ETV Bharat / state

ನಮ್ಮ ನೋವು ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ.. ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು

author img

By

Published : Jul 21, 2020, 5:58 PM IST

ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು ಹಾಕಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ..

dsds
ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು

ಕಲಬುರಗಿ : ಸರ್ಕಾರ ನಮ್ಮ ಗೋಳು ಕೇಳುತ್ತಿಲ್ಲ ಎಂದು ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿ ಸರ್ಕಾರಕ್ಕೆ ಹಿಡಿ ಶಾಪ ಹಾಕಿದ ಘಟನೆ ನಡೆದಿದೆ.

ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು

ಮಾಸಿಕ ₹12 ಸಾವಿರ ಗೌರವ ಧನ ನೀಡಲು ಆಗ್ರಹ ಎಐಯುಟಿಯುಸಿ ನೇತೃತ್ವದಲ್ಲಿ ಚಿತ್ತಾಪುರದ ವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಷ್ಟ ತಾಳಲಾಗದೆ ನೋವು ಹೇಳಿಕೊಳ್ಳುತ್ತಾ ಆಶಾಕಾರ್ಯಕರ್ತೆ ಕಣ್ಣೀರಿಟ್ಟಿದ್ದಾರೆ. ಕೊರೊನಾ ಸೋಂಕಿನ ವೇಳೆ ಹಗಲಿರುಳು ದುಡಿಯುತ್ತಿದ್ದೇವೆ. ಆದರೂ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗುತ್ತಿಲ್ಲ.

ಈ ಕುರಿತು ಸರ್ಕಾರಕ್ಕೆ ಹತ್ತು ಬಾರಿ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಆಶಾ ಕಾರ್ಯಕರ್ತೆ ಅಳಲು ತೋಡಿಕೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಕೆಲಸ ಮುಂದುವರಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಕಲಬುರಗಿ : ಸರ್ಕಾರ ನಮ್ಮ ಗೋಳು ಕೇಳುತ್ತಿಲ್ಲ ಎಂದು ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿ ಸರ್ಕಾರಕ್ಕೆ ಹಿಡಿ ಶಾಪ ಹಾಕಿದ ಘಟನೆ ನಡೆದಿದೆ.

ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು

ಮಾಸಿಕ ₹12 ಸಾವಿರ ಗೌರವ ಧನ ನೀಡಲು ಆಗ್ರಹ ಎಐಯುಟಿಯುಸಿ ನೇತೃತ್ವದಲ್ಲಿ ಚಿತ್ತಾಪುರದ ವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಷ್ಟ ತಾಳಲಾಗದೆ ನೋವು ಹೇಳಿಕೊಳ್ಳುತ್ತಾ ಆಶಾಕಾರ್ಯಕರ್ತೆ ಕಣ್ಣೀರಿಟ್ಟಿದ್ದಾರೆ. ಕೊರೊನಾ ಸೋಂಕಿನ ವೇಳೆ ಹಗಲಿರುಳು ದುಡಿಯುತ್ತಿದ್ದೇವೆ. ಆದರೂ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗುತ್ತಿಲ್ಲ.

ಈ ಕುರಿತು ಸರ್ಕಾರಕ್ಕೆ ಹತ್ತು ಬಾರಿ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಆಶಾ ಕಾರ್ಯಕರ್ತೆ ಅಳಲು ತೋಡಿಕೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಕೆಲಸ ಮುಂದುವರಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.