ETV Bharat / state

ಕಲಬುರಗಿಯಲ್ಲಿ ಶಿಷ್ಯ ವೇತನ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ:  ಎಸಿಬಿ ದಾಳಿ

author img

By

Published : May 18, 2020, 4:23 PM IST

ಶಿಷ್ಯ ವೇತನ ಮಂಜೂರು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ದ್ವಿತೀಯ ದರ್ಜೆ ಸಹಾಯಕನೊಬ್ಬನ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ACB attack
ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಮೇಲೆ ಎಸಿಬಿ ದಾಳಿ

ಕಲಬುರಗಿ: ನಗರದಲ್ಲಿ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ದ್ವಿತೀಯ ದರ್ಜೆ ಸಹಾಯಕನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಿರೇಶ್ ಬಡಿಗೇರ ಎಸಿಬಿ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕ.

ಮೋಹನದಾಸ್ MSW ಕಾಲೇಜಿನ ಕಾರ್ಯದರ್ಶಿ ಡಾ. ರಾಜಶೇಖರ್​​ ಅವರಿಂದ ಎರಡು ಸಾವಿರ ರೂಪಾಯಿಯನ್ನು ಕಚೇರಿಯಲ್ಲಿ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

MSW ಕೋರ್ಸ್​ನ ಶಿಷ್ಯ ವೇತನ ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರಂತೆ. ತಲಾ ವಿದ್ಯಾರ್ಥಿಯ ಶಿಷ್ಯ ವೇತನಕ್ಕೆ 1 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಎಸಿಬಿಗೆ ಡಾ. ರಾಜಶೇಖರ್​ ದೂರು ನೀಡಿದ್ದರು.

ಇಂದು ಕಚೇರಿಯಲ್ಲಿ ಹಣ ಪಡೆಯುವಾಗ ಎಸಿಬಿ ಡಿವೈಎಸ್​ಪಿ ಸುಧಾ ಆದಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

ಕಲಬುರಗಿ: ನಗರದಲ್ಲಿ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ದ್ವಿತೀಯ ದರ್ಜೆ ಸಹಾಯಕನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಿರೇಶ್ ಬಡಿಗೇರ ಎಸಿಬಿ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕ.

ಮೋಹನದಾಸ್ MSW ಕಾಲೇಜಿನ ಕಾರ್ಯದರ್ಶಿ ಡಾ. ರಾಜಶೇಖರ್​​ ಅವರಿಂದ ಎರಡು ಸಾವಿರ ರೂಪಾಯಿಯನ್ನು ಕಚೇರಿಯಲ್ಲಿ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

MSW ಕೋರ್ಸ್​ನ ಶಿಷ್ಯ ವೇತನ ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರಂತೆ. ತಲಾ ವಿದ್ಯಾರ್ಥಿಯ ಶಿಷ್ಯ ವೇತನಕ್ಕೆ 1 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಎಸಿಬಿಗೆ ಡಾ. ರಾಜಶೇಖರ್​ ದೂರು ನೀಡಿದ್ದರು.

ಇಂದು ಕಚೇರಿಯಲ್ಲಿ ಹಣ ಪಡೆಯುವಾಗ ಎಸಿಬಿ ಡಿವೈಎಸ್​ಪಿ ಸುಧಾ ಆದಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.