ಕಲಬುರಗಿ:ಹೈದರಾಬಾದ್ - ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಚುನಾವಣಾಧಿಕಾರಿ ಬಸವರಾಜ್ ಇಂಗಿನ್ ಅವರನ್ನು ತಕ್ಷಣವೇ ಅಧಿಕಾರದಿಂದ ಕೆಳಗಿಳಿಸುವಂತೆ ಹೆಚ್ಕೆಸಿಸಿ ಮಾಜಿ ಅಧ್ಯಕ್ಷ, ಹಾಲಿ ಅಭ್ಯರ್ಥಿ ಅಮರನಾಥ ಪಾಟೀಲ್ ಆಗ್ರಹಿಸಿದ್ದಾರೆ.
ಹೆಚ್ಕೆಸಿಸಿ ಚುನಾವಣಾಧಿಕಾರಿ ವಿರುದ್ಧ ಆರೋಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆ ಪ್ರಾರಂಭವಾದಾಗಿನಿಂದಲೂ ಒಂದಿಲ್ಲೊಂದು ವಿವಾದ ಸೃಷ್ಟಿಸಿ ನ್ಯಾಯಸಮ್ಮತ ಚುನಾವಣೆಗೆ ಅನುವು ಮಾಡಿಕೊಡದೇ ತಮ್ಮವರನ್ನು ಅಧಿಕಾರಕ್ಕೆ ತರುವ ದುರುದ್ದೇಶದಿಂದ ಅಡ್ಡ ದಾರಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದ್ದಾರೆ. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ರೂ ಚುನಾವಣಾಧಿಕಾರಿಯಾಗಿರುವ ಬಸವರಾಜ್ ಇಂಜಿನ್ ಅವರು ಕೋರ್ಟ್ ಆದೇಶಕ್ಕೂ ಬೆಲೆ ಕೊಡದೆ ತಮಗಿಷ್ಟ ಬಂದಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆ ಕೂಡಲೇ ಬಸವರಾಜ್ ಇಂಗಿನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನಿಯೋಜಿಸುವ ಮೂಲಕ ಮುಂಬರುವ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸುವಂತೆ ಆಗ್ರಹಿಸಿದ್ದಾರೆ.