ETV Bharat / state

ಕಲಬುರಗಿಯಲ್ಲಿ ಮಳೆ ಅಬ್ಬರಕ್ಕೆ 89 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ

author img

By

Published : Sep 20, 2020, 8:13 AM IST

ಕಲಬುರಗಿ ಜಿಲ್ಲೆಯಲ್ಲಿ ಈವರೆಗೆ ಸುರಿದ ಧಾರಾಕಾರ ಮಳೆಗೆ 89 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ರೈತವರ್ಗ ಸೇರಿದಂತೆ ಜನಸಾಮಾನ್ಯರು ನಲುಗಿ ಹೋಗಿದ್ದಾರೆ.

Crop damage due to heavy rain in kalburgi
ಕಲಬುರಗಿಯಲ್ಲಿ ಭಾರಿ ಮಳೆ; ಬರೋಬ್ಬರಿ 89 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

ಕಲಬುರಗಿ: ಜಿಲ್ಲೆಯಲ್ಲಿ ಈ ವರ್ಷ ಎಡೆಬಿಡದೆ ವರುಣ ಅಬ್ಬರಿಸುತ್ತಿದ್ದು, ಅನ್ನದಾತನ ಬದುಕು ಕೊಚ್ಚಿಹೋಗಿದೆ. ಬರೋಬ್ಬರಿ 89 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ.

ಜಿಲ್ಲೆಯಲ್ಲಿ ವರ್ಷದ ವಾಡಿಕೆಗಿಂತ 200 ಮಿ.ಮೀ. ಹೆಚ್ಚಿನ ಮಳೆಯಾಗಿದೆ. ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಉದ್ದು, ಹೆಸರು, ತೊಗರಿ, ಸಜ್ಜೆ, ಹತ್ತಿ, ಶೇಂಗಾ ಸೇರಿದಂತೆ ಹಲವು ಮುಂಗಾರು ಬೆಳೆಗಳು ನಾಶವಾಗಿವೆ‌.

ಮಳೆ ಸೃಷ್ಟಿಸಿದ ಅವಾಂತರ

ಮಳೆಗೆ 89 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. ಕಳೆದೊಂದು ವಾರದಲ್ಲಿ ಸುರಿದ ಭಾರಿ ಮಳೆಗೆ ಮತ್ತೆ ಸುಮಾರು 7 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಬೆಳೆ ಹಾನಿಗೊಳಗಾಗಿದೆ.

ವಾಡಿ ಪಟ್ಟಣದ ಸುತ್ತಲಿನ ಬಳವಡಗಿ ಗ್ರಾಮ ಸೇರಿ ಸುಮಾರು ಹತ್ತಾರು ಹಳ್ಳಿಗಳು ಜಲಾವೃತವಾಗಿ ಜನಜೀವನ ಅಲ್ಲೋಲ ಕಲ್ಲೋಲವಾಗಿದೆ‌. ಇತ್ತ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು, ಸೇಡಂ ತಾಲೂಕಿನ ಮಳಖೇಡ ಬಳಿಯ ಸೇತುವೆ ಮುಳುಗಡೆಯಾಗಿದೆ. ಕಾಳಗಿಯ ನೀಲಕಂಠ ಕಾಳೇಶ್ವರ ದೇವಸ್ಥಾನ ಜಲಾವೃತವಾಗಿ ದೇವಸ್ಥಾನದ ಗರ್ಭಗುಡಿಯೊಳಗೂ ಮಳೆ ನೀರು ನುಗ್ಗಿದೆ. ಹಲವೆಡೆ ಮಳೆ ನೀರಿಗೆ ಅವಘಡಗಳು ಸಂಭವಿಸಿದ್ದು, ಜನಸಾಮಾನ್ಯರು ನಲುಗಿ ಹೋಗಿದ್ದಾರೆ.

ಕಲಬುರಗಿ: ಜಿಲ್ಲೆಯಲ್ಲಿ ಈ ವರ್ಷ ಎಡೆಬಿಡದೆ ವರುಣ ಅಬ್ಬರಿಸುತ್ತಿದ್ದು, ಅನ್ನದಾತನ ಬದುಕು ಕೊಚ್ಚಿಹೋಗಿದೆ. ಬರೋಬ್ಬರಿ 89 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ.

ಜಿಲ್ಲೆಯಲ್ಲಿ ವರ್ಷದ ವಾಡಿಕೆಗಿಂತ 200 ಮಿ.ಮೀ. ಹೆಚ್ಚಿನ ಮಳೆಯಾಗಿದೆ. ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಉದ್ದು, ಹೆಸರು, ತೊಗರಿ, ಸಜ್ಜೆ, ಹತ್ತಿ, ಶೇಂಗಾ ಸೇರಿದಂತೆ ಹಲವು ಮುಂಗಾರು ಬೆಳೆಗಳು ನಾಶವಾಗಿವೆ‌.

ಮಳೆ ಸೃಷ್ಟಿಸಿದ ಅವಾಂತರ

ಮಳೆಗೆ 89 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. ಕಳೆದೊಂದು ವಾರದಲ್ಲಿ ಸುರಿದ ಭಾರಿ ಮಳೆಗೆ ಮತ್ತೆ ಸುಮಾರು 7 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಬೆಳೆ ಹಾನಿಗೊಳಗಾಗಿದೆ.

ವಾಡಿ ಪಟ್ಟಣದ ಸುತ್ತಲಿನ ಬಳವಡಗಿ ಗ್ರಾಮ ಸೇರಿ ಸುಮಾರು ಹತ್ತಾರು ಹಳ್ಳಿಗಳು ಜಲಾವೃತವಾಗಿ ಜನಜೀವನ ಅಲ್ಲೋಲ ಕಲ್ಲೋಲವಾಗಿದೆ‌. ಇತ್ತ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು, ಸೇಡಂ ತಾಲೂಕಿನ ಮಳಖೇಡ ಬಳಿಯ ಸೇತುವೆ ಮುಳುಗಡೆಯಾಗಿದೆ. ಕಾಳಗಿಯ ನೀಲಕಂಠ ಕಾಳೇಶ್ವರ ದೇವಸ್ಥಾನ ಜಲಾವೃತವಾಗಿ ದೇವಸ್ಥಾನದ ಗರ್ಭಗುಡಿಯೊಳಗೂ ಮಳೆ ನೀರು ನುಗ್ಗಿದೆ. ಹಲವೆಡೆ ಮಳೆ ನೀರಿಗೆ ಅವಘಡಗಳು ಸಂಭವಿಸಿದ್ದು, ಜನಸಾಮಾನ್ಯರು ನಲುಗಿ ಹೋಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.