನ್ನು ಭೇಟಿ ಆಗಿದ್ದೇನೆ. ನಮ್ಮ ಗುರುಗಳು ಬಿ.ಎಲ್. ಸಂತೋಷರನ್ನು ಭೇಟಿಯಾಗಿದ್ದೇನೆ. ಕೇಂದ್ರದವರು ಮೀಸಲಾತಿ ಕೊಡ್ತೀವಿ ಅನ್ನೋ ಭರವಸೆ ನೀಡಿದ್ದಾರೆ. ಬೊಮ್ಮಾಯಿ ಸಾಹೇಬ್ರು ಯಾತಕ್ಕೆ ತಡ ಮಾಡ್ತಿದ್ದಾರೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿನ SCSP/TSP ಅನುದಾನ ಬಳಕೆಯಲ್ಲಿ ಕಳಪೆ ಸಾಧನೆ

ಹಾವೇರಿ: ನಾನು ಎಲ್ಲರೊಂದಿಗೆ ಅಡ್ಜಸ್ಟ್ ಆಗಿದ್ದರೆ ನೀವ್ಯಾರು ಮುಖ್ಯಮಂತ್ರಿ ಆಗುತ್ತಿರಲಿಲ್ಲ ನಾನೇ ಸಿಎಂ ಆಗಿರುತ್ತಿದ್ದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯಪಟ್ಟಿದ್ದಾರೆ.

ಶಿಗ್ಗಾಂವಿ ಪಟ್ಟಣದಲ್ಲಿ ಕಿತ್ತೂರು ರಾಣೆ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಎಲ್ಲಾರೊಂದಿಗೆ ಅಡ್ಜಸ್ಟ್​ ಆದರೇ ನಾನು ಮುಖ್ಯಮಂತ್ರಿ ಆಗುತ್ತಿದೆ. ಇನ್ನು, ಪಂಚಮಸಾಲಿ ಮೀಸಲಾತಿ ಕುರಿತಂತೆ ನಿನ್ನೆ ಸಿಎಂ ಬೊಮ್ಮಾಯಿಯವರು ನಮ್ಮ ಸಮಾಜದ ಸಚಿವ ಸಿ.ಸಿ. ಪಾಟೀಲರನ್ನು ಕರೆದು ಮತ್ತೊಂದು ಅವಕಾಶ ಕೇಳಿದ್ದಾರೆ‌.

ಧ್ವನಿಯಿಲ್ಲದ ಸಮಾಜಗಳಿಗೆ ನಮ್ಮ ಸ್ವಾಮೀಜಿ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಯತ್ನಾಳ್ ತಿಳಿಸಿದರು. ಮುಂದಿನ ಹೋರಾಟದ ಕುರಿತು ಇವತ್ತು ನಿರ್ಣಯ ಮಾಡುತ್ತೇವೆ. ಮುಂದಿನ ಎರಡು ತಿಂಗಳಲ್ಲಿ 25 ಲಕ್ಷ ಜನರನ್ನು ಸೇರಿಸಿ ನಿರ್ಣಯ ಮಾಡುತ್ತೇವೆ ಎಂದು ಯತ್ನಾಳ್ ತಿಳಿಸಿದರು.

ಮೊನ್ನೆ ಸಿದ್ದರಾಮಯ್ಯನವರು ಶಕ್ತಿ ಪ್ರದರ್ಶನ ಮಾಡಿದ್ಮೇಲೆ ಜಾದೂನೆ ಬದಲಾಗಿದೆ. ನಾವೂ ಇಪ್ಪತ್ತೈದು ಲಕ್ಷ ಜನರನ್ನು ಸೇರಿಸಿ ಜಾದೂ ಮಾಡೋಣ ಒಂದು ಕೋಟಿ ಇರೋ ದೊಡ್ಡ ಸಮುದಾಯ ನಮ್ಮದು ಎಂದು ಸಿದ್ದರಾಮಯ್ಯ ಅಮೃತಮಹೋತ್ಸವವನ್ನ ಉದಾಹರಣೆಯಾಗಿ ನೀಡಿದರು.

ಇನ್ನು ನಾನು ಮೊನ್ನೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರನ್ನು ಭೇಟಿ ಆಗಿದ್ದೇನೆ. ನಮ್ಮ ಗುರುಗಳು ಬಿ.ಎಲ್. ಸಂತೋಷರನ್ನು ಭೇಟಿಯಾಗಿದ್ದೇನೆ. ಕೇಂದ್ರದವರು ಮೀಸಲಾತಿ ಕೊಡ್ತೀವಿ ಅನ್ನೋ ಭರವಸೆ ನೀಡಿದ್ದಾರೆ. ಬೊಮ್ಮಾಯಿ ಸಾಹೇಬ್ರು ಯಾತಕ್ಕೆ ತಡ ಮಾಡ್ತಿದ್ದಾರೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿನ SCSP/TSP ಅನುದಾನ ಬಳಕೆಯಲ್ಲಿ ಕಳಪೆ ಸಾಧನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.