ಕಲಬುರಗಿ: ಕೊರೊನಾ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಗುರಿಯಾದ ಕಡುಬಡವರಿಗೆ ಉಚಿತ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ನಗರದಲ್ಲಿ ಎಸ್.ಯು.ಸಿ.ಐ. ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಸಂಘಟನೆಯ ಕಾರ್ಯಕರ್ತರು, ಬಡವರು, ಸ್ಲಂ ನಿವಾಸಿಗಳ ವಿದ್ಯುತ್ ಬಿಲ್ ಕೈಬಿಡಬೇಕು ಎಂದು ಜೆಸ್ಕಾಂಗೆ ಒತ್ತಾಯಿಸಿದರು.
ಸರ್ಕಾರ ಗಮನ ಹರಿಸಿ ಬಡವರ ಕಷ್ಟಕ್ಕೆ ನೆರವಾಗಬೇಕು. ಲಾಕ್ಡೌನ್ನಿಂದ ಸಮಸ್ಯೆ ಎದುರಾಗಿದ್ದು, ವಿದ್ಯುತ್ ಬಿಲ್ ಪಾವತಿ ಮಾಡಿಸಿಕೊಳ್ಳಬಾರದು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.