ETV Bharat / state

ಜೈಲಿನಿಂದ ಹೊರಬಂದು ಮತ್ತೆ ಮನೆಗಳ್ಳತನ: ಆರೋಪಿ ಅಂದರ್​

author img

By

Published : Sep 20, 2020, 1:05 PM IST

ಜೈಲಿನಿಂದ ಹೊರಬಂದು ಮತ್ತೆ ಮನೆಗಳ್ಳತನದಲ್ಲಿ ಸಕ್ರಿಯವಾಗಿದ್ದ ಅಂತರ್​ ಜಿಲ್ಲಾ ಮನೆಗಳ್ಳನನ್ನು ಆಳಂದ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ ನಂದಿಹಾಳ ಬಂಧಿತ ಆರೋಪಿ.

Kalburgi
ಜೈಲಿನಿಂದ ಹೊರಬಂದು ಮತ್ತೆ ಮನೆಗಳ್ಳತನ: ಆರೋಪಿ ಅಂದರ್​

ಕಲಬುರಗಿ: ಜೈಲಿನಿಂದ ಹೊರಬಂದು ಮತ್ತೆ ಮನೆಗಳ್ಳತನದಲ್ಲಿ ಸಕ್ರಿಯವಾಗಿದ್ದ ಖತರ್ನಾಕ್ ಅಂತರ್​ ಜಿಲ್ಲಾ ಮನೆಗಳ್ಳನನ್ನು ಬಂಧಿಸಿ ಪೊಲೀಸರು ಮತ್ತೆ ಜೈಲಿಗೆ ಅಟ್ಟಿದ್ದಾರೆ‌.

Kalburgi
ಜೈಲಿನಿಂದ ಹೊರಬಂದು ಮತ್ತೆ ಮನೆಗಳ್ಳತನ: 7.96 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊನಳ್ಳಿ ಗ್ರಾಮದ ಸಂತೋಷ ನಂದಿಹಾಳ ಬಂಧಿತ ಆರೋಪಿ. ಈ ಮುಂಚೆ ಮನೆಗಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲುವಾಸ ಅನುಭವಿಸಿದ ಸಂತೋಷ, ಜೈಲಿನಿಂದ ಹೊರಬಂದು ಮತ್ತೆ ಮನೆ ಕಳ್ಳತನದಲ್ಲಿ ಸಕ್ರಿಯನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3, ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಎಸ್​ಪಿ ಅವರ ಮಾರ್ಗದರ್ಶನಲ್ಲಿ ಆಳಂದ ಡಿವೈಎಸ್​ಪಿ ಮಲ್ಲಿಕಾರ್ಜುನ ಸಾಲಿ ನೇತೃತ್ವದಲ್ಲಿ ಸಿಪಿಐ ಮಂಜುನಾಥ್ ಎಸ್, ನಿಂಬರ್ಗಾ ಪಿಎಸ್​ಐ ಸಂತೋಷಕುಮಾರ ಚವ್ಹಾಣ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 7.96 ಲಕ್ಷ ರೂಪಾಯಿ ಮೌಲ್ಯದ 157 ಗ್ರಾಂ ಚಿನ್ನಾಭರಣ, 230 ಗ್ರಾಂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಜೈಲಿನಿಂದ ಹೊರಬಂದು ಮತ್ತೆ ಮನೆಗಳ್ಳತನದಲ್ಲಿ ಸಕ್ರಿಯವಾಗಿದ್ದ ಖತರ್ನಾಕ್ ಅಂತರ್​ ಜಿಲ್ಲಾ ಮನೆಗಳ್ಳನನ್ನು ಬಂಧಿಸಿ ಪೊಲೀಸರು ಮತ್ತೆ ಜೈಲಿಗೆ ಅಟ್ಟಿದ್ದಾರೆ‌.

Kalburgi
ಜೈಲಿನಿಂದ ಹೊರಬಂದು ಮತ್ತೆ ಮನೆಗಳ್ಳತನ: 7.96 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊನಳ್ಳಿ ಗ್ರಾಮದ ಸಂತೋಷ ನಂದಿಹಾಳ ಬಂಧಿತ ಆರೋಪಿ. ಈ ಮುಂಚೆ ಮನೆಗಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲುವಾಸ ಅನುಭವಿಸಿದ ಸಂತೋಷ, ಜೈಲಿನಿಂದ ಹೊರಬಂದು ಮತ್ತೆ ಮನೆ ಕಳ್ಳತನದಲ್ಲಿ ಸಕ್ರಿಯನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3, ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಎಸ್​ಪಿ ಅವರ ಮಾರ್ಗದರ್ಶನಲ್ಲಿ ಆಳಂದ ಡಿವೈಎಸ್​ಪಿ ಮಲ್ಲಿಕಾರ್ಜುನ ಸಾಲಿ ನೇತೃತ್ವದಲ್ಲಿ ಸಿಪಿಐ ಮಂಜುನಾಥ್ ಎಸ್, ನಿಂಬರ್ಗಾ ಪಿಎಸ್​ಐ ಸಂತೋಷಕುಮಾರ ಚವ್ಹಾಣ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 7.96 ಲಕ್ಷ ರೂಪಾಯಿ ಮೌಲ್ಯದ 157 ಗ್ರಾಂ ಚಿನ್ನಾಭರಣ, 230 ಗ್ರಾಂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.