ETV Bharat / state

ಎಲ್ಲರನ್ನು ಮಂತ್ರಿ ಮಾಡಲು ಸಾಧ್ಯವಿಲ್ಲ, ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು: ಮಾಲಿಕಯ್ಯ ಗುತ್ತೇದಾರ್​​​

author img

By

Published : Aug 29, 2019, 6:39 PM IST

ನಮ್ಮಲ್ಲಿರುವ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ನನಗೆ ಮಂತ್ರಿ ಸ್ಥಾನ ಕೊಡುವುದು, ಬಿಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹೇಳಿದರು.

ಮಾಜಿ ಸಚಿವ ಮಾಲಿಕಯ್ಯ ಗುತ್ತೆದಾರ

ಕಲಬುರಗಿ: ನನಗೆ ಮಂತ್ರಿ ಸ್ಥಾನ ಕೊಡುವುದು, ಬಿಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್​ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರೆಂದು ಮೆರೆಯುತ್ತಿದ್ದವರಿಗೆ ಸೋಲುಣಿಸಿ ಮನೆಗೆ ಕಳುಹಿಸಿ ತೋರಿಸಿದ್ದೇವೆ ಎಂದು ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸೋಲಿನ ವಿಚಾರ ಪ್ರಸ್ತಾಪ ಮಾಡಿದರು. ಸಿಎಂ ಯಡಿಯೂರಪ್ಪನವರ ನೇತೃತ್ವದ ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ಜಿಲ್ಲೆಗೆ ಪ್ರಾತಿನಿಧ್ಯಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಈಗಲೇ ನಿರಾಶರಾಗುವದು ಬೇಡ. ಮುಂದಿನ ದಿನಗಳಲ್ಲಿ ಈ ಭಾಗಕ್ಕೂ ಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು‌.

ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್​

ನಮ್ಮಲ್ಲಿರುವ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್, ಜೆಡಿಎಸ್​​ನ ಕೆಲವು ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ನಮಗೆ ಸರ್ಕಾರ ರಚನೆ ಮಾಡಲು ಸಾಧ್ಯವಾಗಿದೆ. ಹಾಗಾಗಿ ಆ ಶಾಸಕರೂ ಮಂತ್ರಿ ಸ್ಥಾನಕ್ಕೆ ಅರ್ಹರಿದ್ದಾರೆ. ಬರುವ ದಿನಗಳಲ್ಲಿ ಅವರಿಗೂ ಮಂತ್ರಿ ಮಂಡಲದಲ್ಲಿ ಅವಕಾಶ ಕಲ್ಪಿಸಬೇಕಿದೆ ಎಂದರು.

ಕಲಬುರಗಿ: ನನಗೆ ಮಂತ್ರಿ ಸ್ಥಾನ ಕೊಡುವುದು, ಬಿಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್​ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರೆಂದು ಮೆರೆಯುತ್ತಿದ್ದವರಿಗೆ ಸೋಲುಣಿಸಿ ಮನೆಗೆ ಕಳುಹಿಸಿ ತೋರಿಸಿದ್ದೇವೆ ಎಂದು ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸೋಲಿನ ವಿಚಾರ ಪ್ರಸ್ತಾಪ ಮಾಡಿದರು. ಸಿಎಂ ಯಡಿಯೂರಪ್ಪನವರ ನೇತೃತ್ವದ ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ಜಿಲ್ಲೆಗೆ ಪ್ರಾತಿನಿಧ್ಯಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಈಗಲೇ ನಿರಾಶರಾಗುವದು ಬೇಡ. ಮುಂದಿನ ದಿನಗಳಲ್ಲಿ ಈ ಭಾಗಕ್ಕೂ ಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು‌.

ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್​

ನಮ್ಮಲ್ಲಿರುವ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್, ಜೆಡಿಎಸ್​​ನ ಕೆಲವು ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ನಮಗೆ ಸರ್ಕಾರ ರಚನೆ ಮಾಡಲು ಸಾಧ್ಯವಾಗಿದೆ. ಹಾಗಾಗಿ ಆ ಶಾಸಕರೂ ಮಂತ್ರಿ ಸ್ಥಾನಕ್ಕೆ ಅರ್ಹರಿದ್ದಾರೆ. ಬರುವ ದಿನಗಳಲ್ಲಿ ಅವರಿಗೂ ಮಂತ್ರಿ ಮಂಡಲದಲ್ಲಿ ಅವಕಾಶ ಕಲ್ಪಿಸಬೇಕಿದೆ ಎಂದರು.

Intro:ಕಲಬುರಗಿ: ನನಗೆ ಮಂತ್ರಿ ಸ್ಥಾನ ಕೊಡುವುದೂ, ಬಿಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೆದಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರೆಂದು ಮೆರೆಯುತ್ತಿರುವವರಿಗೆ (ಮಲ್ಲಿಕಾರ್ಜುನ ಖರ್ಗೆ) ಸೋಲುಣಿಸುವ ಪಣ ನನ್ನದಾಗಿತ್ತು, ಅವರಿಗೆ ಮನೆಗೆ ಕಳುಹಿಸಿ ತೋರಿಸಿದ್ದೇವೆ. ನಮ್ಮ ನಾಯಕ ಯಡಿಯೂರಪ್ಪ ನೇತೃತ್ವದ ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯಕ್ಕಾಗಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇವೆ. ಈಗಲೇ ನಿರಾಶರಾಗುವದು ಬೇಡ ಮುಂದಿನ ದಿನಗಳಲ್ಲಿ ಕಲಬುರಗಿ ಭಾಗಕ್ಕೂ ಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು‌. ಇದೇ ವೇಳೆ ಮಾತನಾಡಿದ ಅವರು, ನಮ್ಮಲ್ಲಿರುವ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ, ಇದನ್ನು ನಾವೂ ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್, ಜೆಡಿಎಸ್ ನ ಕೆಲವು ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ನಮಗೆ ಸರ್ಕಾರ ರಚನೆ ಮಾಡಲು ಸಾಧ್ಯವಾಗಿದೆ. ಹಾಗಾಗಿ ಆ ಶಾಸಕರೂ ಮಂತ್ರಿ ಸ್ಥಾನಕ್ಕೆ ಅರ್ಹರಿದ್ದಾರೆ. ಬರುವ ದಿನಗಳಲ್ಲಿ ಅವರಿಗೂ ಮಂತ್ರಿ ಮಂಡಲದಲ್ಲಿ ಅವಕಾಶ ಕಲ್ಪಿಸಬೇಕಿದೆ. ಖರ್ಗೆ ಅವರನ್ನು ಸೋಲಿಸಲು ಪ್ರಮುಖ ಪಾತ್ರವಹಿಸಿದರೆಂದು ಗುತ್ತೆದಾರ ಅವರಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ಸಿಗಬಹುದೆಂಬ ನೀರಿಕ್ಷೆ ಈ ಭಾಗದ ಜನರಲ್ಲಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ನಗುತ್ತಲೆ ನಾನೇನು ಆಕಾಂಕ್ಷಿಯಾಗಿದ್ದಿಲ್ಲ, ಮುಂದೆ ನೋಡೋಣ ಪಕ್ಷದ ನಾಯಕರು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು. Body:ಕಲಬುರಗಿ: ನನಗೆ ಮಂತ್ರಿ ಸ್ಥಾನ ಕೊಡುವುದೂ, ಬಿಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೆದಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರೆಂದು ಮೆರೆಯುತ್ತಿರುವವರಿಗೆ (ಮಲ್ಲಿಕಾರ್ಜುನ ಖರ್ಗೆ) ಸೋಲುಣಿಸುವ ಪಣ ನನ್ನದಾಗಿತ್ತು, ಅವರಿಗೆ ಮನೆಗೆ ಕಳುಹಿಸಿ ತೋರಿಸಿದ್ದೇವೆ. ನಮ್ಮ ನಾಯಕ ಯಡಿಯೂರಪ್ಪ ನೇತೃತ್ವದ ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯಕ್ಕಾಗಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇವೆ. ಈಗಲೇ ನಿರಾಶರಾಗುವದು ಬೇಡ ಮುಂದಿನ ದಿನಗಳಲ್ಲಿ ಕಲಬುರಗಿ ಭಾಗಕ್ಕೂ ಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು‌. ಇದೇ ವೇಳೆ ಮಾತನಾಡಿದ ಅವರು, ನಮ್ಮಲ್ಲಿರುವ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ, ಇದನ್ನು ನಾವೂ ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್, ಜೆಡಿಎಸ್ ನ ಕೆಲವು ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ನಮಗೆ ಸರ್ಕಾರ ರಚನೆ ಮಾಡಲು ಸಾಧ್ಯವಾಗಿದೆ. ಹಾಗಾಗಿ ಆ ಶಾಸಕರೂ ಮಂತ್ರಿ ಸ್ಥಾನಕ್ಕೆ ಅರ್ಹರಿದ್ದಾರೆ. ಬರುವ ದಿನಗಳಲ್ಲಿ ಅವರಿಗೂ ಮಂತ್ರಿ ಮಂಡಲದಲ್ಲಿ ಅವಕಾಶ ಕಲ್ಪಿಸಬೇಕಿದೆ. ಖರ್ಗೆ ಅವರನ್ನು ಸೋಲಿಸಲು ಪ್ರಮುಖ ಪಾತ್ರವಹಿಸಿದರೆಂದು ಗುತ್ತೆದಾರ ಅವರಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ಸಿಗಬಹುದೆಂಬ ನೀರಿಕ್ಷೆ ಈ ಭಾಗದ ಜನರಲ್ಲಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ನಗುತ್ತಲೆ ನಾನೇನು ಆಕಾಂಕ್ಷಿಯಾಗಿದ್ದಿಲ್ಲ, ಮುಂದೆ ನೋಡೋಣ ಪಕ್ಷದ ನಾಯಕರು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು. Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.