ಕಲಬುರಗಿ: ಅಯೋಧ್ಯೆಯಲ್ಲಿ ಬುದ್ಧನ ಅವಶೇಷಗಳು ಪತ್ತೆಯಾದ ಹಿನ್ನೆಲೆ ರಾಮಮಂದಿರ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಡಿಎಸ್ಎಸ್ ಸಂಚಾಲಕ ಶ್ರವಣಕುಮಾರ ಮೋಸಲಗಿ ನೇತೃತ್ವದಲ್ಲಿ ಜಿಲ್ಲೆಯ ವಾಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಯೋಧ್ಯೆ ಪ್ರದೇಶವನ್ನು ಪುರಾತತ್ವ ಇಲಾಖೆಗೆ ಒಪ್ಪಿಸಿ ಐತಿಹಾಸಿಕ ಸ್ಮಾರಕವೆಂದು ಘೋಷಿಸಿ ಅಭಿವೃದ್ಧಿಗೊಳಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.