ETV Bharat / state

ಕಬ್ಬಿನ ಹೊಲಕ್ಕೆ ನೀರುಣಿಸಲು ಹೋಗಿ ವಿದ್ಯುತ್ ತಂತಿ ತುಳಿದು ಇಬ್ಬರು ಸಾವು - ಕಬ್ಬಿನ ಹೊಲಕ್ಕೆ ನೀರುಣಿಸಲು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ಇಬ್ಬರು ಸಾವು

ಕಲಬುರಗಿ ಜಿಲ್ಲೆಯಲ್ಲಿ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಕಬ್ಬಿನ ಹೊಲಕ್ಕೆ ನೀರುಣಿಸಲು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ಇಬ್ಬರು ಸಾವು
ಕಬ್ಬಿನ ಹೊಲಕ್ಕೆ ನೀರುಣಿಸಲು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ಇಬ್ಬರು ಸಾವು
author img

By

Published : Jun 29, 2021, 1:13 PM IST

ಕಲಬುರಗಿ: ಕಬ್ಬಿನ ಹೊಲಕ್ಕೆ ನೀರುಣಿಸಲು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಧಂಗಾಪೂರ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ತಂತಿ ತುಳಿದು ಇಬ್ಬರು ಸಾವು
ವಿದ್ಯುತ್ ತಂತಿ ತುಳಿದು ಇಬ್ಬರು ಸಾವು

ಗ್ರಾಮದ ಅಂಬಾದಾಸ ಗೊಂದಳೆ (58) ಹಾಗೂ ಕೃಷ್ಣಾ ಗೊಂದಳೆ (18) ಮೃತ ದುರ್ದೈವಿಗಳು. ಹೊಲದಲ್ಲಿ ಹಾದುಹೋದ ವಿದ್ಯುತ್ ತಂತಿ ಕಡಿದು ಬಿದ್ದಿರುವುದನ್ನು ಗಮನಿಸದ ಇಬ್ಬರು, ಇದನ್ನು ತುಳಿದ ಪರಿಣಾಮ ಸಾವನ್ನಪಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಸ್ಥಳಕ್ಕೆ ಪಿಎಸ್ಐ ಸುವರ್ಣಾ ಮಲಶೆಟ್ಟಿ, ಗ್ರಾಮ ಲೇಖಾಪಾಲಕ ಪ್ರಭುಲಿಂಗ ತಟ್ಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಕಬ್ಬಿನ ಹೊಲಕ್ಕೆ ನೀರುಣಿಸಲು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಧಂಗಾಪೂರ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ತಂತಿ ತುಳಿದು ಇಬ್ಬರು ಸಾವು
ವಿದ್ಯುತ್ ತಂತಿ ತುಳಿದು ಇಬ್ಬರು ಸಾವು

ಗ್ರಾಮದ ಅಂಬಾದಾಸ ಗೊಂದಳೆ (58) ಹಾಗೂ ಕೃಷ್ಣಾ ಗೊಂದಳೆ (18) ಮೃತ ದುರ್ದೈವಿಗಳು. ಹೊಲದಲ್ಲಿ ಹಾದುಹೋದ ವಿದ್ಯುತ್ ತಂತಿ ಕಡಿದು ಬಿದ್ದಿರುವುದನ್ನು ಗಮನಿಸದ ಇಬ್ಬರು, ಇದನ್ನು ತುಳಿದ ಪರಿಣಾಮ ಸಾವನ್ನಪಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಸ್ಥಳಕ್ಕೆ ಪಿಎಸ್ಐ ಸುವರ್ಣಾ ಮಲಶೆಟ್ಟಿ, ಗ್ರಾಮ ಲೇಖಾಪಾಲಕ ಪ್ರಭುಲಿಂಗ ತಟ್ಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.