ETV Bharat / state

ಪ್ರವಾಹ ಸ್ಥಿತಿ ಎದುರಿಸಲು ಸರ್ವಸನ್ನದ್ಧರಾಗಿ : ಅಧಿಕಾರಿಗಳಿಗೆ ಸಚಿವ ಮುರುಗೇಶ್ ನಿರಾಣಿ ಸೂಚನೆ

ಪುರುಷರು, ಮಹಿಳೆಯರು, 60 ವರ್ಷ ಮೇಲ್ಪಟ್ಟ ವಯಸ್ಕರು, ಗರ್ಭಿಣಿಯರು ಹಾಗೂ ಜಾನುವಾರುಗಳ ಮಾಹಿತಿಯನ್ನು ಪಡೆದುಕೊಂಡು ಒಂದು ವೇಳೆ ಪ್ರವಾಹ ಉಂಟಾದಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಯನ್ನು ಮಾಡಬೇಕು. ಜೊತೆಗೆ ಜಿಲ್ಲೆಯಲ್ಲಿ ನಡುಗಡ್ಡೆ ಇದ್ದಲ್ಲಿ ಅಂತಹ ಸ್ಥಳಗಳಲ್ಲಿ ವಾಸವಾಗಿರುವ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು..

author img

By

Published : Jun 19, 2021, 9:32 PM IST

nirani
nirani

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಜೊತೆ ಮುಂಗಾರು ಪ್ರವಾಹ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಈಗಾಗಲೇ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಅನೇಕ ಕಡೆ ನದಿ, ಹಳ್ಳಕೊಳ್ಳ ತುಂಬಿ ಹರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಕಲಬುರಗಿಯಲ್ಲೂ ನೆರೆ ಹಾವಳಿ ಉಂಟಾಗದಂತೆ ತಕ್ಷಣವೇ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮೆಲೆಕ್ಕಿಗರು, ಕಂದಾಯ ನೀರಿಕ್ಷಕರು ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಹೂಡಿ ಪರಿಸ್ಥಿತಿಯನ್ನು ನಿಭಾಯಿಸಬೇಕು. ಕಾಳಜಿ ಕೇಂದ್ರಕ್ಕೆ ಬರುವ ನಿರಾಶ್ರಿತ ಜನರಿಗೆ ಸರ್ಕಾರ ಹೊರಡಿಸಲಾಗಿರುವ ಕೋವಿಡ್-19 ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಲಹೆ ನೀಡಿದ್ರು.

ಪ್ರವಾಹ ಸಂದರ್ಭದಲ್ಲಿ ಕಾಳಜಿ ಕೆಂದ್ರಗಳನ್ನು ತೆರೆಯಬೇಕಾದಲ್ಲಿ ಬಿಸಿಎಂ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ಉಪಯೋಗಿಸಲು ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳ ಮಾಹಿತಿಯನ್ನು ಪಡೆದುಕೊಂಡು ಮೂಲಸೌಕರ್ಯವನ್ನು ಒದಗಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಿದರು. ಜೊತೆಗೆ ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಅಗತ್ಯವಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಅವಶ್ಯಕತೆ ಇರುವ ಎಲ್ಲಾ ರೀತಿ ಸಲಕರಣೆಗಳು, ಔಷಧಿಗಳನ್ನು ಸಂಗ್ರಹಿಸಿಡಬೇಕೆಂದು ಹೇಳಿದರು.

ಪುರುಷರು, ಮಹಿಳೆಯರು, 60 ವರ್ಷ ಮೇಲ್ಪಟ್ಟ ವಯಸ್ಕರು, ಗರ್ಭಿಣಿಯರು ಹಾಗೂ ಜಾನುವಾರುಗಳ ಮಾಹಿತಿಯನ್ನು ಪಡೆದುಕೊಂಡು ಒಂದು ವೇಳೆ ಪ್ರವಾಹ ಉಂಟಾದಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಯನ್ನು ಮಾಡಬೇಕು. ಜೊತೆಗೆ ಜಿಲ್ಲೆಯಲ್ಲಿ ನಡುಗಡ್ಡೆ ಇದ್ದಲ್ಲಿ ಅಂತಹ ಸ್ಥಳಗಳಲ್ಲಿ ವಾಸವಾಗಿರುವ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಆಹಾರ ಇಲಾಖೆಯವರು, ಕಾಳಜಿ ಕೇಂದ್ರಗಳಲ್ಲಿ ಊಟದ ವ್ಯವಸ್ಥೆ, ಅಡುಗೆ ಮಾಡಲು ಅನಿಲ ವ್ಯವಸ್ಥೆ, ಅಡುಗೆ ಮಾಡುವವರು, ಜಾನುವಾರುಗಳಿಗೆ ಶೆಡ್ ವ್ಯವಸ್ಥೆ, ಆಸ್ಪತ್ರೆಗಳ ವ್ಯವಸ್ಥೆ, ಸಾಗಾಣಿಕೆ, ಸಾಮಾಜಿಕ ಅಂತರದೊಂದಿಗೆ ಮಾಡುವುದು ಹಾಗೂ ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯವರು ಜನೆರೇಟರ್ ವ್ಯವಸ್ಥೆ ಮಾಡುವಂತೆ ಸಭೆಯ ಗಮನಕ್ಕೆ ತಂದರು ಮತ್ತು ತುರ್ತು ಸಂದರ್ಭದಲ್ಲಿ 5 ಅಧಿಕಾರಿಗಳುಳ್ಳ ಟಾಸ್ಕ್ ಪೋರ್ಸ್​​ ಸಮಿತಿ ರಚಿಸಿ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಿರುವ ನೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿಕೊಳ್ಳಲು ಸಂಬಂಧಪಟ್ಟ ಎಲ್ಲರೂ ಸಜ್ಜಾಗಬೇಕೆಂದು ಸೂಚನೆ ನೀಡಿದರು. ಪ್ರವಾಹ ಪರಿಸ್ಥಿತಿಗೊಳಗಾದ ಗ್ರಾಮಗಳ ನಿರಾಶ್ರಿತರು ಕಾಳಜಿ ಕೇಂದ್ರಕ್ಕೆ ಬರಬೇಕಾಗಿರುವುದರಿಂದ ತಾಲೂಕು ಕೇಂದ್ರಗಳಲ್ಲಿ 200 ಕಿಟ್‍ಗಳ ತಯಾರಿಕೆ, ಗ್ರಾಮದ ರಸ್ತೆ ಸಂಪೂರ್ಣ ಮುಳುಗಡೆಯಾದಾಗ ಪರ್ಯಾಯ ಮಾರ್ಗವಾಗಿ ಗ್ರಾಮಕ್ಕೆ ಸಂಪರ್ಕ ಸಾಧಿಸಲು ಬೇರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ತಾಕೀತು ಮಾಡಿದರು.

ಭೀಮಾ ಏತ ನೀರಾವರಿ ಯೋಜನೆಯ ಅಫಜಲಪುರದ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಮಹಾರಾಷ್ಟ್ರ ರಾಜ್ಯದಿಂದ ಭೀಮಾ ನದಿಗೆ ನೀರು ಬಿಡುವ ಜಲಾಶಯದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯಬೇಕು ಎಂದು ಸೂಚಿಸಿದ್ರು.

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಜೊತೆ ಮುಂಗಾರು ಪ್ರವಾಹ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಈಗಾಗಲೇ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಅನೇಕ ಕಡೆ ನದಿ, ಹಳ್ಳಕೊಳ್ಳ ತುಂಬಿ ಹರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಕಲಬುರಗಿಯಲ್ಲೂ ನೆರೆ ಹಾವಳಿ ಉಂಟಾಗದಂತೆ ತಕ್ಷಣವೇ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮೆಲೆಕ್ಕಿಗರು, ಕಂದಾಯ ನೀರಿಕ್ಷಕರು ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಹೂಡಿ ಪರಿಸ್ಥಿತಿಯನ್ನು ನಿಭಾಯಿಸಬೇಕು. ಕಾಳಜಿ ಕೇಂದ್ರಕ್ಕೆ ಬರುವ ನಿರಾಶ್ರಿತ ಜನರಿಗೆ ಸರ್ಕಾರ ಹೊರಡಿಸಲಾಗಿರುವ ಕೋವಿಡ್-19 ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಲಹೆ ನೀಡಿದ್ರು.

ಪ್ರವಾಹ ಸಂದರ್ಭದಲ್ಲಿ ಕಾಳಜಿ ಕೆಂದ್ರಗಳನ್ನು ತೆರೆಯಬೇಕಾದಲ್ಲಿ ಬಿಸಿಎಂ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ಉಪಯೋಗಿಸಲು ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳ ಮಾಹಿತಿಯನ್ನು ಪಡೆದುಕೊಂಡು ಮೂಲಸೌಕರ್ಯವನ್ನು ಒದಗಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಿದರು. ಜೊತೆಗೆ ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಅಗತ್ಯವಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಅವಶ್ಯಕತೆ ಇರುವ ಎಲ್ಲಾ ರೀತಿ ಸಲಕರಣೆಗಳು, ಔಷಧಿಗಳನ್ನು ಸಂಗ್ರಹಿಸಿಡಬೇಕೆಂದು ಹೇಳಿದರು.

ಪುರುಷರು, ಮಹಿಳೆಯರು, 60 ವರ್ಷ ಮೇಲ್ಪಟ್ಟ ವಯಸ್ಕರು, ಗರ್ಭಿಣಿಯರು ಹಾಗೂ ಜಾನುವಾರುಗಳ ಮಾಹಿತಿಯನ್ನು ಪಡೆದುಕೊಂಡು ಒಂದು ವೇಳೆ ಪ್ರವಾಹ ಉಂಟಾದಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಯನ್ನು ಮಾಡಬೇಕು. ಜೊತೆಗೆ ಜಿಲ್ಲೆಯಲ್ಲಿ ನಡುಗಡ್ಡೆ ಇದ್ದಲ್ಲಿ ಅಂತಹ ಸ್ಥಳಗಳಲ್ಲಿ ವಾಸವಾಗಿರುವ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಆಹಾರ ಇಲಾಖೆಯವರು, ಕಾಳಜಿ ಕೇಂದ್ರಗಳಲ್ಲಿ ಊಟದ ವ್ಯವಸ್ಥೆ, ಅಡುಗೆ ಮಾಡಲು ಅನಿಲ ವ್ಯವಸ್ಥೆ, ಅಡುಗೆ ಮಾಡುವವರು, ಜಾನುವಾರುಗಳಿಗೆ ಶೆಡ್ ವ್ಯವಸ್ಥೆ, ಆಸ್ಪತ್ರೆಗಳ ವ್ಯವಸ್ಥೆ, ಸಾಗಾಣಿಕೆ, ಸಾಮಾಜಿಕ ಅಂತರದೊಂದಿಗೆ ಮಾಡುವುದು ಹಾಗೂ ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯವರು ಜನೆರೇಟರ್ ವ್ಯವಸ್ಥೆ ಮಾಡುವಂತೆ ಸಭೆಯ ಗಮನಕ್ಕೆ ತಂದರು ಮತ್ತು ತುರ್ತು ಸಂದರ್ಭದಲ್ಲಿ 5 ಅಧಿಕಾರಿಗಳುಳ್ಳ ಟಾಸ್ಕ್ ಪೋರ್ಸ್​​ ಸಮಿತಿ ರಚಿಸಿ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಿರುವ ನೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿಕೊಳ್ಳಲು ಸಂಬಂಧಪಟ್ಟ ಎಲ್ಲರೂ ಸಜ್ಜಾಗಬೇಕೆಂದು ಸೂಚನೆ ನೀಡಿದರು. ಪ್ರವಾಹ ಪರಿಸ್ಥಿತಿಗೊಳಗಾದ ಗ್ರಾಮಗಳ ನಿರಾಶ್ರಿತರು ಕಾಳಜಿ ಕೇಂದ್ರಕ್ಕೆ ಬರಬೇಕಾಗಿರುವುದರಿಂದ ತಾಲೂಕು ಕೇಂದ್ರಗಳಲ್ಲಿ 200 ಕಿಟ್‍ಗಳ ತಯಾರಿಕೆ, ಗ್ರಾಮದ ರಸ್ತೆ ಸಂಪೂರ್ಣ ಮುಳುಗಡೆಯಾದಾಗ ಪರ್ಯಾಯ ಮಾರ್ಗವಾಗಿ ಗ್ರಾಮಕ್ಕೆ ಸಂಪರ್ಕ ಸಾಧಿಸಲು ಬೇರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ತಾಕೀತು ಮಾಡಿದರು.

ಭೀಮಾ ಏತ ನೀರಾವರಿ ಯೋಜನೆಯ ಅಫಜಲಪುರದ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಮಹಾರಾಷ್ಟ್ರ ರಾಜ್ಯದಿಂದ ಭೀಮಾ ನದಿಗೆ ನೀರು ಬಿಡುವ ಜಲಾಶಯದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯಬೇಕು ಎಂದು ಸೂಚಿಸಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.