ಕಲಬುರಗಿ : ಕೊರೊನಾ ಸೋಂಕಿನ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಪ್ರಧಾನಿ ಮೋದಿ ದೀಪ ಬೆಳಗಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಸಿದ್ಧತೆಗಳು ಭರದಿಂದ ನಡೆದಿವೆ. ಗೃಹಿಣಿಯರು ದೀಪ ಬೆಳಗಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೋದಿ ಕರೆಯಂತೆ ಜಿಲ್ಲೆಯ ಜನ ದೀಪಾವಳಿ ಹಬ್ಬದಂತೆ ಆಚರಿಸಲು ಸಿದ್ಧರಾಗಿದ್ದಾರೆ.
ನಗರದ ಹಲವು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಜಾತಿ-ಧರ್ಮ ಮರೆತು ದೀಪ ಬೆಳಗೋಣ ಎನ್ನುತ್ತಿದ್ದಾರೆ. ನಗರದ ಜಗತ್ ಬಡಾವಣೆಯಲ್ಲಿ ಬೆಳಗ್ಗೆಯಿಂದಲೇ ದೀಪಗಳ ತಯಾರಿ ಜೋರಾಗಿದೆ.