ETV Bharat / state

2ಎ ಮೀಸಲಾತಿಗಾಗಿ ಮತ್ತೆ ಹೋರಾಟಕ್ಕಿಳಿಯುವ ಎಚ್ಚರಿಕೆ ನೀಡಿದ ಪಂಚಮಸಾಲಿ ಸಮುದಾಯ

author img

By

Published : Sep 15, 2021, 5:29 PM IST

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಮತ್ತೆ ಸದ್ದು ಮಾಡಿದೆ. 6 ತಿಂಗಳವರೆಗೆ ಕಲಾವಕಾಶ ಕೇಳಿದ್ದ ಸರ್ಕಾರ ಕೊನೆಗೂ ಮೀಸಲಾತಿ ಘೋಷಿಸಿಲ್ಲ. ಹೀಗಾಗಿ, ಮತ್ತೆ ಹೋರಾಟ ನಡೆಸುವ ಸುಳಿವು ನೀಡಿದೆ ಪಂಚಮಸಾಲಿ ಸಮುದಾಯ..

Basava jayamrutyunjaya swamiji on 2a reservation
2ಎ ಮೀಸಲಾತಿ ನೀಡದಿದ್ದರೆ ಪಂಚಮಸಾಲಿ ಸಮುದಾಯದಿಂದ ಮತ್ತೆ ಹೋರಾಟದ ಎಚ್ಚರಿಕೆ

ಕಲಬುರಗಿ : 2ಎ ಮೀಸಲಾತಿ ನೀಡಲು ಸರ್ಕಾರಕ್ಕೆ ನೀಡಲಾಗಿದ್ದ ಅವಧಿ ಅಂತ್ಯವಾಗಿರುವ ಹಿನ್ನೆಲೆ ಕಲಬುರಗಿ ನಗರದಲ್ಲಿ ಶ್ರೀ ಬಸವ ಜಯಮೃತ್ಯಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಎತ್ತಿನಬಂಡಿ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಎತ್ತಿನಬಂಡಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ 2ಎ ಮೀಸಲಾತಿ ಘೋಷಿಸುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಬಸವ ಜಯಮೃತ್ಯಂಜಯ ಸ್ವಾಮೀಜಿ‌, ಜನವರಿ 14, 2021ರಂದು 2ಎ ಮೀಸಲಾತಿಗಾಗಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ 712 ಕಿ.ಮೀ ಪಾದಯಾತ್ರೆ ಮತ್ತು 21 ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಧರಣಿ ನಡೆಸಲಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು 6 ತಿಂಗಳ ಕಾಲಾವಕಾಶ ಕೇಳಿ 2ಎ ಮೀಸಲಾತಿ ನೀಡುವ ಭರವಸೆ ನೀಡಿದ್ದರು.

ಇದಾದ ಬಳಿಕ ಧರಣಿಯನ್ನು ಕೈಬಿಡಲಾಗಿತ್ತು. ಆದರೀಗ ಭರವಸೆಯಂತೆ 6 ತಿಂಗಳ ಅವಧಿ ಇಂದಿಗೆ ಮುಕ್ತಾಯವಾಗಿದೆ. ಹೀಗಾಗಿ, ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಲಿ. ಸಾಮಾಜಿಕ ನ್ಯಾಯಕ್ಕಾಗಿ ದೀಕ್ಷ ಪಂಚಮಸಾಲಿ ಹಾಗೂ ಲಿಂಗಾಯತ ಒಳಪಂಗಡಗಳಿಗೆ 2ಎ ಮೀಸಲಾದ ಘೋಷಣೆ ಮಾಡಬೇಕು.

ಒಂದು ವೇಳೆ 2ಎ ಮೀಸಲಾತಿ ನೀಡದೆ ಮೊಂಡುತನ ಪ್ರದರ್ಶಿಸಿಸಿದರೆ ಅ.1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್​​​​ನಲ್ಲಿ ಉಗ್ರ ಸ್ವರೂಪದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ಸಂಬರಗಿ ವಿರುದ್ಧ ಬಿಗ್​ಬಾಸ್​ ಸ್ಫರ್ಧಿ ಚಕ್ರವರ್ತಿ ಚಂದ್ರಚೂಡ್ ದೂರು..

ಕಲಬುರಗಿ : 2ಎ ಮೀಸಲಾತಿ ನೀಡಲು ಸರ್ಕಾರಕ್ಕೆ ನೀಡಲಾಗಿದ್ದ ಅವಧಿ ಅಂತ್ಯವಾಗಿರುವ ಹಿನ್ನೆಲೆ ಕಲಬುರಗಿ ನಗರದಲ್ಲಿ ಶ್ರೀ ಬಸವ ಜಯಮೃತ್ಯಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಎತ್ತಿನಬಂಡಿ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಎತ್ತಿನಬಂಡಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ 2ಎ ಮೀಸಲಾತಿ ಘೋಷಿಸುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಬಸವ ಜಯಮೃತ್ಯಂಜಯ ಸ್ವಾಮೀಜಿ‌, ಜನವರಿ 14, 2021ರಂದು 2ಎ ಮೀಸಲಾತಿಗಾಗಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ 712 ಕಿ.ಮೀ ಪಾದಯಾತ್ರೆ ಮತ್ತು 21 ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಧರಣಿ ನಡೆಸಲಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು 6 ತಿಂಗಳ ಕಾಲಾವಕಾಶ ಕೇಳಿ 2ಎ ಮೀಸಲಾತಿ ನೀಡುವ ಭರವಸೆ ನೀಡಿದ್ದರು.

ಇದಾದ ಬಳಿಕ ಧರಣಿಯನ್ನು ಕೈಬಿಡಲಾಗಿತ್ತು. ಆದರೀಗ ಭರವಸೆಯಂತೆ 6 ತಿಂಗಳ ಅವಧಿ ಇಂದಿಗೆ ಮುಕ್ತಾಯವಾಗಿದೆ. ಹೀಗಾಗಿ, ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಲಿ. ಸಾಮಾಜಿಕ ನ್ಯಾಯಕ್ಕಾಗಿ ದೀಕ್ಷ ಪಂಚಮಸಾಲಿ ಹಾಗೂ ಲಿಂಗಾಯತ ಒಳಪಂಗಡಗಳಿಗೆ 2ಎ ಮೀಸಲಾದ ಘೋಷಣೆ ಮಾಡಬೇಕು.

ಒಂದು ವೇಳೆ 2ಎ ಮೀಸಲಾತಿ ನೀಡದೆ ಮೊಂಡುತನ ಪ್ರದರ್ಶಿಸಿಸಿದರೆ ಅ.1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್​​​​ನಲ್ಲಿ ಉಗ್ರ ಸ್ವರೂಪದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ಸಂಬರಗಿ ವಿರುದ್ಧ ಬಿಗ್​ಬಾಸ್​ ಸ್ಫರ್ಧಿ ಚಕ್ರವರ್ತಿ ಚಂದ್ರಚೂಡ್ ದೂರು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.