ETV Bharat / state

ಕಲಬುರಗಿ: ಪ್ರವಾಹದಲ್ಲಿ ಸಿಲುಕಿದ್ದ 77 ಜನರ ರಕ್ಷಣೆ

author img

By

Published : Oct 15, 2020, 11:43 AM IST

ನಡುಗಡ್ಡೆಯಾಗಿ ಗ್ರಾಮ ಮತ್ತು ಇತರೆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಜಿಲ್ಲೆಯ 77 ಜನರನ್ನು ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಯ ತಂಡಗಳು ರಕ್ಷಣೆ ಮಾಡಿವೆ.

Rescue of 77 people in flood Kalaburagi District
ಪ್ರವಾಹದಲ್ಲಿ ಸಿಲುಕಿದ್ದ 77 ಜನರ ರಕ್ಷಣೆ

ಕಲಬುರಗಿ: ನಡುಗಡ್ಡೆಯಾಗಿ ಗ್ರಾಮ ಮತ್ತು ಇತರೆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ 77 ಜನರನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಮಾನವ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಚಿತ್ತಾಪೂರ ತಾಲೂಕಿನ ಮಾಲಗತ್ತಿಯಲ್ಲಿ 3, ಶಹಾಬಾದ ಪಟ್ಟಣದ ಜೆ.ಪಿ.ಕಾಲೋನಿ ಪ್ರದೇಶದ 5 ಮತ್ತು ಹಳೆ ಶಹಾಬಾದ ಪ್ರದೇಶದ 6 ಹಾಗೂ ತಾಲೂಕಿನ ಭಂಕೂರ ಗ್ರಾಮದಲ್ಲಿ ಓರ್ವರನ್ನು ರಕ್ಷಿಸಲಾಗಿದೆ. ಸೇಡಂ ತಾಲೂಕಿನಲ್ಲಿ ಸಟಪನಹಳ್ಳಿ ಗ್ರಾಮದಲ್ಲಿ 2 ಮತ್ತು ಮಳಖೇಡ್ ಗ್ರಾಮದಲ್ಲಿ 26 ಜನರನ್ನು ರಕ್ಷಣಾ ತಂಡಗಳು ಪ್ರಾಣಾಪಾಯದಿಂದ ಪಾರು ಮಾಡಿವೆ.

ಚಿಂಚೋಳಿ ತಾಲೂಕಿನ ಗಾರಂಪಳ್ಳಿಯಲ್ಲಿ 13, ಚಿಂಚೋಳಿ ಪಟ್ಟಣ 4 ಐನೊಳ್ಳಿಯಲ್ಲಿ 3 ಹಾಗೂ ಜಟ್ಟೂರು ಗ್ರಾಮದಲ್ಲಿ 14 ಜನರನ್ನು ರಕ್ಷಿಸಲಾಗಿದೆ.

ಕಳೆದ ಮೂರು,ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯ ಜನ ಹೈರಾಣಾಗಿದ್ದಾರೆ. ಮಳೆಯ ಆರ್ಭಟಕ್ಕೆ ನದಿ, ಹಳ್ಳಗಳು ತುಂಬಿದ್ದು ಮನೆಗಳಿಗೂ ಮಳೆ ನೀರು ಹೊಕ್ಕಿದೆ.

ಕಲಬುರಗಿ: ನಡುಗಡ್ಡೆಯಾಗಿ ಗ್ರಾಮ ಮತ್ತು ಇತರೆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ 77 ಜನರನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಮಾನವ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಚಿತ್ತಾಪೂರ ತಾಲೂಕಿನ ಮಾಲಗತ್ತಿಯಲ್ಲಿ 3, ಶಹಾಬಾದ ಪಟ್ಟಣದ ಜೆ.ಪಿ.ಕಾಲೋನಿ ಪ್ರದೇಶದ 5 ಮತ್ತು ಹಳೆ ಶಹಾಬಾದ ಪ್ರದೇಶದ 6 ಹಾಗೂ ತಾಲೂಕಿನ ಭಂಕೂರ ಗ್ರಾಮದಲ್ಲಿ ಓರ್ವರನ್ನು ರಕ್ಷಿಸಲಾಗಿದೆ. ಸೇಡಂ ತಾಲೂಕಿನಲ್ಲಿ ಸಟಪನಹಳ್ಳಿ ಗ್ರಾಮದಲ್ಲಿ 2 ಮತ್ತು ಮಳಖೇಡ್ ಗ್ರಾಮದಲ್ಲಿ 26 ಜನರನ್ನು ರಕ್ಷಣಾ ತಂಡಗಳು ಪ್ರಾಣಾಪಾಯದಿಂದ ಪಾರು ಮಾಡಿವೆ.

ಚಿಂಚೋಳಿ ತಾಲೂಕಿನ ಗಾರಂಪಳ್ಳಿಯಲ್ಲಿ 13, ಚಿಂಚೋಳಿ ಪಟ್ಟಣ 4 ಐನೊಳ್ಳಿಯಲ್ಲಿ 3 ಹಾಗೂ ಜಟ್ಟೂರು ಗ್ರಾಮದಲ್ಲಿ 14 ಜನರನ್ನು ರಕ್ಷಿಸಲಾಗಿದೆ.

ಕಳೆದ ಮೂರು,ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯ ಜನ ಹೈರಾಣಾಗಿದ್ದಾರೆ. ಮಳೆಯ ಆರ್ಭಟಕ್ಕೆ ನದಿ, ಹಳ್ಳಗಳು ತುಂಬಿದ್ದು ಮನೆಗಳಿಗೂ ಮಳೆ ನೀರು ಹೊಕ್ಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.