ETV Bharat / state

ಮೊಬೈಲ್​ ವಿಷಯಕ್ಕೆ ಮನೆಯಲ್ಲಿ ಗಲಾಟೆ: ಬಾವಿಗೆ ಹಾರಿ ಸಹೋದರರು ಆತ್ಮಹತ್ಯೆ

author img

By

Published : Jan 4, 2021, 8:01 PM IST

ಮೊಬೈಲ್ ವಿಚಾರವಾಗಿ ಮನೆಯಲ್ಲಿ ಜಗಳವಾಡಿದ ಸಹೋದರರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಬ್ಬರಿಗೂ ಈಜು ಬರುತ್ತಿದ್ದ ಕಾರಣ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿರುವುದು ಬೆಳಕಿಗೆ ಬಂದಿದೆ.

brothers-commit-suicide-by-jumping-into-a-well-for-mobile-issue
ಬಾವಿಗೆ ಹಾರಿ ಸಹೋದರರು ಆತ್ಮಹತ್ಯೆ

ಕಲಬುರಗಿ: ಮೊಬೈಲ್ ವಿಷಯವಾಗಿ ಹೆತ್ತವರ ಜೊತೆ ಜಗಳವಾಡಿಕೊಂಡಿದ್ದ ಇಬ್ಬರು ಸಹೋದರರು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ.

ಬಾವಿಗೆ ಹಾರಿ ಸಹೋದರರು ಆತ್ಮಹತ್ಯೆ

ಸುನೀಲ್ (17), ಶೇಖರ್ (12) ಆತ್ಮಹತ್ಯೆಗೆ ಶರಣಾದ ಸಹೋದರರು. ಹೊಸ ಮೊಬೈಲ್ ವಿಷಯವಾಗಿ ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳವಾಡಿದ್ದ ಸಹೋದರರು, ನೇರವಾಗಿ ಹೊಲಕ್ಕೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಈಜು ಬರುತ್ತಿತ್ತು. ಹೀಗಾಗಿ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

brothers-commit-suicide-by-jumping-into-a-well-for-mobile-issue
ಆತ್ಮಹತ್ಯೆ ಮಾಡಿಕೊಂಡ ಸಹೋದರರು

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೇಹಗಳನ್ನು ಹೊರತೆಗೆದಿದ್ದು, ಈ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೆಲ್ಯಾಡಿ : ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

ಕಲಬುರಗಿ: ಮೊಬೈಲ್ ವಿಷಯವಾಗಿ ಹೆತ್ತವರ ಜೊತೆ ಜಗಳವಾಡಿಕೊಂಡಿದ್ದ ಇಬ್ಬರು ಸಹೋದರರು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ.

ಬಾವಿಗೆ ಹಾರಿ ಸಹೋದರರು ಆತ್ಮಹತ್ಯೆ

ಸುನೀಲ್ (17), ಶೇಖರ್ (12) ಆತ್ಮಹತ್ಯೆಗೆ ಶರಣಾದ ಸಹೋದರರು. ಹೊಸ ಮೊಬೈಲ್ ವಿಷಯವಾಗಿ ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳವಾಡಿದ್ದ ಸಹೋದರರು, ನೇರವಾಗಿ ಹೊಲಕ್ಕೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಈಜು ಬರುತ್ತಿತ್ತು. ಹೀಗಾಗಿ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

brothers-commit-suicide-by-jumping-into-a-well-for-mobile-issue
ಆತ್ಮಹತ್ಯೆ ಮಾಡಿಕೊಂಡ ಸಹೋದರರು

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೇಹಗಳನ್ನು ಹೊರತೆಗೆದಿದ್ದು, ಈ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೆಲ್ಯಾಡಿ : ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.