ETV Bharat / state

ಕಲಬುರಗಿ KVKಗೆ ಒಲಿದ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ ಪ್ರಶಸ್ತಿ

author img

By

Published : Jul 18, 2021, 7:00 AM IST

ಕಲಬುರಗಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ 2020ನೇ ಸಾಲಿನ ಪಂಡಿತ್ ದೀನ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ ಪ್ರಶಸ್ತಿ ಲಭಿಸಿದೆ. ದೇಶದಲ್ಲಿರುವ ಒಟ್ಟು 722 ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರಗಳ ಪೈಕಿ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.

Kalburgi
ಕಲಬುರಗಿಯ ಕೃಷಿ ವಿಜ್ಞಾನ ಕೇಂದ್ರ

ಕಲಬುರಗಿ: ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಕಲಬುರಗಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ 2020ನೇ ಸಾಲಿನ ಪಂಡಿತ್ ದೀನ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ ಪ್ರಶಸ್ತಿ ಲಭಿಸಿದ್ದು, ಜಿಲ್ಲೆಗೆ ಮತ್ತೊಂದು ಗರಿಮೆ ಬಂದಂತಾಗಿದೆ.

ಕೃಷಿಯಲ್ಲಿ ತಂತ್ರಜ್ಞಾನಾಧಾರಿತ ಅಧಿಕ ಹಾಗೂ ಗುಣಮಟ್ಟದ ಇಳುವರಿ ಮತ್ತು ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಕೃಷಿ ವಿಜ್ಞಾನ ಕೇಂದ್ರಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿ 8 ಲಕ್ಷ ರೂ. ನಗದು, ಟ್ರೋಫಿ ಮತ್ತು ಪ್ರಮಾಣಪತ್ರ ಹೊಂದಿದೆ. ದೇಶದಲ್ಲಿರುವ ಒಟ್ಟು 722 ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರಗಳ ಪೈಕಿ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದು, ನಾಡಿಗೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೀರ್ತಿ ತಂದುಕೊಟ್ಟಿದೆ.

ಪ್ರಮುಖವಾಗಿ ತೊಗರಿ ಬೆಳೆಯಲ್ಲಿ ಕಂಡು ಬರುವ ನೆಟೆ ಮತ್ತು ಗೊಡ್ಡು ರೋಗ ನಿರೋಧಕ ತಳಿಗಳನ್ನು ಅಧಿಕ ಕ್ಷೇತ್ರಗಳಿಗೆ ವಿಸ್ತರಿಸಿ ಪಲ್ಸ್​ಮ್ಯಾಜಿಕ್ ತಂತ್ರಜ್ಞಾನದ ಬಳಕೆ, ಸಮಗ್ರ ಕೀಟ ನಿರ್ವಹಣಾ ತಂತ್ರಜ್ಞಾನಗಳನ್ನು ರೈತರು ಅಳವಡಿಸಿಕೊಂಡು, ಹೆಚ್ಚು ಇಳುವರಿ ಪಡೆದು ಆರ್ಥಿಕವಾಗಿ ಬಲಗೊಳ್ಳುವಲ್ಲಿ ಕೃಷಿ ಕೇಂದ್ರ ತೊಡಗಿಸಿಕೊಂಡಿತ್ತು. ಈ ಪ್ರಶಸ್ತಿ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಮುಡಿಗೇರಲು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ: ರಾಜು ತೆಗಳ್ಳಿ ಹಾಗೂ ತಂಡದ ಶ್ರಮ ಕಾರಣವಾಗಿದೆ.

ಅದೆ ರೀತಿಯಾಗಿ ಪ್ರಗತಿಪರ ಕೃಷಿಕ ಹಾಳ ಸುಲ್ತಾನಪುರ ಗ್ರಾಮದ ಶರಣಬಸಪ್ಪ ಪಾಟೀಲ ಅವರಿಗೆ ರಾಷ್ಟ್ರಮಟ್ಟದ ಐಸಿಎಆರ್ “ಜಗಜೀವನ್ ರಾಮ್ ಆವಿಷ್ಕಾರ ಕೃಷಿಕ ಪುರಸ್ಕಾರ ಪ್ರಶಸ್ತಿ-2020’’ ಲಭಿಸಿದೆ. ಈ ಭಾಗದ ನೀರಿನ ಸದ್ಬಳಕೆ ಮಾಡುವುದು, ಸೌರಶಕ್ತಿ ವಿದ್ಯುತ್ ದೀಪ ಹಾಗು ಇನ್ನಿತರೆ ಕೃಷಿ ಚಟುವಟಿಕೆಗಳಿಗೆ ಬೇಕಾದ ಉಪಯುಕ್ತ ಆವಿಷ್ಕಾರಕ್ಕಾಗಿ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನರಾಗುವ ಮೂಲಕ ಕಲಬುರಗಿ ಜಿಲ್ಲೆಗೆ ಮತ್ತೊಂದು ಗರಿಮೆ ಸಿಕ್ಕಂತಾಗಿದೆ.

ಕಲಬುರಗಿ: ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಕಲಬುರಗಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ 2020ನೇ ಸಾಲಿನ ಪಂಡಿತ್ ದೀನ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ ಪ್ರಶಸ್ತಿ ಲಭಿಸಿದ್ದು, ಜಿಲ್ಲೆಗೆ ಮತ್ತೊಂದು ಗರಿಮೆ ಬಂದಂತಾಗಿದೆ.

ಕೃಷಿಯಲ್ಲಿ ತಂತ್ರಜ್ಞಾನಾಧಾರಿತ ಅಧಿಕ ಹಾಗೂ ಗುಣಮಟ್ಟದ ಇಳುವರಿ ಮತ್ತು ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಕೃಷಿ ವಿಜ್ಞಾನ ಕೇಂದ್ರಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿ 8 ಲಕ್ಷ ರೂ. ನಗದು, ಟ್ರೋಫಿ ಮತ್ತು ಪ್ರಮಾಣಪತ್ರ ಹೊಂದಿದೆ. ದೇಶದಲ್ಲಿರುವ ಒಟ್ಟು 722 ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರಗಳ ಪೈಕಿ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದು, ನಾಡಿಗೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೀರ್ತಿ ತಂದುಕೊಟ್ಟಿದೆ.

ಪ್ರಮುಖವಾಗಿ ತೊಗರಿ ಬೆಳೆಯಲ್ಲಿ ಕಂಡು ಬರುವ ನೆಟೆ ಮತ್ತು ಗೊಡ್ಡು ರೋಗ ನಿರೋಧಕ ತಳಿಗಳನ್ನು ಅಧಿಕ ಕ್ಷೇತ್ರಗಳಿಗೆ ವಿಸ್ತರಿಸಿ ಪಲ್ಸ್​ಮ್ಯಾಜಿಕ್ ತಂತ್ರಜ್ಞಾನದ ಬಳಕೆ, ಸಮಗ್ರ ಕೀಟ ನಿರ್ವಹಣಾ ತಂತ್ರಜ್ಞಾನಗಳನ್ನು ರೈತರು ಅಳವಡಿಸಿಕೊಂಡು, ಹೆಚ್ಚು ಇಳುವರಿ ಪಡೆದು ಆರ್ಥಿಕವಾಗಿ ಬಲಗೊಳ್ಳುವಲ್ಲಿ ಕೃಷಿ ಕೇಂದ್ರ ತೊಡಗಿಸಿಕೊಂಡಿತ್ತು. ಈ ಪ್ರಶಸ್ತಿ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಮುಡಿಗೇರಲು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ: ರಾಜು ತೆಗಳ್ಳಿ ಹಾಗೂ ತಂಡದ ಶ್ರಮ ಕಾರಣವಾಗಿದೆ.

ಅದೆ ರೀತಿಯಾಗಿ ಪ್ರಗತಿಪರ ಕೃಷಿಕ ಹಾಳ ಸುಲ್ತಾನಪುರ ಗ್ರಾಮದ ಶರಣಬಸಪ್ಪ ಪಾಟೀಲ ಅವರಿಗೆ ರಾಷ್ಟ್ರಮಟ್ಟದ ಐಸಿಎಆರ್ “ಜಗಜೀವನ್ ರಾಮ್ ಆವಿಷ್ಕಾರ ಕೃಷಿಕ ಪುರಸ್ಕಾರ ಪ್ರಶಸ್ತಿ-2020’’ ಲಭಿಸಿದೆ. ಈ ಭಾಗದ ನೀರಿನ ಸದ್ಬಳಕೆ ಮಾಡುವುದು, ಸೌರಶಕ್ತಿ ವಿದ್ಯುತ್ ದೀಪ ಹಾಗು ಇನ್ನಿತರೆ ಕೃಷಿ ಚಟುವಟಿಕೆಗಳಿಗೆ ಬೇಕಾದ ಉಪಯುಕ್ತ ಆವಿಷ್ಕಾರಕ್ಕಾಗಿ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನರಾಗುವ ಮೂಲಕ ಕಲಬುರಗಿ ಜಿಲ್ಲೆಗೆ ಮತ್ತೊಂದು ಗರಿಮೆ ಸಿಕ್ಕಂತಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.