ಕಲಬುರಗಿ: ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆಯನ್ನು ತೋರಿಸುತ್ತಲೇ ಇದೆ. ಕರ್ನಾಟಕ ಕೇವಲ ತೆರಿಗೆ ವಸೂಲಾತಿಗಷ್ಟೇ ಸೀಮಿತವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸರ್ವ ಶಿಕ್ಷಣ ಅಭಿಯಾನದ ಭಾಗವಾಗಿ ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ 2 ಜೊತೆ ಸಮವಸ್ತ್ರ ನೀಡಬೇಕಿತ್ತು. ಆದರೆ, ಕೇಂದ್ರ ಸರ್ಕಾರ ತನಗೂ ಅದಕ್ಕೂ ಸಂಬಂಧವೇ ಇಲ್ಲದಂತೆ ಕುಳಿತಿದೆ. ಈ ಕುರಿತು ಕೊಪ್ಪಳದ 8 ವರ್ಷದ ಬಾಲಕ ಮಂಜುನಾಥ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿ ಸಾರ್ವಜನಿಕವಾಗಿ ಒತ್ತಡ ಹೇರಿತ್ತು.
ಕೇಂದ್ರದಿಂದಾಗಿರುವ ಮೋಸವನ್ನು ಮರೆಮಾಚಲು ಈಗ ರಾಜ್ಯವೇ ಹೈಕೋರ್ಟ್ ಮುಂದೆ ತನ್ನ ಬೊಕ್ಕಸದಿಂದ ಸಮವಸ್ತ್ರವನ್ನು ಮಕ್ಕಳಿಗೆ ನೀಡುವುದಾಗಿ ತಿಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಸಂಕಷ್ಟಕ್ಕೆ ಜೊತೆಯಾಗಿ ನಿಂತು ಪರಿಹಾರ ನೀಡಬೇಕಿದ್ದ ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿದೆ. ತನ್ನ ಹಾಗೂ ರಾಜ್ಯಗಳ ನಡುವೆ ಸೌಹಾರ್ದಯುತ ಅನುಬಂಧ ಕಾಪಾಡಿಕೊಳ್ಳುವುದು, ಕೇಂದ್ರದ ಸಾಂವಿಧಾನಿಕ ಜವಾಬ್ದಾರಿ. ಆದರೆ, ಕರ್ನಾಟಕ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಈ ಸಂಬಂಧ ಮುರಿದು ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
- " class="align-text-top noRightClick twitterSection" data="">