ETV Bharat / state

₹46 ಲಕ್ಷ ಭ್ರಷ್ಟಾಚಾರ ಆರೋಪ: ಪಿಡಿಒ ವಿರುದ್ಧ ಪ್ರಕರಣ ದಾಖಲು - ಓಕಳಿ ಗ್ರಾಮ ಪಂಚಾಯಿತಿ ಪಿಡಿಒ

Corruption case against PDO: ಅನುದಾನ ದುರುಪಯೋಗ ಆರೋಪದಡಿ ಪಿಡಿಒ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Etv Bharat
Etv Bharat
author img

By ETV Bharat Karnataka Team

Published : Dec 3, 2023, 8:17 AM IST

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕಲಬುರಗಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ. ಕಮಲಾಪುರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಅಂಬರೇಶ ಪಾಟೀಲ ಅವರು ನೀಡಿದ ದೂರಿನ ಮೇರೆಗೆ ಪಿಡಿಒ ಪ್ರವೀಣ ಕುಮಾರ ವಿರುದ್ಧ ಪ್ರಕರಣ ದಾಖಲಾಗಿದೆ.

ತಾ.ಪಂ. ಇಒ ನೀಡಿದ ದೂರಿನ ವಿವರ: ಪಿಡಿಒ ಪ್ರವೀಣ ಕುಮಾರ 15ನೇ ಹಣಕಾಸಿನ ಅನುದಾನದಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ. ಕಾಮಗಾರಿ ಕೈಗೊಳ್ಳದೆ, ಸಲಕರಣೆಗಳನ್ನು ಖರೀದಿಸದೆ ಸುಳ್ಳು ದಾಖಲಾತಿ ಸೃಷ್ಠಿಸಿ ₹46 ಲಕ್ಷ ಹಣ ದುರುಪಯೋಗ ಮಾಡಿದ್ದಾರೆ ಎಂಬ ಆರೋಪ ಇದೆ. ಇದೇ ಕಾರಣಕ್ಕೆ ಪಿಡಿಒ ಪ್ರವೀಣಕುಮಾರ, ಅಧ್ಯಕ್ಷೆ ಅಲ್ಕಾ ನರೋಣಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಹುದ್ದೆಯಿಂದ ವಜಾಗೊಳಿಸುವಂತೆ ಓಕಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯ ಕುಮಾರ ಶೆಟ್ಟಿ ಹಾಗೂ ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ ದೂರು ನೀಡಿದ್ದರು.

ಈ ಕುರಿತು ತನಿಖೆ ನಡೆಸಲು ತನಿಖಾ ತಂಡ ರಚಿಸಲಾಗಿತ್ತು. ಈ ತಂಡ ಕಳೆದ ಅ.23ರಂದು ಓಕಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿತ್ತು. ದೂರಿಗೆ ಸಂಬಂಧಿಸಿದ ಮಾಹಿತಿ ಕುರಿತು ವಿಚಾರಿಸಿದರೆ ಅನಾರೋಗ್ಯದ ನೆಪವೊಡ್ಡಿ ಪಿಡಿಒ ಪ್ರವಿಣ ಕುಮಾರ 8 ದಿನಗಳ ಕಾಲಾವಕಾಶ ಕೋರಿದ್ದರು. ಐದು ದಿನ ಮುಂದೂಡಿ, ದೂರಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ಕ್ರಿಯಾಯೋಜನೆ ಮೂಲಪ್ರತಿ, ನಗದು ಪುಸ್ತಕ, ಕಾಮಗಾರಿ ಓಚರ್‌ ಕಡತಗಳ ಜೊತೆಗೆ ಪೂರಕ ದಾಖಲೆಗಳಸಹಿತ ಖುದ್ದಾಗಿ ಹಾಜರಾಗಲು ಹಾಗೂ ತನಿಖೆಗೆ ಸಹಕರಿಸಲು ತಿಳಿಸಲಾಗಿತ್ತು.

ತನಿಖಾ ತಂಡ ಅ.28ರಂದು ಭೇಟಿ ನೀಡಿ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ತಿಳಿಸಲಾಗಿತ್ತು. ಸಂಬಂಧಿಸಿದ ದಾಖಲೆ ಸ್ಥಳೀಯ ಲೆಕ್ಕ ಪರಿಶೋಧನೆಯಲ್ಲಿದ್ದು, ಸಾದರಪಡಿಸಲು 8 ದಿನಗಳ ಕಾಲಾವಕಾಶ ನೀಡುವಂತೆ ಕೋರಿದರು. ಮತ್ತೆ ವಿಚಾರಣೆ ಮುಂದೂಡಲಾಯಿತು. ಅನೇಕ ಬಾರಿ ಕರೆ ಮಾಡಿ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ನಂತರ ದೂರವಾಣಿ ಕರೆ ಸ್ವೀಕರಿಸಿಲ್ಲ. ಸಾಕಷ್ಟು ಸಮಯಾವಕಾಶ ನೀಡಿದರೂ ಈವರೆಗೆ ದೂರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿಲ್ಲ. ದಾಖಲೆಗಳನ್ನು ಸಲ್ಲಿಸಲು ಹಿಂಜರಿಯುತ್ತಿರುವ ಪಿಡಿಒ ಪ್ರವೀಣಕುಮಾರ ಅನುದಾನ ದುರುಪಯೋಗ ಪಡಿಸಿಕೊಂಡಿದ್ದಾರೆಂದು ತನಿಖಾ ವರದಿಯಿಂದ ಕಂಡು ಬಂದಿರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ ಕಾಯ್ದೆ 1993 ಸೆಕ್ಷೆನ್‌ 157 ಮತ್ತು 246 ಅಡಿಯಲ್ಲಿ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಮೊಕದಮ್ಮೆ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದರು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬರೇಶ ಪಾಟೀಲ ದೂರಿನಲ್ಲಿ ವಿವರಿಸಿದ್ದಾರೆ.

ಸದ್ಯ ಐಪಿಸಿ 406, 409, 420, 465, 468 ಮತ್ತು ಕರ್ನಾಟಕ ಗ್ರಾಮಸ್ವರಾಜ ಪಂಚಾಯತ ರಾಜ ಕಾಯ್ದೆ ಕಲಂ 246 ಅಡಿಯಲ್ಲಿ ಪ್ರವೀಣಕುಮಾರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಅವ್ಯವಹಾರ; ಪ್ರಕರಣ ದಾಖಲು

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕಲಬುರಗಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ. ಕಮಲಾಪುರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಅಂಬರೇಶ ಪಾಟೀಲ ಅವರು ನೀಡಿದ ದೂರಿನ ಮೇರೆಗೆ ಪಿಡಿಒ ಪ್ರವೀಣ ಕುಮಾರ ವಿರುದ್ಧ ಪ್ರಕರಣ ದಾಖಲಾಗಿದೆ.

ತಾ.ಪಂ. ಇಒ ನೀಡಿದ ದೂರಿನ ವಿವರ: ಪಿಡಿಒ ಪ್ರವೀಣ ಕುಮಾರ 15ನೇ ಹಣಕಾಸಿನ ಅನುದಾನದಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ. ಕಾಮಗಾರಿ ಕೈಗೊಳ್ಳದೆ, ಸಲಕರಣೆಗಳನ್ನು ಖರೀದಿಸದೆ ಸುಳ್ಳು ದಾಖಲಾತಿ ಸೃಷ್ಠಿಸಿ ₹46 ಲಕ್ಷ ಹಣ ದುರುಪಯೋಗ ಮಾಡಿದ್ದಾರೆ ಎಂಬ ಆರೋಪ ಇದೆ. ಇದೇ ಕಾರಣಕ್ಕೆ ಪಿಡಿಒ ಪ್ರವೀಣಕುಮಾರ, ಅಧ್ಯಕ್ಷೆ ಅಲ್ಕಾ ನರೋಣಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಹುದ್ದೆಯಿಂದ ವಜಾಗೊಳಿಸುವಂತೆ ಓಕಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯ ಕುಮಾರ ಶೆಟ್ಟಿ ಹಾಗೂ ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ ದೂರು ನೀಡಿದ್ದರು.

ಈ ಕುರಿತು ತನಿಖೆ ನಡೆಸಲು ತನಿಖಾ ತಂಡ ರಚಿಸಲಾಗಿತ್ತು. ಈ ತಂಡ ಕಳೆದ ಅ.23ರಂದು ಓಕಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿತ್ತು. ದೂರಿಗೆ ಸಂಬಂಧಿಸಿದ ಮಾಹಿತಿ ಕುರಿತು ವಿಚಾರಿಸಿದರೆ ಅನಾರೋಗ್ಯದ ನೆಪವೊಡ್ಡಿ ಪಿಡಿಒ ಪ್ರವಿಣ ಕುಮಾರ 8 ದಿನಗಳ ಕಾಲಾವಕಾಶ ಕೋರಿದ್ದರು. ಐದು ದಿನ ಮುಂದೂಡಿ, ದೂರಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ಕ್ರಿಯಾಯೋಜನೆ ಮೂಲಪ್ರತಿ, ನಗದು ಪುಸ್ತಕ, ಕಾಮಗಾರಿ ಓಚರ್‌ ಕಡತಗಳ ಜೊತೆಗೆ ಪೂರಕ ದಾಖಲೆಗಳಸಹಿತ ಖುದ್ದಾಗಿ ಹಾಜರಾಗಲು ಹಾಗೂ ತನಿಖೆಗೆ ಸಹಕರಿಸಲು ತಿಳಿಸಲಾಗಿತ್ತು.

ತನಿಖಾ ತಂಡ ಅ.28ರಂದು ಭೇಟಿ ನೀಡಿ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ತಿಳಿಸಲಾಗಿತ್ತು. ಸಂಬಂಧಿಸಿದ ದಾಖಲೆ ಸ್ಥಳೀಯ ಲೆಕ್ಕ ಪರಿಶೋಧನೆಯಲ್ಲಿದ್ದು, ಸಾದರಪಡಿಸಲು 8 ದಿನಗಳ ಕಾಲಾವಕಾಶ ನೀಡುವಂತೆ ಕೋರಿದರು. ಮತ್ತೆ ವಿಚಾರಣೆ ಮುಂದೂಡಲಾಯಿತು. ಅನೇಕ ಬಾರಿ ಕರೆ ಮಾಡಿ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ನಂತರ ದೂರವಾಣಿ ಕರೆ ಸ್ವೀಕರಿಸಿಲ್ಲ. ಸಾಕಷ್ಟು ಸಮಯಾವಕಾಶ ನೀಡಿದರೂ ಈವರೆಗೆ ದೂರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿಲ್ಲ. ದಾಖಲೆಗಳನ್ನು ಸಲ್ಲಿಸಲು ಹಿಂಜರಿಯುತ್ತಿರುವ ಪಿಡಿಒ ಪ್ರವೀಣಕುಮಾರ ಅನುದಾನ ದುರುಪಯೋಗ ಪಡಿಸಿಕೊಂಡಿದ್ದಾರೆಂದು ತನಿಖಾ ವರದಿಯಿಂದ ಕಂಡು ಬಂದಿರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ ಕಾಯ್ದೆ 1993 ಸೆಕ್ಷೆನ್‌ 157 ಮತ್ತು 246 ಅಡಿಯಲ್ಲಿ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಮೊಕದಮ್ಮೆ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದರು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬರೇಶ ಪಾಟೀಲ ದೂರಿನಲ್ಲಿ ವಿವರಿಸಿದ್ದಾರೆ.

ಸದ್ಯ ಐಪಿಸಿ 406, 409, 420, 465, 468 ಮತ್ತು ಕರ್ನಾಟಕ ಗ್ರಾಮಸ್ವರಾಜ ಪಂಚಾಯತ ರಾಜ ಕಾಯ್ದೆ ಕಲಂ 246 ಅಡಿಯಲ್ಲಿ ಪ್ರವೀಣಕುಮಾರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಅವ್ಯವಹಾರ; ಪ್ರಕರಣ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.