ಕಲಬುರಗಿ: ಚಿಂಚೋಳಿಯಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ್ ಟೆಂಪಲ್ ರನ್ ಆರಂಭಿಸಿದ್ದಾರೆ.
ಚಿಂಚೋಳಿ ತಾಲೂಕಿನ ಐತಿಹಾಸಿಕ ಹಾರಕೂಡ ಚನ್ನಬಸವೇಶ್ವರ ಶಾಖಾ ಮಠಕ್ಕೆ ಭೇಟಿ ನೀಡಿದ್ದ ಅವರು ಚನ್ನವೀರ ಸ್ವಾಮೀಜಿಯ ಆಶೀರ್ವಾದ ಪಡೆದಿದ್ದಾರೆ.
ಮತದಾರರ ವೋಲೈಕೆಗೆ ಬಿರುಸಿನ ಪ್ರಚಾರದ ಜೊತೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರ ಟೆಂಪಲ್ ರನ್ ಜೋರಾಗಿದೆ. ಅಂತಿಮವಾಗಿ ಮತದಾರ ಪ್ರಭುಗಳು ಯಾರ ಕೈ ಹಿಡಿಯಲಿದ್ದಾರೆ ಅನ್ನೋದು ಚುನಾವಣಾ ಫಲತಾಂಶದ ದಿನವೇ ತಿಳಿಯಲಿದೆ.