ETV Bharat / state

ಯುಪಿ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

author img

By

Published : Oct 1, 2020, 4:05 PM IST

ಉತ್ತರಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಈ ದೇಶವೇ ತಲೆತಗ್ಗಿಸುವಂತ ವಿಚಾರ. ಇದೊಂದು ಎರಡನೇ ನಿರ್ಭಯ ಪ್ರಕರಣ, 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಬೆನ್ನು ಮೂಳೆ ಮುರಿದು ನಾಲಿಗೆ ಕತ್ತರಿಸಿ ದುಷ್ಕರ್ಮಿಗಳು ವಿಕೃತಿ ಮರೆದಿದ್ದಾರೆ.

UP rape case; Protest by various organizations in Kalaburagi
ಯುಪಿ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕಲಬುರಗಿ : ಉತ್ತರಪ್ರದೇಶದಲ್ಲಿ ನಡೆದ ಯುವತಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ ಮುಂದುವರೆದಿವೆ. ಪ್ರಗತಿಪರ ಸಂಘಟನೆಗಳ ಒಕ್ಕೂಟ, ಯೂತ್ ಕಾಂಗ್ರೆಸ್, ಎಸ್​ಯುಸಿಐ, ವುಮ್ಯಾನ್ ಇಂಡಿಯಾ ಮೂಮೆಂಟ್ ಸೇರಿದಂತೆ ಹಲವು ಸಂಘಟನೆಗಳಿಂದ ಇಂದು ನಗರದಲ್ಲಿ ಸರಣಿ ಪ್ರತಿಭಟನೆ ನಡೆಸಲಾಯಿತು. ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಯ ಕಾರ್ಯಕರ್ತರು ಯುಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

UP rape case; Protest by various organizations in Kalaburagi
ಯುಪಿ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ, ಅತ್ಯಾಚಾರ ಪ್ರಕರಣಗಳನ್ನು ಗಮನಿಸುತ್ತಾ ಹೋದ್ರೆ ನಾವು ಭಾರತದಲ್ಲಿದೇವೋ ಅಥವಾ ನರಕದಲ್ಲಿ ವಾಸಿಸುತ್ತಿದೇವೋ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ. ಉತ್ತರಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಈ ದೇಶವೇ ತಲೆತಗ್ಗಿಸುವಂತಹ ವಿಚಾರ. ಇದೊಂದು ಎರಡನೇ ನಿರ್ಭಯ ಪ್ರಕರಣ, 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಬೆನ್ನು ಮೂಳೆ ಮುರಿದು ನಾಲಿಗೆ ಕತ್ತರಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.

ಯುಪಿ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಅಲ್ಲದೆ, ಸರ್ಕಾರದ ಒತ್ತಡದಿಂದ ಪೊಲೀಸ್ ಇಲಾಖೆಯು ಯುವತಿಯ ಶವವನ್ನು ರಾತ್ರೋರಾತ್ರಿ ಸುಟ್ಟುಹಾಕುವ ಮೂಲಕ ಸಾಕ್ಷಿಯನ್ನು ಅಳಿಸಿಹಾಕುವ ಪ್ರಯತ್ನ ಮಾಡಿದೆ. ಇಷ್ಟಾದರೂ ಉತ್ತರಪ್ರದೇಶ ಹಾಗೂ ಕೇಂದ್ರ ಸರ್ಕಾರ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಮಹಿಳಾ ಹೋರಾಟಗಾರ್ತಿ ಅಶ್ವಿನಿ ಮದನಕರ್ ಅಸಮಾಧಾನ ವ್ಯಕ್ತಪಡಿಸಿದರು.

ಅತ್ಯಾಚಾರ ಪ್ರಕರಣವನ್ನು ತಡೆಯುವಲ್ಲಿ ವಿಫಲರಾದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಕೂಡಲೇ ರಾಜೀನಾಮೆ ನೀಡಬೇಕು, ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ಕಾಮುಕರನ್ನು ಕಾನೂನು ಪ್ರಕಾರ ಉಗ್ರ ಶಿಕ್ಷೆಗೆ ಗುರಿಪಡಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಕಲಬುರಗಿ : ಉತ್ತರಪ್ರದೇಶದಲ್ಲಿ ನಡೆದ ಯುವತಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ ಮುಂದುವರೆದಿವೆ. ಪ್ರಗತಿಪರ ಸಂಘಟನೆಗಳ ಒಕ್ಕೂಟ, ಯೂತ್ ಕಾಂಗ್ರೆಸ್, ಎಸ್​ಯುಸಿಐ, ವುಮ್ಯಾನ್ ಇಂಡಿಯಾ ಮೂಮೆಂಟ್ ಸೇರಿದಂತೆ ಹಲವು ಸಂಘಟನೆಗಳಿಂದ ಇಂದು ನಗರದಲ್ಲಿ ಸರಣಿ ಪ್ರತಿಭಟನೆ ನಡೆಸಲಾಯಿತು. ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಯ ಕಾರ್ಯಕರ್ತರು ಯುಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

UP rape case; Protest by various organizations in Kalaburagi
ಯುಪಿ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ, ಅತ್ಯಾಚಾರ ಪ್ರಕರಣಗಳನ್ನು ಗಮನಿಸುತ್ತಾ ಹೋದ್ರೆ ನಾವು ಭಾರತದಲ್ಲಿದೇವೋ ಅಥವಾ ನರಕದಲ್ಲಿ ವಾಸಿಸುತ್ತಿದೇವೋ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ. ಉತ್ತರಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಈ ದೇಶವೇ ತಲೆತಗ್ಗಿಸುವಂತಹ ವಿಚಾರ. ಇದೊಂದು ಎರಡನೇ ನಿರ್ಭಯ ಪ್ರಕರಣ, 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಬೆನ್ನು ಮೂಳೆ ಮುರಿದು ನಾಲಿಗೆ ಕತ್ತರಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.

ಯುಪಿ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಅಲ್ಲದೆ, ಸರ್ಕಾರದ ಒತ್ತಡದಿಂದ ಪೊಲೀಸ್ ಇಲಾಖೆಯು ಯುವತಿಯ ಶವವನ್ನು ರಾತ್ರೋರಾತ್ರಿ ಸುಟ್ಟುಹಾಕುವ ಮೂಲಕ ಸಾಕ್ಷಿಯನ್ನು ಅಳಿಸಿಹಾಕುವ ಪ್ರಯತ್ನ ಮಾಡಿದೆ. ಇಷ್ಟಾದರೂ ಉತ್ತರಪ್ರದೇಶ ಹಾಗೂ ಕೇಂದ್ರ ಸರ್ಕಾರ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಮಹಿಳಾ ಹೋರಾಟಗಾರ್ತಿ ಅಶ್ವಿನಿ ಮದನಕರ್ ಅಸಮಾಧಾನ ವ್ಯಕ್ತಪಡಿಸಿದರು.

ಅತ್ಯಾಚಾರ ಪ್ರಕರಣವನ್ನು ತಡೆಯುವಲ್ಲಿ ವಿಫಲರಾದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಕೂಡಲೇ ರಾಜೀನಾಮೆ ನೀಡಬೇಕು, ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ಕಾಮುಕರನ್ನು ಕಾನೂನು ಪ್ರಕಾರ ಉಗ್ರ ಶಿಕ್ಷೆಗೆ ಗುರಿಪಡಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.