ETV Bharat / state

ಕೆಕೆಆರ್​ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರು ಹೇಳಿಕೆ ಬಗ್ಗೆ ಕಾನೂನು ಕ್ರಮಕ್ಕೆ ಆದೇಶ - legal action against KKRDB president Dattatreya Patil Revur statement on Gram panchayat

ಅವಿರೋಧ ಆಯ್ಕೆಯಾಗುವ ಪಂಚಾಯತ್‌ಗೆ ವಿಶೇಷ ಅನುದಾನ ನೀಡುವುದಾಗಿ ಅಭ್ಯರ್ಥಿಗಳಿಗೆ ಆಮಿಷ ಒಡ್ಡುವ ಮೂಲಕ‌ ಚುನಾವಣಾ ಆಯೋಗ ಜಾರಿಗೆ ತಂದ‌ ನೀತಿ‌ ಸಂಹಿತೆ ಉಲ್ಲಂಘಿಸಿದ್ದರು. ಈ‌ ಹಿನ್ನೆಲೆಯಲ್ಲಿ‌ ದೂರು ಸಲ್ಲಿಸಲಾಗಿತ್ತು..

legal action against KKRDB president Dattatreya Patil Revur
ಕೆಕೆಆರ್​ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರು
author img

By

Published : Dec 18, 2020, 11:16 AM IST

ಕಲಬುರಗಿ : ಅವಿರೋಧವಾಗಿ ಆಯ್ಕೆಯಾಗುವ ಗ್ರಾಮ ಪಂಚಾಯತ್‌ಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು‌ ಕೆಕೆಆರ್​ಡಿಬಿಯಿಂದ‌ ನೀಡಲಾಗುವುದು ಎಂದು ದತ್ತಾತ್ರೇಯ ಪಾಟೀಲ್ ರೇವೂರು ಹೇಳಿಕೆ‌ ಹಿನ್ನೆಲೆ ಅಗತ್ಯ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಅಧೀನ ಕಾರ್ಯದರ್ಶಿ ಅವರು ಕಲಬುರಗಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

legal action against KKRDB president Dattatreya Patil Revur
ದತ್ತಾತ್ರೇಯ ಪಾಟೀಲ್ ರೇವೂರು ಹೇಳಿಕೆ ಬಗ್ಗೆ ಕಾನೂನು ಕ್ರಮಕ್ಕೆ ಆದೇಶ

ಗ್ರಾಮ ಪಂಚಾಯತ್‌ ಚುನಾವಣೆಗೆ ಆಮಿಷ ಒಡ್ಡಿದ ಆರೋಪದಡಿ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ. ಚುನಾವಣೆ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ್ ಹಾಗೂ ಮಾಜಿ ಎಂ‌ಎಲ್​ಸಿ ಅಲ್ಲಮಪ್ರಭು ಪಾಟೀಲ್‌ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ‌ ಕ್ರಮಕ್ಕೆ ಸೂಚಿಸಲಾಗಿದೆ.

ಇದನ್ನೂ ಓದಿ: ಬಳೂರ್ಗಿ ಗ್ರಾಪಂ ಚುನಾವಣೆ.. ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಪತಿ-ಪತ್ನಿ

ಚುನಾವಣಾ ಆಯೋಗದ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸ್ವಾಗತ : ಚುನಾವಣಾ ಆಯೋಗದ ಕ್ರಮವನ್ನು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸ್ವಾಗತಿಸಿದ್ದಾರೆ. ಕೆಕೆಆರ್​ಡಿಬಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ರೇವೂರು ಅವರು ಅವಿರೋಧ ಆಯ್ಕೆಯಾಗುವ ಪಂಚಾಯತ್‌ಗೆ ವಿಶೇಷ ಅನುದಾನ ನೀಡುವುದಾಗಿ ಅಭ್ಯರ್ಥಿಗಳಿಗೆ ಆಮಿಷ ಒಡ್ಡುವ ಮೂಲಕ‌ ಚುನಾವಣಾ ಆಯೋಗ ಜಾರಿಗೆ ತಂದ‌ ನೀತಿ‌ ಸಂಹಿತೆ ಉಲ್ಲಂಘಿಸಿದ್ದರು. ಈ‌ ಹಿನ್ನೆಲೆಯಲ್ಲಿ‌ ದೂರು ಸಲ್ಲಿಸಲಾಗಿತ್ತು. ಈಗ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ ಕ್ರಮ ಎಂದು ಹೇಳಿದ್ದಾರೆ.

ಕಲಬುರಗಿ : ಅವಿರೋಧವಾಗಿ ಆಯ್ಕೆಯಾಗುವ ಗ್ರಾಮ ಪಂಚಾಯತ್‌ಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು‌ ಕೆಕೆಆರ್​ಡಿಬಿಯಿಂದ‌ ನೀಡಲಾಗುವುದು ಎಂದು ದತ್ತಾತ್ರೇಯ ಪಾಟೀಲ್ ರೇವೂರು ಹೇಳಿಕೆ‌ ಹಿನ್ನೆಲೆ ಅಗತ್ಯ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಅಧೀನ ಕಾರ್ಯದರ್ಶಿ ಅವರು ಕಲಬುರಗಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

legal action against KKRDB president Dattatreya Patil Revur
ದತ್ತಾತ್ರೇಯ ಪಾಟೀಲ್ ರೇವೂರು ಹೇಳಿಕೆ ಬಗ್ಗೆ ಕಾನೂನು ಕ್ರಮಕ್ಕೆ ಆದೇಶ

ಗ್ರಾಮ ಪಂಚಾಯತ್‌ ಚುನಾವಣೆಗೆ ಆಮಿಷ ಒಡ್ಡಿದ ಆರೋಪದಡಿ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ. ಚುನಾವಣೆ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ್ ಹಾಗೂ ಮಾಜಿ ಎಂ‌ಎಲ್​ಸಿ ಅಲ್ಲಮಪ್ರಭು ಪಾಟೀಲ್‌ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ‌ ಕ್ರಮಕ್ಕೆ ಸೂಚಿಸಲಾಗಿದೆ.

ಇದನ್ನೂ ಓದಿ: ಬಳೂರ್ಗಿ ಗ್ರಾಪಂ ಚುನಾವಣೆ.. ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಪತಿ-ಪತ್ನಿ

ಚುನಾವಣಾ ಆಯೋಗದ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸ್ವಾಗತ : ಚುನಾವಣಾ ಆಯೋಗದ ಕ್ರಮವನ್ನು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸ್ವಾಗತಿಸಿದ್ದಾರೆ. ಕೆಕೆಆರ್​ಡಿಬಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ರೇವೂರು ಅವರು ಅವಿರೋಧ ಆಯ್ಕೆಯಾಗುವ ಪಂಚಾಯತ್‌ಗೆ ವಿಶೇಷ ಅನುದಾನ ನೀಡುವುದಾಗಿ ಅಭ್ಯರ್ಥಿಗಳಿಗೆ ಆಮಿಷ ಒಡ್ಡುವ ಮೂಲಕ‌ ಚುನಾವಣಾ ಆಯೋಗ ಜಾರಿಗೆ ತಂದ‌ ನೀತಿ‌ ಸಂಹಿತೆ ಉಲ್ಲಂಘಿಸಿದ್ದರು. ಈ‌ ಹಿನ್ನೆಲೆಯಲ್ಲಿ‌ ದೂರು ಸಲ್ಲಿಸಲಾಗಿತ್ತು. ಈಗ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ ಕ್ರಮ ಎಂದು ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.