ETV Bharat / state

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಸಿಐಡಿಯಿಂದ ಆರೋಪಿ ಯುವತಿಯ ಬಂಧನ

author img

By

Published : Apr 28, 2022, 7:34 PM IST

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

one-more-accused-arrested-in-karnataka-psi-recruitment-scam
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ

ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಿಂಗ್​ಪಿನ್​ ಜೊತೆ ನಿಕಟ ಸಂಪರ್ಕ ಹೊಂದಿದ್ದ ಜ್ಯೋತಿ ಪಾಟೀಲ್ ಎಂಬುವಳೆ ಬಂಧಿತ ಆರೋಪಿಯಾಗಿದ್ದಾಳೆ.

ಜ್ಯೋತಿ ಅಭ್ಯರ್ಥಿ ಶಾಂತಿಬಾಯಿ ಅಕ್ರಮದಿಂದ ನೇರವಾಗಿ ಆಯ್ಕೆಯಾಗಲು ನೆರವಾಗಿದ್ದಳು ಎನ್ನಲಾಗಿದೆ. ಪಿಎಸ್ಐ ನೇಮಕಾತಿ ಅಕ್ರಮ ಪಟ್ಟಿಯಲ್ಲಿ ಹೆಸರು ಹೊಂದಿರುವ ಶಾಂತಿಬಾಯಿ ಸದ್ಯ ನಾಪತ್ತೆಯಾಗಿದ್ದಾಳೆ. ತಲೆಮರೆಸಿಕೊಂಡಿರುವ ಇನ್ನೊಬ್ಬ ಕಿಂಗ್​ಪಿನ್ ಇಂಜಿನಿಯರ್ ಮಂಜುನಾಥ್ ಪಾಟೀಲ್​ಗೆ ಶಾಂತಿಬಾಯಿಯನ್ನು ಭೇಟಿ ಮಾಡಿಸಿರುವುದು ಕೂಡ ಆರೋಪಿ ಜ್ಯೋತಿ ಪಾಟೀಲ್ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ನೋಟಿಸ್​ಗೆ ಲಿಖಿತ ಉತ್ತರ ‌ನೀಡಿದ ಪ್ರಿಯಾಂಕ್ ಖರ್ಗೆ

ಮಂಜುನಾಥ್ ಜೊತೆಗೆ ನಿಕಟ ಸಂಪರ್ಕ ಹೊಂದಿರುವ ಜ್ಯೋತಿ ಪಾಟೀಲ್, ಈ ಮೊದಲು ಬೆಂಗಳೂರಿನ ಆರ್​ಡಿಪಿಆರ್​​ನಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ತಿಂಗಳ ಹಿಂದೆಯಷ್ಟೇ ಶಹಾಬಾದ್​ ನಗರಸಭೆಗೆ ವರ್ಗಾವಣೆಯಾಗಿದ್ದಳು. ಸದ್ಯ ಆರೋಪಿಗಳಾದ ಶಾಂತಿಬಾಯಿ, ಮಂಜುನಾಥ್ ನಾಪತ್ತೆಯಾಗಿದ್ದು, ಇಬ್ಬರ ನಡುವಿನ ಮಧ್ಯವರ್ತಿ ಜ್ಯೋತಿ ಪಾಟೀಲ್ ಸಿಐಡಿ ಬಲೆಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ಪೊಲೀಸರಿಗೆ ಶರಣಾಗುವಂತೆ ಆರೋಪಿ ದಿವ್ಯಾ ಹಾಗರಗಿಗೆ ಎಚ್ಚರಿಕೆ ನೀಡಿದ ಗೃಹ ಸಚಿವ

ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಿಂಗ್​ಪಿನ್​ ಜೊತೆ ನಿಕಟ ಸಂಪರ್ಕ ಹೊಂದಿದ್ದ ಜ್ಯೋತಿ ಪಾಟೀಲ್ ಎಂಬುವಳೆ ಬಂಧಿತ ಆರೋಪಿಯಾಗಿದ್ದಾಳೆ.

ಜ್ಯೋತಿ ಅಭ್ಯರ್ಥಿ ಶಾಂತಿಬಾಯಿ ಅಕ್ರಮದಿಂದ ನೇರವಾಗಿ ಆಯ್ಕೆಯಾಗಲು ನೆರವಾಗಿದ್ದಳು ಎನ್ನಲಾಗಿದೆ. ಪಿಎಸ್ಐ ನೇಮಕಾತಿ ಅಕ್ರಮ ಪಟ್ಟಿಯಲ್ಲಿ ಹೆಸರು ಹೊಂದಿರುವ ಶಾಂತಿಬಾಯಿ ಸದ್ಯ ನಾಪತ್ತೆಯಾಗಿದ್ದಾಳೆ. ತಲೆಮರೆಸಿಕೊಂಡಿರುವ ಇನ್ನೊಬ್ಬ ಕಿಂಗ್​ಪಿನ್ ಇಂಜಿನಿಯರ್ ಮಂಜುನಾಥ್ ಪಾಟೀಲ್​ಗೆ ಶಾಂತಿಬಾಯಿಯನ್ನು ಭೇಟಿ ಮಾಡಿಸಿರುವುದು ಕೂಡ ಆರೋಪಿ ಜ್ಯೋತಿ ಪಾಟೀಲ್ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ನೋಟಿಸ್​ಗೆ ಲಿಖಿತ ಉತ್ತರ ‌ನೀಡಿದ ಪ್ರಿಯಾಂಕ್ ಖರ್ಗೆ

ಮಂಜುನಾಥ್ ಜೊತೆಗೆ ನಿಕಟ ಸಂಪರ್ಕ ಹೊಂದಿರುವ ಜ್ಯೋತಿ ಪಾಟೀಲ್, ಈ ಮೊದಲು ಬೆಂಗಳೂರಿನ ಆರ್​ಡಿಪಿಆರ್​​ನಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ತಿಂಗಳ ಹಿಂದೆಯಷ್ಟೇ ಶಹಾಬಾದ್​ ನಗರಸಭೆಗೆ ವರ್ಗಾವಣೆಯಾಗಿದ್ದಳು. ಸದ್ಯ ಆರೋಪಿಗಳಾದ ಶಾಂತಿಬಾಯಿ, ಮಂಜುನಾಥ್ ನಾಪತ್ತೆಯಾಗಿದ್ದು, ಇಬ್ಬರ ನಡುವಿನ ಮಧ್ಯವರ್ತಿ ಜ್ಯೋತಿ ಪಾಟೀಲ್ ಸಿಐಡಿ ಬಲೆಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ಪೊಲೀಸರಿಗೆ ಶರಣಾಗುವಂತೆ ಆರೋಪಿ ದಿವ್ಯಾ ಹಾಗರಗಿಗೆ ಎಚ್ಚರಿಕೆ ನೀಡಿದ ಗೃಹ ಸಚಿವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.