ETV Bharat / state

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ, ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ: ಸಚಿವ ಕೆ. ಸುಧಾಕರ್

author img

By

Published : Feb 21, 2021, 2:02 PM IST

ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಾರ್ಗಸೂಚಿ ಹೊರಡಿಸಲಾಗಿದೆ. ಕಲಬುರಗಿಗೂ ಮಹಾರಾಷ್ಟ್ರದಿಂದ ಜನರ ಸಂಚಾರ ಹೊಂದಿಕೊಂಡಿದ್ದರಿಂದ ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

Minister Sudhakar statement on Strict action in border districts
ಸಚಿವ ಕೆ.ಸುಧಾಕರ್ ಹೇಳಿಕೆ

ಕಲಬುರಗಿ: ನೆರೆ ರಾಜ್ಯಗಳಲ್ಲಿ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿರುವುದರಿಂದ, ಈಗಾಗಲೇ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಸಚಿವ ಕೆ.ಸುಧಾಕರ್ ಹೇಳಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಾರ್ಗಸೂಚಿ ಹೊರಡಿಸಲಾಗಿದೆ. ಮಹಾರಾಷ್ಟ್ರ ಸಹ ಕಲಬುರಗಿ ಗಡಿಗೆ ಹೊಂದಿಕೊಂಡಿದ್ದರಿಂದ ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ನೆರೆ ರಾಜ್ಯಗಳಲ್ಲಿ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿರುವುದರಿಂದ, ಈಗಾಗಲೇ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಸಚಿವ ಕೆ.ಸುಧಾಕರ್ ಹೇಳಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಾರ್ಗಸೂಚಿ ಹೊರಡಿಸಲಾಗಿದೆ. ಮಹಾರಾಷ್ಟ್ರ ಸಹ ಕಲಬುರಗಿ ಗಡಿಗೆ ಹೊಂದಿಕೊಂಡಿದ್ದರಿಂದ ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.