ಕಲಬುರಗಿ: ಮತ್ತೆ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಇಲ್ಲಿನ ಎರಡು ಬಡಾವಣೆಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಸಾಯಿಪ್ರಸಾದ್ (9), ಶರಣಪ್ಪ(60), ಉಷಾಲತಾ(21), ಮಹಾದೇವಿ(78) ಹಾಗೂ ಹನುಮಂತ(25) ಗಾಯಗೊಂಡಿರುವವರು. ಇವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಮಹಾದೇವಿ ಎಂಬುವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಇವರೆಲ್ಲ ದೇವಾನಗರ ಹಾಗೂ ಓಝಾ ಕಾಲೋನಿಯ ನಿವಾಸಿಗಳಾಗಿದ್ದಾರೆ.
ಬೀದಿ ನಾಯಿಗಳ ನಿಯಂತ್ರಣ ಮಾಡದ ಪಾಲಿಕೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದು, ಕೂಡಲೇ ಬೀದಿನಾಯಿಗಳ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿದ್ದಾರೆ.