ETV Bharat / state

ಕಲಬುರಗಿ: 3 ದಿನಗಳ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಯಶಸ್ವಿ

author img

By

Published : Feb 8, 2023, 11:03 PM IST

ಮೂರು ದಿನಗಳ ಕಾಲ ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆ ನಡೆಯಿತು.

prajadwani-yatr
ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ

ಕಲಬುರಗಿ: ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಮೂರು ದಿನದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಮಾಪನಗೊಂಡಿತು. ಕಲ್ಯಾಣ ಕರ್ನಾಟಕದ 41 ವಿಧಾನಸಭೆ ಕ್ಷೇತ್ರಗಳಲ್ಲಿ ಕೈ ಪಡೆ ಕಮಾಲ್ ಮಾಡಲು ಪ್ರಜಾಧ್ವನಿ ಮೂಲಕ ಮತದಾರನ ಮನ ಗೆದ್ದು ಅಧಿಕಾರದ ಗದ್ದುಗೆ ಏರಲು ಅಬ್ಬರದ ಪ್ರಚಾರ ನಡೆಸುತ್ತಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಶಾಸಕ ಪ್ರಿಯಾಂಕ್​ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದಲ್ಲಿ ನಡೆದ ಯಾತ್ರೆಗೆ ಜನರಿಂದ ಬೆಂಬಲ ಸಿಕ್ಕಿದೆ. ಕೈ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ರೋಡ್ ಶೋ ನಡೆಸಿ ಸಿದ್ದರಾಮಯ್ಯಗೆ ಸ್ವಾಗತ ಕೋರಿದರು.

ಬಳಿಕ ಬೃಹತ್ ಸಮಾವೇಶದಲ್ಲಿ ಮಾತಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಬಿಜೆಪಿಯರಿಗೆ ಚಿತ್ತಾಪುರ ಕ್ಷೇತ್ರದಲ್ಲಿ ಕ್ಯಾಂಡಿಡೇಟ್‌ ಸಿಗ್ತಿಲ್ಲ. ಯಾರ್ ಬರ್ತಾರೋ ಬರಲಿ, ನಾನು ಬ್ಯಾಟ್ ಹಿಡಿದು ನಿಂತಿದ್ದೇನೆ ಎಂದರು. ಮಾಜಿ ಸಚಿವ ಜಮೀರ್ ಅಹ್ಮದ್ ಕೂಡ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿ ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರಂತಹ ಲೀಡರ್ ನಿಮಗೆ ಸಿಗೋದಿಲ್ಲ. ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಲ್ಪಸಂಖ್ಯಾತರಿಗೆ ಜಮೀರ್ ಮನವಿ ಮಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಪ್ರಿಯಾಂಕ ಖರ್ಗೆ ವಿಚಾರವಂತ, ಕ್ರೀಯಾಶೀಲ ರಾಜಕಾರಣಿ. ನನ್ನ ಸಚಿವ ಸಂಪುಟದಲ್ಲಿ ಪ್ರಿಯಾಂಕ್ ಮಂತ್ರಿ ಆಗಿದ್ದರು. ಪ್ರಾಮಾಣಿಕ, ನಿಷ್ಠೆಯಿಂದ ಕೆಲಸ ಮಾಡಿದ್ದಾರೆ ಎಂದರು. ಬಳಿಕ ರಾಜ್ಯ, ಕೇಂದ್ರ ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅವರು ಎಷ್ಟರ ಮಟ್ಟಿಗೆ ಭ್ರಷ್ಟಾಚಾರ ಮಾಡಿದ್ದಾರೆ ಅಂದರೆ ಕೋವಿಡ್ ಸಮಯದಲ್ಲಿ ಮೆಡಿಕಲ್‌ ಉಪಕರಣ ಖರೀದಿಯಲ್ಲಿ 2000 ಕೋಟಿ ಲೂಟಿ ಹೊಡೆದಿದ್ದಾರೆ. ಇಷ್ಟೊಂದು ಲಂಚ ಹೊಡೆದ ಸರ್ಕಾರ ನನ್ನ ರಾಜಕೀಯ ಜೀವನದಲ್ಲಿ ನೋಡೇ ಇಲ್ಲ. ಜನವಿರೋಧಿ ಬಿಜೆಪಿ ಸರ್ಕಾರಕ್ಕೆ ವೋಟ್ ಹಾಕಬಾರದು ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಟಾರ್ಗೆಟ್ ಕರಾವಳಿ: ಫೆ. 11 ರಂದು ಪುತ್ತೂರಿಗೆ ಅಮಿತ್ ಶಾ ಭೇಟಿ..!

ಕಲಬುರಗಿ: ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಮೂರು ದಿನದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಮಾಪನಗೊಂಡಿತು. ಕಲ್ಯಾಣ ಕರ್ನಾಟಕದ 41 ವಿಧಾನಸಭೆ ಕ್ಷೇತ್ರಗಳಲ್ಲಿ ಕೈ ಪಡೆ ಕಮಾಲ್ ಮಾಡಲು ಪ್ರಜಾಧ್ವನಿ ಮೂಲಕ ಮತದಾರನ ಮನ ಗೆದ್ದು ಅಧಿಕಾರದ ಗದ್ದುಗೆ ಏರಲು ಅಬ್ಬರದ ಪ್ರಚಾರ ನಡೆಸುತ್ತಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಶಾಸಕ ಪ್ರಿಯಾಂಕ್​ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದಲ್ಲಿ ನಡೆದ ಯಾತ್ರೆಗೆ ಜನರಿಂದ ಬೆಂಬಲ ಸಿಕ್ಕಿದೆ. ಕೈ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ರೋಡ್ ಶೋ ನಡೆಸಿ ಸಿದ್ದರಾಮಯ್ಯಗೆ ಸ್ವಾಗತ ಕೋರಿದರು.

ಬಳಿಕ ಬೃಹತ್ ಸಮಾವೇಶದಲ್ಲಿ ಮಾತಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಬಿಜೆಪಿಯರಿಗೆ ಚಿತ್ತಾಪುರ ಕ್ಷೇತ್ರದಲ್ಲಿ ಕ್ಯಾಂಡಿಡೇಟ್‌ ಸಿಗ್ತಿಲ್ಲ. ಯಾರ್ ಬರ್ತಾರೋ ಬರಲಿ, ನಾನು ಬ್ಯಾಟ್ ಹಿಡಿದು ನಿಂತಿದ್ದೇನೆ ಎಂದರು. ಮಾಜಿ ಸಚಿವ ಜಮೀರ್ ಅಹ್ಮದ್ ಕೂಡ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿ ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರಂತಹ ಲೀಡರ್ ನಿಮಗೆ ಸಿಗೋದಿಲ್ಲ. ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಲ್ಪಸಂಖ್ಯಾತರಿಗೆ ಜಮೀರ್ ಮನವಿ ಮಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಪ್ರಿಯಾಂಕ ಖರ್ಗೆ ವಿಚಾರವಂತ, ಕ್ರೀಯಾಶೀಲ ರಾಜಕಾರಣಿ. ನನ್ನ ಸಚಿವ ಸಂಪುಟದಲ್ಲಿ ಪ್ರಿಯಾಂಕ್ ಮಂತ್ರಿ ಆಗಿದ್ದರು. ಪ್ರಾಮಾಣಿಕ, ನಿಷ್ಠೆಯಿಂದ ಕೆಲಸ ಮಾಡಿದ್ದಾರೆ ಎಂದರು. ಬಳಿಕ ರಾಜ್ಯ, ಕೇಂದ್ರ ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅವರು ಎಷ್ಟರ ಮಟ್ಟಿಗೆ ಭ್ರಷ್ಟಾಚಾರ ಮಾಡಿದ್ದಾರೆ ಅಂದರೆ ಕೋವಿಡ್ ಸಮಯದಲ್ಲಿ ಮೆಡಿಕಲ್‌ ಉಪಕರಣ ಖರೀದಿಯಲ್ಲಿ 2000 ಕೋಟಿ ಲೂಟಿ ಹೊಡೆದಿದ್ದಾರೆ. ಇಷ್ಟೊಂದು ಲಂಚ ಹೊಡೆದ ಸರ್ಕಾರ ನನ್ನ ರಾಜಕೀಯ ಜೀವನದಲ್ಲಿ ನೋಡೇ ಇಲ್ಲ. ಜನವಿರೋಧಿ ಬಿಜೆಪಿ ಸರ್ಕಾರಕ್ಕೆ ವೋಟ್ ಹಾಕಬಾರದು ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಟಾರ್ಗೆಟ್ ಕರಾವಳಿ: ಫೆ. 11 ರಂದು ಪುತ್ತೂರಿಗೆ ಅಮಿತ್ ಶಾ ಭೇಟಿ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.