ಕಲಬುರಗಿ: ಕೊರೊನಾ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆ ಜಿಲ್ಲೆಯ ಕೇಂದ್ರ ಕಾರಾಗೃಹದಿಂದ ಹಲವು ವಿಚಾರಣಾಧೀನ ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಕೇಂದ್ರ ಕಾರಾಗೃಹದಲ್ಲಿದ್ದ 24 ವಿಚಾರಣಾಧೀನ ಕೈದಿಗಳಿಗೆ ಪೆರೋಲ್ ನೀಡಲಾಗಿದ್ದು, ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪೆರೋಲ್ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರಾಗೃಹ ಇಲಾಖೆಯೇ ಅವರವರ ಮನೆಗಳಿಗೆ ಕಳುಹಿಸಿಕೊಟ್ಟಿದೆ. ಈಗಾಗಲೇ ಶಿಕ್ಷೆ ಅನುಭವಿಸುತ್ತಿರೋ ಕೈದಿಗಳ ಬಿಡುಗಡೆಗೂ ಪ್ರಸ್ತಾವನೆ ಬಂದಿದ್ದು, ಪೊಲೀಸರ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಹೀಗಾಗಿ ಮತ್ತಷ್ಟು ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡವ ಸಾಧ್ಯತೆಗಳಿವೆ.