ಕೊಪ್ಪಳ: ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟು ಕಸರತ್ತು ನಡೆಸಿದ್ದಾರೆ.
ಈ ನಡುವೆ ಅಭ್ಯರ್ಥಿಯಾಗಿ ಮಾಜಿ ಸಚಿವ ಶಿವರಾಜ್ ತಂಗಡಗಿ ಆಯ್ಕೆಯಾಗಿದ್ದಾರೆ ಎಂದು ಫೇಸ್ಬುಕ್ನಲ್ಲಿ ಪೋಸ್ಟೊಂದು ಇಂದು ಮಧ್ಯಾಹ್ನದಿಂದ ಹರಿದಾಡುತ್ತಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಸಿದ್ದಾಪುರ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಫೇಸ್ಬುಕ್ ಪೇಜ್ನಲ್ಲಿ ಶಿವರಾಜ್ ತಂಗಡಗಿ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಅವರ ಅಭಿಮಾನಿಗಳು ಪೋಸ್ಟ್ ಮಾಡಿದ್ದಾರೆ.
"ಬಿಗ್ ಬ್ರೇಕಿಂಗ್ ನ್ಯೂಸ್, ಕೊಪ್ಪಳ ಲೋಕಸಭೆ ಅಭ್ಯರ್ಥಿಯಾಗಿ ಶ್ರೀ ಶಿವರಾಜ ತಂಗಡಗಿ ಆಯ್ಕೆ" ಎಂದು ಪೋಸ್ಟ್ ಮಾಡಲಾಗಿದೆ. ಹೀಗಾಗಿ, ಸದ್ಯಕ್ಕೆ ಈ ಪೋಸ್ಟ್ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಟಿಕೆಟ್ಗಾಗಿ ತಂದೆ-ಮಗನ ನಡುವೆ ಪೈಪೋಟಿ ಏರ್ಪಟ್ಟಿದೆ.
ಮಾಜಿ ಶಾಸಕ ಬಸವರಾಜ ಹಿಟ್ನಾಳ್- ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ್ ನಡುವೆ ಟಿಕೆಟ್ಗಾಗಿ ಭಾರಿ ಪೈಪೋಟಿ ನಡದಿದ್ದು, ಸದ್ಯ ಫೇಸ್ಬುಕ್ನಲ್ಲಿ ಮಾಡಲಾಗಿರುವ ಪೋಸ್ಟ್ ತೀವ್ರ ಕುತೂಹಲ ಮೂಡಿಸಿದೆ.