ETV Bharat / state

ನಕ್ಸಲ್ ಎನ್​ಕೌಂಟರ್​ನಲ್ಲಿ ಹುತಾತ್ಮನಾದ ಕಲಬುರಗಿ ಯೋಧನ ಅಂತ್ಯಕ್ರಿಯೆ

author img

By

Published : Jun 29, 2019, 7:59 PM IST

ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧ ಮಹಾದೇವಪ್ಪ ಪೊಲೀಸ್ ಪಾಟೀಲ್​ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಯೋಧ

ಕಲಬುರಗಿ: ಛತ್ತೀಸ್​​​​ಗಢದ ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧ ಮಹಾದೇವಪ್ಪ ಪೊಲೀಸ್ ಪಾಟೀಲ್​ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಸ್ವಗ್ರಾಮ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿಯಲ್ಲಿ ನೆರವೇರಿತು.

ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಹೈದರಾಬಾದ್​​ ಮಾರ್ಗವಾಗಿ ಮರಗುತ್ತಿ ಗ್ರಾಮಕ್ಕೆ ಮಹಾದೇವ ಅವರ ಪಾರ್ಥಿವ ಶರೀರ ಆಗಮಿಸಿತು. ನಂತರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಸಂಸದ ಡಾ.ಉಮೇಶ ಜಾಧವ, ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್​ ಸೇರಿದಂತೆ ಅನೇಕ ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

ಕಲಬುರಗಿ ಯೋಧ ಮಹಾದೇವಪ್ಪ ಅಂತ್ಯಕ್ರಿಯೆ

ಸಚಿವರು ಸರ್ಕಾರದ ಪರವಾಗಿ ಶೃದ್ಧಾಂಜಲಿ ಸಲ್ಲಿಸಿದರು. ಬಳಿಕ ಪೊಲೀಸರು ಮೂರು ಸುತ್ತಿನ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಗಿಲು ಮುಟ್ಟಿತ್ತು. ಸಾಯಂಕಾಲ 6 ಗಂಟೆ ಸುಮಾರಿಗೆ ಅಂತಿಕ್ರಿಯೆ ನೆರವೇರಿಸಲಾಯಿತು.

ನಿನ್ನೆ ಛತ್ತೀಸ್​​​​ಗಢ ಬಿಜಾಪುರ ಜಿಲ್ಲೆಯಲ್ಲಿ ನಡೆದ ನಕ್ಸಲ್‌ ಕಾರ್ಯಾಚರಣೆಯಲ್ಲಿ ಸಬ್ ಇನ್ಸಪೆಕ್ಟರ್ ಆಗಿದ್ದ ಮಹಾದೇವ ಅವರು ಹುತಾತ್ಮರಾಗಿದ್ದರು.

ಕಲಬುರಗಿ: ಛತ್ತೀಸ್​​​​ಗಢದ ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧ ಮಹಾದೇವಪ್ಪ ಪೊಲೀಸ್ ಪಾಟೀಲ್​ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಸ್ವಗ್ರಾಮ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿಯಲ್ಲಿ ನೆರವೇರಿತು.

ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಹೈದರಾಬಾದ್​​ ಮಾರ್ಗವಾಗಿ ಮರಗುತ್ತಿ ಗ್ರಾಮಕ್ಕೆ ಮಹಾದೇವ ಅವರ ಪಾರ್ಥಿವ ಶರೀರ ಆಗಮಿಸಿತು. ನಂತರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಸಂಸದ ಡಾ.ಉಮೇಶ ಜಾಧವ, ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್​ ಸೇರಿದಂತೆ ಅನೇಕ ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

ಕಲಬುರಗಿ ಯೋಧ ಮಹಾದೇವಪ್ಪ ಅಂತ್ಯಕ್ರಿಯೆ

ಸಚಿವರು ಸರ್ಕಾರದ ಪರವಾಗಿ ಶೃದ್ಧಾಂಜಲಿ ಸಲ್ಲಿಸಿದರು. ಬಳಿಕ ಪೊಲೀಸರು ಮೂರು ಸುತ್ತಿನ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಗಿಲು ಮುಟ್ಟಿತ್ತು. ಸಾಯಂಕಾಲ 6 ಗಂಟೆ ಸುಮಾರಿಗೆ ಅಂತಿಕ್ರಿಯೆ ನೆರವೇರಿಸಲಾಯಿತು.

ನಿನ್ನೆ ಛತ್ತೀಸ್​​​​ಗಢ ಬಿಜಾಪುರ ಜಿಲ್ಲೆಯಲ್ಲಿ ನಡೆದ ನಕ್ಸಲ್‌ ಕಾರ್ಯಾಚರಣೆಯಲ್ಲಿ ಸಬ್ ಇನ್ಸಪೆಕ್ಟರ್ ಆಗಿದ್ದ ಮಹಾದೇವ ಅವರು ಹುತಾತ್ಮರಾಗಿದ್ದರು.

Intro:Kn_klb_03_YODA_ANTYAKRIYE__9023578


Body:Kn_klb_03_YODA_ANTYAKRIYE__9023578


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.