ಕಲಬುರಗಿ: ಅನ್ಯ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಕೊಂಚೂರಿನ ಶ್ರೀಧರಾನಂದ ಸ್ವಾಮೀಜಿ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
![bng](https://etvbharatimages.akamaized.net/etvbharat/prod-images/kn-klb-01-swamiji-against-case-9023578_23082019100826_2308f_1566535106_813.jpg)
ಸವಿತಾ ಸಮಾಜದ ಧರ್ಮಗುರುಗಳಾದ ಚಿತ್ತಾಪುರ ತಾಲೂಕು ಕೊಂಚೂರಿನ ಶ್ರೀಧರಾನಂದ ಸ್ವಾಮೀಜಿಗಳು, ಆಗಸ್ಟ್ 17 ರಂದು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಯಜ್ಞ ಕಾರ್ಯಕ್ರಮದಲ್ಲಿ ಅನ್ಯ ಧರ್ಮದ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಲ್ಲದೇ, ಪ್ರಚೋದನಾಕಾರಿ ಹೇಳಿಕೆ ನೀಡಿ ಕೋಮು ಗಲಭೆಗೆ ಕುಮ್ಮಕ್ಕು ನೀಡುತ್ತಿರುವ ಶ್ರೀಧರಾನಂದ ಸ್ವಾಮೀಜಿ ವಿರುದ್ಧ ಕಾನೂನು ಕಠಿಣ ಕ್ರಮಕೈಗೊಳ್ಳುವಂತೆ ಜವುರ್ ಖಾನ್ ಎಂಬುವವರು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.