ಕಲಬುರಗಿ : ನಗರದ ಎಂಎಸ್ಐಎಲ್ ಶಾಖಾ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸರ್ದಾರ್ ಪಟೇಲ್ ವೃತ್ತದಲ್ಲಿರುವ ಎಂಎಸ್ಐಎಲ್ ಕಚೇರಿ ಮೇಲೆ ನಡೆದ ದಾಳಿ ವೇಳೆ 1.25 ಲಕ್ಷ ರೂಪಾಯಿ ಅನಧಿಕೃತ ಹಣ ಜಪ್ತಿ ಮಾಡಲಾಗಿದೆ. ಎಸಿಬಿ ಎಸ್ ಪಿ ಮಹೇಶ ಮೇಘಣ್ಣನವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಅಕ್ರಮಗಳ ಕುರಿತು ಆರೋಪಗಳು ಕೇಳಿ ಬಂದ ಹಿನ್ನೆಲೆ ದಾಳಿ ಮಾಡಲಾಗಿದೆ.
ಎಂಎಸ್ಐಎಲ್ ಶಾಖೆಯ ಮುಖ್ಯಸ್ಥ ಮತ್ತು ಸಿಬ್ಬಂದಿ ಬಳಿ ಅನಧಿಕೃತ ಮೊತ್ತ ಸಂಗ್ರಹಿಸಿರುವುದು ದಾಳಿ ವೇಳೆ ಪತ್ತೆಯಾಗಿದೆ. ಈ ಸಂಬಂಧ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ.