ETV Bharat / state

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ: ಸಚಿವ ಡಾ. ಕೆ ಸುಧಾಕರ್ ​ಸ್ಪಷ್ಟನೆ

author img

By

Published : Jun 14, 2020, 11:34 AM IST

ರಾಜ್ಯದಲ್ಲಿ ಮತ್ತೆ ಲಾಕ್​​ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಜೊತೆ ಮಾತನಾಡಲಿದ್ದಾರೆ. ಇದೇ ಕಾರಣಕ್ಕೆ ಮತ್ತೆ ಲಾಕ್ ಡೌನ್ ಅನ್ನೋ ಊಹಾಪೋಹ ಎದ್ದಿದೆ ಅಷ್ಟೇ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಹೇಳಿದ್ದಾರೆ.

ಸಚಿವ ಡಾ. ಕೆ ಸುಧಾಕರ್ ​ ಸ್ಪಷ್ಟನೆ
ಸಚಿವ ಡಾ. ಕೆ ಸುಧಾಕರ್ ​ ಸ್ಪಷ್ಟನೆ

ಕಲಬುರಗಿ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಇಲ್ಲ, ಲಾಕ್ ಡೌನ್ ಸುದ್ದಿ ಕೇವಲ ಊಹಾಪೋಹ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಡಾ. ಕೆ. ಸುಧಾಕರ್ ​ ಸ್ಪಷ್ಟನೆ

ಇಂದು ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್​​ ಡೌನ್​ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಯಡಿಯೂರಪ್ಪ ಜೊತೆ ಮಾತಾಡಲಿದ್ದಾರೆ. ಇದೇ ಕಾರಣಕ್ಕೆ ಮತ್ತೆ ಲಾಕ್ ಡೌನ್ ಅನ್ನೋ ಊಹಾಪೋಹ ಎದ್ದಿದೆ ಅಷ್ಟೇ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಹಾಟ್​ಸ್ಪಾಟ್​ ಕಲಬುರಗಿಯಲ್ಲಿ ಇಂದು ಒಂದೇ ದಿನ 67 ಜನರಲ್ಲಿ ಸೋಂಕು ದೃಢ!

ಇದೇ ವೇಳೆ ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರ ಸಚಿವರು, ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದೇ ವೇಳೆ ವರದಿ ಬರುವ ಮುನ್ನವೇ ಕ್ವಾರಂಟೈನ್​ ಕೇಂದ್ರದಲ್ಲಿರುವವರನ್ನು ಮನೆಗೆ ಕಳುಹಿಸುತ್ತಿರುವ ಕ್ರಮವನ್ನು ಸಹ ಸಮರ್ಥಿಸಿಕೊಂಡರು. ರೋಗ ಲಕ್ಷಣ ಇಲ್ಲದಿದ್ದರೆ ಅವರಿಂದ ಹರಡುವ ಸಾಧ್ಯತೆ ಕಡಿಮೆ. ಇದನ್ನು ಡಬ್ಲೂಹೆಚ್​​ಓ ಸ್ಪಷ್ಟಪಡಿಸಿದೆ. ಇದು ನಮ್ಮ ಅನುಭವಕ್ಕೂ ಬಂದಿದೆ ಎಂದರು.

ಕಲಬುರಗಿ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಇಲ್ಲ, ಲಾಕ್ ಡೌನ್ ಸುದ್ದಿ ಕೇವಲ ಊಹಾಪೋಹ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಡಾ. ಕೆ. ಸುಧಾಕರ್ ​ ಸ್ಪಷ್ಟನೆ

ಇಂದು ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್​​ ಡೌನ್​ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಯಡಿಯೂರಪ್ಪ ಜೊತೆ ಮಾತಾಡಲಿದ್ದಾರೆ. ಇದೇ ಕಾರಣಕ್ಕೆ ಮತ್ತೆ ಲಾಕ್ ಡೌನ್ ಅನ್ನೋ ಊಹಾಪೋಹ ಎದ್ದಿದೆ ಅಷ್ಟೇ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಹಾಟ್​ಸ್ಪಾಟ್​ ಕಲಬುರಗಿಯಲ್ಲಿ ಇಂದು ಒಂದೇ ದಿನ 67 ಜನರಲ್ಲಿ ಸೋಂಕು ದೃಢ!

ಇದೇ ವೇಳೆ ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರ ಸಚಿವರು, ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದೇ ವೇಳೆ ವರದಿ ಬರುವ ಮುನ್ನವೇ ಕ್ವಾರಂಟೈನ್​ ಕೇಂದ್ರದಲ್ಲಿರುವವರನ್ನು ಮನೆಗೆ ಕಳುಹಿಸುತ್ತಿರುವ ಕ್ರಮವನ್ನು ಸಹ ಸಮರ್ಥಿಸಿಕೊಂಡರು. ರೋಗ ಲಕ್ಷಣ ಇಲ್ಲದಿದ್ದರೆ ಅವರಿಂದ ಹರಡುವ ಸಾಧ್ಯತೆ ಕಡಿಮೆ. ಇದನ್ನು ಡಬ್ಲೂಹೆಚ್​​ಓ ಸ್ಪಷ್ಟಪಡಿಸಿದೆ. ಇದು ನಮ್ಮ ಅನುಭವಕ್ಕೂ ಬಂದಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.