ETV Bharat / state

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ನಿಯಮಿತದಿಂದ ಕೋಟ್ಯಂತರ ರೂ. ಹಣ ದುರ್ಬಳಕೆ: ಆರೋಪ

author img

By

Published : Dec 16, 2020, 7:29 PM IST

ಯಾವುದೇ ಕಾಮಗಾರಿ ನಡೆಸದೇ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ನಿಯಮಿತದಿಂದ 18 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕೇದಾರಲಿಂಗಯ್ಯ ಹಿರೇಮಠ ಆರೋಪಿಸಿದ್ದಾರೆ.

Kedarlingaiah Hiremath
ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ

ಕಲಬುರಗಿ: ಯಾವುದೇ ಕಾಮಗಾರಿ ನಡೆಸದೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ನಿಯಮಿತದಿಂದ ಕೋಟ್ಯಂತರ ರೂ. ಹಣ ದುರ್ಬಳಕೆಯಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಆರೋಪಿಸಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ

ಕಲಬುರಗಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾಮಗಾರಿ ನಡೆಸದೆ 18 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. 2014-15ನೇ ಸಾಲಿನಲ್ಲಿ ಕರ್ನಾಟಕ ನೀರಾವರಿ ನಿಗಮದಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿತ್ತು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಅಡಿ 202 ಕಾಮಗಾರಿ ಮಾಡಲು ಕೆ.ಆರ್.ಐ.ಡಿ.ಎಲ್​ಗೆ ಅನುದಾನ ನೀಡಲಾಗಿತ್ತು. ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳ ಹರಿಜನವಾಡಗಳಲ್ಲಿ ಕಾಮಗಾರಿ ಕೈಗೊಳ್ಳಬೇಕಿತ್ತು. ಆದರೆ, ಯಾವುದೇ ಕಾಮಗಾರಿ ಮಾಡದೆಯೇ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯ್ತಿಗಳು ಮಾಡಿರೋ ಕಾಮಗಾರಿಗಳನ್ನೇ ತೋರಿಸಿ ಹಣ ಲಪಟಾಯಿಸಲಾಗಿದೆ. ಈ ಬಗ್ಗೆ ದಾಖಲೆ ಕೇಳಿದರೂ ಕೆ.ಆರ್.ಐ.ಡಿ.ಎಲ್. ಕೊಡದೆ ಮೊಂಡಾಟ ಮಾಡುತ್ತಿದೆ. ಕಾಮಗಾರಿ ನಡೆಸದೆಯೇ ಹಣ ದುರ್ಬಳಕೆ ಮಾಡಿಕೊಂಡ ಕೆ.ಆರ್.ಐ.ಡಿ.ಎಲ್. ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು. ಇಲ್ಲದಿದ್ದಲ್ಲಿ ಕೆ.ಆರ್.ಐ.ಡಿ.ಎಲ್. ಹಾಗೂ ಕರ್ನಾಟಕ ನೀರಾವರಿ ನಿಗಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡೋದಾಗಿ ಕೇದಾರಲಿಂಗಯ್ಯ ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ: ಯಾವುದೇ ಕಾಮಗಾರಿ ನಡೆಸದೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ನಿಯಮಿತದಿಂದ ಕೋಟ್ಯಂತರ ರೂ. ಹಣ ದುರ್ಬಳಕೆಯಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಆರೋಪಿಸಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ

ಕಲಬುರಗಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾಮಗಾರಿ ನಡೆಸದೆ 18 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. 2014-15ನೇ ಸಾಲಿನಲ್ಲಿ ಕರ್ನಾಟಕ ನೀರಾವರಿ ನಿಗಮದಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿತ್ತು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಅಡಿ 202 ಕಾಮಗಾರಿ ಮಾಡಲು ಕೆ.ಆರ್.ಐ.ಡಿ.ಎಲ್​ಗೆ ಅನುದಾನ ನೀಡಲಾಗಿತ್ತು. ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳ ಹರಿಜನವಾಡಗಳಲ್ಲಿ ಕಾಮಗಾರಿ ಕೈಗೊಳ್ಳಬೇಕಿತ್ತು. ಆದರೆ, ಯಾವುದೇ ಕಾಮಗಾರಿ ಮಾಡದೆಯೇ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯ್ತಿಗಳು ಮಾಡಿರೋ ಕಾಮಗಾರಿಗಳನ್ನೇ ತೋರಿಸಿ ಹಣ ಲಪಟಾಯಿಸಲಾಗಿದೆ. ಈ ಬಗ್ಗೆ ದಾಖಲೆ ಕೇಳಿದರೂ ಕೆ.ಆರ್.ಐ.ಡಿ.ಎಲ್. ಕೊಡದೆ ಮೊಂಡಾಟ ಮಾಡುತ್ತಿದೆ. ಕಾಮಗಾರಿ ನಡೆಸದೆಯೇ ಹಣ ದುರ್ಬಳಕೆ ಮಾಡಿಕೊಂಡ ಕೆ.ಆರ್.ಐ.ಡಿ.ಎಲ್. ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು. ಇಲ್ಲದಿದ್ದಲ್ಲಿ ಕೆ.ಆರ್.ಐ.ಡಿ.ಎಲ್. ಹಾಗೂ ಕರ್ನಾಟಕ ನೀರಾವರಿ ನಿಗಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡೋದಾಗಿ ಕೇದಾರಲಿಂಗಯ್ಯ ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.