ETV Bharat / state

ನಿರ್ಬಂಧ ಉಲ್ಲಂಘಿಸಿ ರಾತ್ರೋರಾತ್ರಿ ಜಾತ್ರೆ: ರಥೋತ್ಸವದ ವೇಳೆ ಹಲವರಿಗೆ ಗಾಯ - fair at Jevargi village of Kalburgi

ಕೋವಿಡ್​ ಹಿನ್ನೆಲೆ ಜೇರಟಗಿ ಗ್ರಾಮದ ಜಾತ್ರೆಗೆ ಅಧಿಕಾರಿಗಳು ನಿರ್ಬಂಧ ಹೇರಿದ್ದರು. ಆದರೆ ಗ್ರಾಮಸ್ಥರು ಅಧಿಕಾರಿಗಳ ಕಣ್ತಪ್ಪಿಸಿ ರಥೋತ್ಸವ ನಡೆಸಿದ್ದಾರೆ.

fair at Jevargi village by violating prohibition
ಅಧಿಕಾರಿಗಳ ಕಣ್ತಪ್ಪಿಸಿ ನಡೆದ ರಥೋತ್ಸವ
author img

By

Published : Dec 7, 2020, 4:41 PM IST

ಕಲಬುರಗಿ: ಕೋವಿಡ್ ನಿರ್ಬಂಧದ ನಡುವೆಯೇ ರಾತ್ರೋರಾತ್ರಿ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ಜಾತ್ರೆ ನಡೆದಿದ್ದು, ರಥೋತ್ಸವದ ವೇಳೆ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಪ್ರತಿ ವರ್ಷ ಮೂರು ದಿನಗಳ ಕಾಲ ನಡೆಯುತ್ತಿದ್ದ ರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಈ ಬಾರಿ ಕೋವಿಡ್ ಹಿನ್ನೆಲೆ ನಿರ್ಬಂಧ ಹೇರಲಾಗಿತ್ತು. ಜೇವರ್ಗಿ ತಹಶೀಲ್ದಾರ್​ ಬಸವರಾಜ ಬೆಣ್ಣೂರ ಹಾಗೂ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಜಾತ್ರೆ ನಡೆಸದಂತೆ ಸಲಹೆ ನೀಡಿ ಬಂದಿದ್ದರು‌. ಆದರೆ ಅಧಿಕಾರಿಗಳ ಕಣ್ತಪ್ಪಿಸಿ ಬೆಳಗಿನ ಜಾವ ಕತ್ತಲಿನಲ್ಲಿಯೇ ರಥೋತ್ಸವ ನಡೆಸಲಾಗಿದೆ.

ಅಧಿಕಾರಿಗಳ ಕಣ್ತಪ್ಪಿಸಿ ನಡೆದ ರಥೋತ್ಸವ

ಇದನ್ನೂ ಓದಿ: ಬಳ್ಳಾರಿಯಲ್ಲಿ ಹಾಡಹಗಲೇ ಝಳಪಿಸಿದ ಮಚ್ಚು, ಲಾಂಗು: ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!?

ಈ ವೇಳೆ ನೂಕುನುಗ್ಗಲು ಉಂಟಾಗಿ ರಥದ ಚಕ್ರಕ್ಕೆ ಸಿಕ್ಕಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲಬುರಗಿ: ಕೋವಿಡ್ ನಿರ್ಬಂಧದ ನಡುವೆಯೇ ರಾತ್ರೋರಾತ್ರಿ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ಜಾತ್ರೆ ನಡೆದಿದ್ದು, ರಥೋತ್ಸವದ ವೇಳೆ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಪ್ರತಿ ವರ್ಷ ಮೂರು ದಿನಗಳ ಕಾಲ ನಡೆಯುತ್ತಿದ್ದ ರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಈ ಬಾರಿ ಕೋವಿಡ್ ಹಿನ್ನೆಲೆ ನಿರ್ಬಂಧ ಹೇರಲಾಗಿತ್ತು. ಜೇವರ್ಗಿ ತಹಶೀಲ್ದಾರ್​ ಬಸವರಾಜ ಬೆಣ್ಣೂರ ಹಾಗೂ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಜಾತ್ರೆ ನಡೆಸದಂತೆ ಸಲಹೆ ನೀಡಿ ಬಂದಿದ್ದರು‌. ಆದರೆ ಅಧಿಕಾರಿಗಳ ಕಣ್ತಪ್ಪಿಸಿ ಬೆಳಗಿನ ಜಾವ ಕತ್ತಲಿನಲ್ಲಿಯೇ ರಥೋತ್ಸವ ನಡೆಸಲಾಗಿದೆ.

ಅಧಿಕಾರಿಗಳ ಕಣ್ತಪ್ಪಿಸಿ ನಡೆದ ರಥೋತ್ಸವ

ಇದನ್ನೂ ಓದಿ: ಬಳ್ಳಾರಿಯಲ್ಲಿ ಹಾಡಹಗಲೇ ಝಳಪಿಸಿದ ಮಚ್ಚು, ಲಾಂಗು: ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!?

ಈ ವೇಳೆ ನೂಕುನುಗ್ಗಲು ಉಂಟಾಗಿ ರಥದ ಚಕ್ರಕ್ಕೆ ಸಿಕ್ಕಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.