ಕಲಬುರಗಿ: ನಗರದ ತಹಶೀಲ್ದಾರ ಕಛೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಟಿ.ವಿ ದೊಡ್ಡಮನಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡುವುದಾಗಿ ತಿಳಿಸಿದರು.
ಅಹವಾಲು ಸ್ವೀಕರಿಸುವ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಆಗಮಿಸಿದ ಜನರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
ಜನಸ್ಪಂದನ ಕಾರ್ಯಕ್ರಮವು ಸತತ ಏಳು ದಿನಗಳವರೆಗೆ ಮುಂದುವರೆಯಲಿದ್ದು, ಜಿಲ್ಲೆಯ ವಿವಿಧ ತಾಲೂಕು ಸಂಚರಿಸಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವುದಾಗಿ ಭರವಸೆ ನೀಡಿದರು.