ETV Bharat / state

ರಾಜ್ಯದಲ್ಲಿ ಎರಡು ಸರ್ಕಾರಗಳಿವೆ, ಒಂದು ಸಿಎಂದು, ಇನ್ನೊಂದು ಅವರ ಮಗನದ್ದು : ಸಿದ್ದರಾಮಯ್ಯ ಆರೋಪ - ಕಲಬುರಗಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಸಾಕಷ್ಟು ಹಾನಿ ಆಗಿದ್ದರು, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಆಗಿರುವ ನಷ್ಟ ಕೂಡಾ ಇದೂವರೆಗೆ ಹಲವರಿಗೆ ಸಿಕ್ಕಿಲ್ಲ, ಆಡಳಿತದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Siddaramaiah Slams CM BS Yeddyurappa and Kumaraswamy In Kalaburagi
ಕಲಬುರಗಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
author img

By

Published : Oct 26, 2020, 1:30 PM IST

Updated : Oct 26, 2020, 2:49 PM IST

ಕಲಬುರಗಿ: ರಾಜ್ಯದಲ್ಲಿ ಎರಡು ಸರ್ಕಾರಗಳಿವೆ, ಒಂದು ಸರ್ಕಾರ ಸಿಎಂ ಯಡಿಯೂರಪ್ಪ ಅವರದ್ದು ಇದ್ದರೆ, ಇನ್ನೊಂದು ಸಿಎಂ ಅವರ ಪುತ್ರ ವಿಜಯೇಂದ್ರ ಅವರದ್ದು. ಎಲ್ಲರೂ ಸೇರಿ ರಾಜ್ಯವನ್ನು ಲೂಟಿ ಹೊಡೆಯುವ ಕೆಲಸ ಮಾಡುತ್ತಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹದಿಂದ ಉಂಟಾದ ಹಾನಿ ವೀಕ್ಷಣೆಗೆಂದು ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಆಗಷ್ಟ್​, ಸೆಪ್ಟೆಂಬರ್ ನಲ್ಲಿ ಒಂದಡೆ ಮಳೆ, ಇನ್ನೊಂದಡೆ ಕೊರೊನಾ ಇದ್ದರೂ ಅಧಿಕಾರಿಗಳಿಗೆ ಸಲಹೆ ಸೂಚನೆ ಕೊಡಲು ಉಸ್ತುವಾರಿಗಳು ತಮ್ಮ ಜಿಲ್ಲೆಯತ್ತ ಸುಳಿದಿಲ್ಲ. ಕಂದಾಯ ಸಚಿವ ಆರ್.ಅಶೋಕ್ ಬರ್ತಾರೆ ಪಿಕ್​ನಿಕ್ ಮಾಡಿ ಹೋದಂಗೆ ಹೋಗ್ತಾರೆ. ಸಿಎಂ ಮೇಲಿನಿಂದಲೇ ಪರಿಶೀಲನೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಹೋಗುತ್ತಾರೆ. ಕನಿಷ್ಟ ಪಕ್ಷ ಸ್ಥಳಿಯ ಶಾಸಕರೊಂದಿಗೆ ಚರ್ಚೆ ಮಾಡಿಲ್ಲ, ಹೀಗಾದರೆ ಇಲ್ಲಿನ ವಾಸ್ತವತೆ ಹೇಗೆ ಗೊತ್ತಾಗುತ್ತದೆ. ಮೇ ತಿಂಗಳಿನಿಂದ ಕಲಬುರಗಿ ಉಸ್ತುವಾರಿ ಸಚಿವರು ಜಿಲ್ಲೆಗೆ ಬಂದಿಲ್ಲ, ಹೀಗಾದರೆ ಅಧಿಕಾರಿಗಳಿಗೆ ಲಂಗು ಲಗಾಮ್ ಇಲ್ಲದಂತಾಗುತ್ತದೆ ಎಂದು ಹೇಳಿದರು.

ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಸಾಕಷ್ಟು ಹಾನಿ ಆಗಿದ್ದರು, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಆಗಿರುವ ನಷ್ಟ ಕೂಡಾ ಇದೂವರೆಗೆ ಹಲವರಿಗೆ ಸಿಕ್ಕಿಲ್ಲ, ಆಡಳಿತದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ರಾಜ್ಯದ ಮೇಲೆ ನಿರಂತರವಾಗಿ ಅನ್ಯಾಯ ಮಾಡುತ್ತಲೆ ಬರುತ್ತಿದೆ. 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ ಅನುದಾನ ನೀಡದೆ, ಆಯೋಗದ ಶಿಫಾರಸ್ಸು ಹಿಂಪಡೆಯುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದರು.

ಕೊರೊನಾ ಸಾಮಗ್ರಿ ಖರೀದಿ ನೇಪದಲ್ಲಿ ಸಾಕಷ್ಟು ದುಡ್ಡು ಕೊಳ್ಳಿ ಹೊಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು. ಬಿಜೆಪಿಯವರು ದುಡ್ಡಿನ ಮತ್ತು ಅಧಿಕಾರದ ಮದದಿಂದ ಉಪ ಚುನಾವಣೆಯಲ್ಲಿ ಗೆಲ್ಲುವ ಕನಸ್ಸಿನಲ್ಲಿದ್ದಾರೆ ಎಂದರು. ರಾಜ್ಯ ಸರ್ಕಾರದಿಂದ ಪರಿಹಾರ ತಕ್ಷಣ ಬಿಡುಗಡೆ ಮಾಡುವ ಕೆಲಸ ಆಗಬೇಕು. ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಜನರ ಕಷ್ಟಗಳಿಗೆ ಸ್ಪಂಧಿಸುವಂತಾಗಬೇಕೆಂದು ಒತ್ತಾಯಿಸಿದರು.

ಇದೆ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ತಮಗೆ ಕುಣಿಯಲು ಬರದವರು ನೇಲ ಡೊಂಕು ಇದೆ ಎಂದಂತಾಗಿದೆ‌ ಕುಮಾರಸ್ವಾಮಿ ಅವರ ಮಾತು. ಸಿಎಂ ಆಗಿ ಜನಪರ ಕೆಲಸ ಮಾಡಬಹುದಾಗಿತ್ತು. ಆದರೆ ಮಾಡದೆ ನನ್ನ ಮೇಲೆ ಟೀಕೆ ಮಾಡುತ್ತಿದ್ದಾರೆ. ಅದಕ್ಕೆ ಅನಿವಾರ್ಯವಾಗಿ ಉತ್ತರ ಕೊಡುತ್ತಿದ್ದೇನೆ. ಅವರ ಹುಳುಕು ಹೊರ ಹಾಕುತ್ತಿದ್ದೇನೆಂದು ನನ್ನ ವಿರುದ್ಧ ಕುಮಾರಸ್ವಾಮಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಕಲಬುರಗಿ: ರಾಜ್ಯದಲ್ಲಿ ಎರಡು ಸರ್ಕಾರಗಳಿವೆ, ಒಂದು ಸರ್ಕಾರ ಸಿಎಂ ಯಡಿಯೂರಪ್ಪ ಅವರದ್ದು ಇದ್ದರೆ, ಇನ್ನೊಂದು ಸಿಎಂ ಅವರ ಪುತ್ರ ವಿಜಯೇಂದ್ರ ಅವರದ್ದು. ಎಲ್ಲರೂ ಸೇರಿ ರಾಜ್ಯವನ್ನು ಲೂಟಿ ಹೊಡೆಯುವ ಕೆಲಸ ಮಾಡುತ್ತಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹದಿಂದ ಉಂಟಾದ ಹಾನಿ ವೀಕ್ಷಣೆಗೆಂದು ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಆಗಷ್ಟ್​, ಸೆಪ್ಟೆಂಬರ್ ನಲ್ಲಿ ಒಂದಡೆ ಮಳೆ, ಇನ್ನೊಂದಡೆ ಕೊರೊನಾ ಇದ್ದರೂ ಅಧಿಕಾರಿಗಳಿಗೆ ಸಲಹೆ ಸೂಚನೆ ಕೊಡಲು ಉಸ್ತುವಾರಿಗಳು ತಮ್ಮ ಜಿಲ್ಲೆಯತ್ತ ಸುಳಿದಿಲ್ಲ. ಕಂದಾಯ ಸಚಿವ ಆರ್.ಅಶೋಕ್ ಬರ್ತಾರೆ ಪಿಕ್​ನಿಕ್ ಮಾಡಿ ಹೋದಂಗೆ ಹೋಗ್ತಾರೆ. ಸಿಎಂ ಮೇಲಿನಿಂದಲೇ ಪರಿಶೀಲನೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಹೋಗುತ್ತಾರೆ. ಕನಿಷ್ಟ ಪಕ್ಷ ಸ್ಥಳಿಯ ಶಾಸಕರೊಂದಿಗೆ ಚರ್ಚೆ ಮಾಡಿಲ್ಲ, ಹೀಗಾದರೆ ಇಲ್ಲಿನ ವಾಸ್ತವತೆ ಹೇಗೆ ಗೊತ್ತಾಗುತ್ತದೆ. ಮೇ ತಿಂಗಳಿನಿಂದ ಕಲಬುರಗಿ ಉಸ್ತುವಾರಿ ಸಚಿವರು ಜಿಲ್ಲೆಗೆ ಬಂದಿಲ್ಲ, ಹೀಗಾದರೆ ಅಧಿಕಾರಿಗಳಿಗೆ ಲಂಗು ಲಗಾಮ್ ಇಲ್ಲದಂತಾಗುತ್ತದೆ ಎಂದು ಹೇಳಿದರು.

ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಸಾಕಷ್ಟು ಹಾನಿ ಆಗಿದ್ದರು, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಆಗಿರುವ ನಷ್ಟ ಕೂಡಾ ಇದೂವರೆಗೆ ಹಲವರಿಗೆ ಸಿಕ್ಕಿಲ್ಲ, ಆಡಳಿತದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ರಾಜ್ಯದ ಮೇಲೆ ನಿರಂತರವಾಗಿ ಅನ್ಯಾಯ ಮಾಡುತ್ತಲೆ ಬರುತ್ತಿದೆ. 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ ಅನುದಾನ ನೀಡದೆ, ಆಯೋಗದ ಶಿಫಾರಸ್ಸು ಹಿಂಪಡೆಯುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದರು.

ಕೊರೊನಾ ಸಾಮಗ್ರಿ ಖರೀದಿ ನೇಪದಲ್ಲಿ ಸಾಕಷ್ಟು ದುಡ್ಡು ಕೊಳ್ಳಿ ಹೊಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು. ಬಿಜೆಪಿಯವರು ದುಡ್ಡಿನ ಮತ್ತು ಅಧಿಕಾರದ ಮದದಿಂದ ಉಪ ಚುನಾವಣೆಯಲ್ಲಿ ಗೆಲ್ಲುವ ಕನಸ್ಸಿನಲ್ಲಿದ್ದಾರೆ ಎಂದರು. ರಾಜ್ಯ ಸರ್ಕಾರದಿಂದ ಪರಿಹಾರ ತಕ್ಷಣ ಬಿಡುಗಡೆ ಮಾಡುವ ಕೆಲಸ ಆಗಬೇಕು. ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಜನರ ಕಷ್ಟಗಳಿಗೆ ಸ್ಪಂಧಿಸುವಂತಾಗಬೇಕೆಂದು ಒತ್ತಾಯಿಸಿದರು.

ಇದೆ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ತಮಗೆ ಕುಣಿಯಲು ಬರದವರು ನೇಲ ಡೊಂಕು ಇದೆ ಎಂದಂತಾಗಿದೆ‌ ಕುಮಾರಸ್ವಾಮಿ ಅವರ ಮಾತು. ಸಿಎಂ ಆಗಿ ಜನಪರ ಕೆಲಸ ಮಾಡಬಹುದಾಗಿತ್ತು. ಆದರೆ ಮಾಡದೆ ನನ್ನ ಮೇಲೆ ಟೀಕೆ ಮಾಡುತ್ತಿದ್ದಾರೆ. ಅದಕ್ಕೆ ಅನಿವಾರ್ಯವಾಗಿ ಉತ್ತರ ಕೊಡುತ್ತಿದ್ದೇನೆ. ಅವರ ಹುಳುಕು ಹೊರ ಹಾಕುತ್ತಿದ್ದೇನೆಂದು ನನ್ನ ವಿರುದ್ಧ ಕುಮಾರಸ್ವಾಮಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

Last Updated : Oct 26, 2020, 2:49 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.