ETV Bharat / state

ಕಲಬುರಗಿ ಬಸ್​ ನಿಲ್ದಾಣದಲ್ಲಿ ನಡೆದ ಯುವಕನ ಕೊಲೆ ಪ್ರಕರಣ: ಆರು ಜನರ ಬಂಧನ

author img

By

Published : Nov 8, 2021, 9:53 AM IST

ನವೆಂಬರ್​ .04 ರಂದು ಕಲಬುರಗಿ ಬಸ್​​ ನಿಲ್ದಾಣದಲ್ಲಿ ನಡೆದ ಯುವಕ ಅಭಿಷೇಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

youth murder accused arrested
ಯುವಕನ ಕೊಲೆ ಆರೋಪಿಗಳ ಬಂಧನ

ಕಲಬುರಗಿ: ಹಾಡು ಹಗಲಲ್ಲೇ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಯುವಕ ಅಭಿಷೇಕ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಮುರ್ತುಜಾ ಮೊಹಮ್ಮದ್ ಅಲಿ (25), ಸಾಗರ ಭೈರಾಮಡಗಿ (22), ಆಕಾಶ ಜಾಧವ (22), ಶುಭಂ ದೊಡ್ಡಮನಿ (23), ಅಶೋಕ ಮೂಲಭಾರತಿ (21) ಹಾಗೂ ಕೌಶಿಕ್ ಹಳೆಮನಿ (21) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ನಾಲ್ಕು ಮಚ್ಚು, ಎರಡು ಬೈಕ್ ಹಾಗೂ ಒಂದು ಇನ್ನೋವಾ ಕಾರ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವಕ ಅಭಿಷೇಕ್​ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅಭಿಷೇಕ ತನ್ನ ಗ್ಯಾಂಗ್​​​ನೊಂದಿಗೆ ಒಂದೂವರೆ ವರ್ಷದ ಹಿಂದೆ ಹಳೆ ಜೇವರ್ಗಿ ರಸ್ತೆಯ ಅಂಡರ್ ಬ್ರೀಡ್ಜ್ ಹತ್ತಿರ ಸಾಗರ ಭೈರಾಮಡಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಇದೇ ವೈಷಮ್ಯದಿಂದ ಸಾಗರ ಹಾಗೂ ಆತನ ಸಹಚರರು ನವೆಂಬರ್​​ .04 ರಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಭಿಷೇಕನನ್ನು ಹಾಡುಹಗಲೇ ಭಯಾನಕವಾಗಿ ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದ್ದವು.

ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈ ಕುರಿತು ಕಲಬುರಗಿಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಹಬ್ಬದ ದಿನವೇ ಹರಿಯಿತು ನೆತ್ತರು: ಕಾನ್ಸ್​ಟೇಬಲ್​ ಮಗನ ಬರ್ಬರ ಕೊಲೆ

ಕಲಬುರಗಿ: ಹಾಡು ಹಗಲಲ್ಲೇ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಯುವಕ ಅಭಿಷೇಕ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಮುರ್ತುಜಾ ಮೊಹಮ್ಮದ್ ಅಲಿ (25), ಸಾಗರ ಭೈರಾಮಡಗಿ (22), ಆಕಾಶ ಜಾಧವ (22), ಶುಭಂ ದೊಡ್ಡಮನಿ (23), ಅಶೋಕ ಮೂಲಭಾರತಿ (21) ಹಾಗೂ ಕೌಶಿಕ್ ಹಳೆಮನಿ (21) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ನಾಲ್ಕು ಮಚ್ಚು, ಎರಡು ಬೈಕ್ ಹಾಗೂ ಒಂದು ಇನ್ನೋವಾ ಕಾರ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವಕ ಅಭಿಷೇಕ್​ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅಭಿಷೇಕ ತನ್ನ ಗ್ಯಾಂಗ್​​​ನೊಂದಿಗೆ ಒಂದೂವರೆ ವರ್ಷದ ಹಿಂದೆ ಹಳೆ ಜೇವರ್ಗಿ ರಸ್ತೆಯ ಅಂಡರ್ ಬ್ರೀಡ್ಜ್ ಹತ್ತಿರ ಸಾಗರ ಭೈರಾಮಡಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಇದೇ ವೈಷಮ್ಯದಿಂದ ಸಾಗರ ಹಾಗೂ ಆತನ ಸಹಚರರು ನವೆಂಬರ್​​ .04 ರಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಭಿಷೇಕನನ್ನು ಹಾಡುಹಗಲೇ ಭಯಾನಕವಾಗಿ ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದ್ದವು.

ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈ ಕುರಿತು ಕಲಬುರಗಿಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಹಬ್ಬದ ದಿನವೇ ಹರಿಯಿತು ನೆತ್ತರು: ಕಾನ್ಸ್​ಟೇಬಲ್​ ಮಗನ ಬರ್ಬರ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.