ETV Bharat / state

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಬಿಎಸ್​​ವೈ

author img

By

Published : Oct 21, 2020, 1:47 PM IST

ಉತ್ತರ ಕರ್ನಾಟಕದಲ್ಲಿ ಪ್ರವಾಹ ಹಿನ್ನೆಲೆ ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ ಆರಂಭಿಸಿದ್ದಾರೆ. ಕಲಬುರಗಿಯ ಪ್ರವಾಹ ವೀಕ್ಷಣೆ ನಡೆಸಿದ ಬಳಿಕ ವಿಜಯಪುರಕ್ಕೆ ತೆರಳಲಿದ್ದಾರೆ.

chief-minister-bs-yediyurappa-conducted-aerial-survey-of-flood-affected-areas
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡ ಸಿಎಂ ಬಿಎಸ್​​ವೈ

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲಬುರಗಿ ಭಾಗದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಬಳ್ಳಾರಿಯ ತೋರಣಗಲ್​ನಿಂದ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಇಲ್ಲಿಯೂ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡ ಸಿಎಂ ಬಿಎಸ್​​ವೈ

ಸಮೀಕ್ಷೆ ಬಳಿಕ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ‌. ಅತಿವೃಷ್ಟಿ ಹಾಗೂ ಭೀಮಾ ನದಿ ಪ್ರವಾಹದ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿಎಂ ಚರ್ಚಿಸಿ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಜೊತೆ ಒಂದು ಗಂಟೆ ಚರ್ಚೆ ನಂತರ ಸಿಎಂ ಮತ್ತೆ ವಿಜಯಪುರದಲ್ಲಿ ವೈಮಾನಿಕ ಸಮೀಕ್ಷೆಗೆ ತೆರಳಲಿದ್ದಾರೆ. ಇದಲ್ಲದೆ ಕಲಬುರಗಿಯಲ್ಲಿನ ವೈಮಾನಿಕ ಸಮೀಕ್ಷೆ ವೇಳೆ ಸಿಎಂಗೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್​​ ಸಾಥ್ ನೀಡಿದರು.

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲಬುರಗಿ ಭಾಗದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಬಳ್ಳಾರಿಯ ತೋರಣಗಲ್​ನಿಂದ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಇಲ್ಲಿಯೂ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡ ಸಿಎಂ ಬಿಎಸ್​​ವೈ

ಸಮೀಕ್ಷೆ ಬಳಿಕ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ‌. ಅತಿವೃಷ್ಟಿ ಹಾಗೂ ಭೀಮಾ ನದಿ ಪ್ರವಾಹದ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿಎಂ ಚರ್ಚಿಸಿ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಜೊತೆ ಒಂದು ಗಂಟೆ ಚರ್ಚೆ ನಂತರ ಸಿಎಂ ಮತ್ತೆ ವಿಜಯಪುರದಲ್ಲಿ ವೈಮಾನಿಕ ಸಮೀಕ್ಷೆಗೆ ತೆರಳಲಿದ್ದಾರೆ. ಇದಲ್ಲದೆ ಕಲಬುರಗಿಯಲ್ಲಿನ ವೈಮಾನಿಕ ಸಮೀಕ್ಷೆ ವೇಳೆ ಸಿಎಂಗೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್​​ ಸಾಥ್ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.