ETV Bharat / state

ವೈಜನಾಥ ಪಾಟೀಲರಿಗೆ ಅಂತಿಮ ನಮನ ಸಲ್ಲಿಸಿದ ಕಂಬಾರ ಹಾಗೂ ಸಿದ್ದಲಿಂಗಯ್ಯ - Vaijanatha patil latest news

ಮಾಜಿ ಸಚಿವ, ಹಿರಿಯ ಹೋರಾಟಗಾರ ವೈಜನಾಥ ಪಾಟೀಲರ ಪಾರ್ಥಿವ ಶರೀರಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹಾಗೂ ದಲಿತ ಕವಿ ಡಾ. ಸಿದ್ದಲಿಂಗಯ್ಯ ಅಂತಿಮ ನಮನ ಸಲ್ಲಿಸಿದ್ದಾರೆ.

ಡಾ.ಚಂದ್ರಶೇಖರ ಕಂಬಾರ
author img

By

Published : Nov 2, 2019, 11:30 PM IST

ಕಲಬುರಗಿ: ಮಾಜಿ ಸಚಿವ, ಹಿರಿಯ ಹೋರಾಟಗಾರ ವೈಜನಾಥ ಪಾಟೀಲರ ಪಾರ್ಥಿವ ಶರೀರಕ್ಕೆ ಡಾ. ಚಂದ್ರಶೇಖರ ಕಂಬಾರ, ದಲಿತ ಕವಿ ಡಾ. ಸಿದ್ದಲಿಂಗಯ್ಯ, ಮಾಜಿ ಸಚಿವ ಎಸ್.ಕೆ.ಕಾಂತಾ, ಶಾಸಕ ಎಂ.ವೈ.ಪಾಟೀಲ, ಅಜಯಸಿಂಗ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

ವೈಜನಾಥ ಪಾಟೀಲರಿಗೆ ಅಂತಿಮ ನಮನ ಸಲ್ಲಿಸಿದ ಕಂಬಾರ ಹಾಗೂ ಸಿದ್ದಲಿಂಗಯ್ಯ

ಅಂತಿಮ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ವೈಜನಾಥ ಪಾಟೀಲ್ ಅವರು ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅವಿರತವಾಗಿ ದುಡಿದವರು. ಈ ಭಾಗಕ್ಕೆ ಅವರ ಕೊಡುಗೆ ಅಪಾರವಾಗಿದೆ. ಅವರ ಸಾವಿನ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ, ವೈಜನಾಥ್ ಪಾಟೀಲ್ ಅವರು ಜನಪರ ನಾಯಕರಾಗಿದ್ದರು. ಬಡವರ, ಹಿಂದುಳಿದವರ ಬಗ್ಗೆ ಅಪಾರ ಕಾಳಜಿ ಉಳ್ಳವರು. ಅವರ ಆದರ್ಶಗಳು ನಮಗೆ ಸ್ಫೂರ್ತಿಯಾಗಿವೆ ಎಂದು ಕಂಬನಿ‌‌ ಮಿಡಿದರು.

ಅಂತಿಮ ದರ್ಶನದ ನಂತರ ಪಾಟೀಲರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಯಿತು. ನಾಳೆ ಸಂಜೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ನಂತರ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಕಲಬುರಗಿ: ಮಾಜಿ ಸಚಿವ, ಹಿರಿಯ ಹೋರಾಟಗಾರ ವೈಜನಾಥ ಪಾಟೀಲರ ಪಾರ್ಥಿವ ಶರೀರಕ್ಕೆ ಡಾ. ಚಂದ್ರಶೇಖರ ಕಂಬಾರ, ದಲಿತ ಕವಿ ಡಾ. ಸಿದ್ದಲಿಂಗಯ್ಯ, ಮಾಜಿ ಸಚಿವ ಎಸ್.ಕೆ.ಕಾಂತಾ, ಶಾಸಕ ಎಂ.ವೈ.ಪಾಟೀಲ, ಅಜಯಸಿಂಗ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

ವೈಜನಾಥ ಪಾಟೀಲರಿಗೆ ಅಂತಿಮ ನಮನ ಸಲ್ಲಿಸಿದ ಕಂಬಾರ ಹಾಗೂ ಸಿದ್ದಲಿಂಗಯ್ಯ

ಅಂತಿಮ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ವೈಜನಾಥ ಪಾಟೀಲ್ ಅವರು ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅವಿರತವಾಗಿ ದುಡಿದವರು. ಈ ಭಾಗಕ್ಕೆ ಅವರ ಕೊಡುಗೆ ಅಪಾರವಾಗಿದೆ. ಅವರ ಸಾವಿನ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ, ವೈಜನಾಥ್ ಪಾಟೀಲ್ ಅವರು ಜನಪರ ನಾಯಕರಾಗಿದ್ದರು. ಬಡವರ, ಹಿಂದುಳಿದವರ ಬಗ್ಗೆ ಅಪಾರ ಕಾಳಜಿ ಉಳ್ಳವರು. ಅವರ ಆದರ್ಶಗಳು ನಮಗೆ ಸ್ಫೂರ್ತಿಯಾಗಿವೆ ಎಂದು ಕಂಬನಿ‌‌ ಮಿಡಿದರು.

ಅಂತಿಮ ದರ್ಶನದ ನಂತರ ಪಾಟೀಲರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಯಿತು. ನಾಳೆ ಸಂಜೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ನಂತರ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

Intro:ಕಲಬುರಗಿ:ಅನಾರೋಗ್ಯದಿಂದ ಇಂದು ಇಹಲೋಕ ತ್ಯಜಿಸಿದ ಮಾಜಿ ಸಚಿವ, ಹಿರಿಯ ಹೋರಾಟಗಾರ ವೈಜನಾಥ ಪಾಟೀಲರ ಪಾರ್ಥಿವ ಶರೀರವನ್ನು ಇಂದು ಕಲಬುರ್ಗಿಗೆ ತರಲಾಗಿದೆ. ಹೆಲಿಕ್ಯಾಫ್ಟರ್ ಮೂಲಕ ತರಲಾದ ಪಾರ್ಥೀವ ಶರೀರವನ್ನು ಶಾಂತಿನಗರದ ಸ್ವಗೃಹಕ್ಕೆ ತೆಗೆದುಕೊಂಡು ಹೋಗಿ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸಲಾಯಿತು.ನಂತರ ಸರ್ದಾರ್ ಪಟೇಲ್ ವೃತ್ತದ ಮೂಲಕ ಹಿಂದಿ ಪ್ರಚಾರ ಸಭೆಯ ಆವರಣದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.ಈ ವೇಳೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ದಲಿತ ಕವಿ ಡಾ.ಸಿದ್ಧಲಿಂಗಯ್ಯ, ಮಾಜಿ ಸಚಿವ ಎಸ್.ಕೆ.ಕಾಂತಾ, ಶಾಸಕ ಎಂ.ವೈ.ಪಾಟೀಲ, ಅಜಯಸಿಂಗ್ ಮತ್ತಿತರರು ಅಂತಿಮ ದರ್ಶನ ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಅಂತಿಮ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ವೈಜನಾಥ ಪಾಟೀಲ್ ಅವರು ಹೈದ್ರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅವಿರತವಾಗಿ ದುಡಿದವರು,ಈಭಾಗಕ್ಕೆ ಅವರ ಕೊಡುಗೆ ಅಪಾರವಾಗಿದೆ ಅವರ ಸಾವಿನ ಸುದ್ದಿ ಆಗಾತ ಉಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.ಇನ್ನು ಇದೇ ವೇಳೆ ಮಾತನಾಡಿದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವೈಜನಾಥ್ ಪಾಟೀಲ್ ಅವರು ಜನಪರ ನಾಯಕರಾಗಿದ್ದರು, ಬಡವರ ಹಿಂದುಳಿದವರ ಬಗ್ಗೆ ಅಪಾರ ಕಾಳಜಿ ಉಳ್ಳವರು, ಅವರ ಆದರ್ಶಗಳು ನಮಗೆ ಸ್ಪೂರ್ತಿಯಾಗಿವೆ ಎಂದು ಕಂಬನಿ‌‌ ಮಿಡಿದರು.

ಅಂತಿಮ ದರ್ಶನದ ನಂತರ ಪಾಟೀಲರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಯಿತು. ನಾಳೆ ಸಂಜೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ನಂತರ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.ಹಿಂದಿ ಪ್ರಚಾರ ಸಭೆಯಲ್ಲಿ ಆಯೋಜಿಸಿದ್ದ ಅಂತಿಮ‌ ದರ್ಶನದಲ್ಲಿ ಶಾಸಕರಾದ ಎಂ.ವೈ. ಪಾಟೀಲ, ಸುಭಾಷ್ ಗುತ್ತೇದಾರ, ಮಾಜಿ ಶಾಸಕ ದೊಡ್ಡಪ್ಪಗೌಡ,ಬಸವರಾಜ ಇಂಗಿನ್, ವಿಠ್ಠಲ ದೊಡ್ಡಮನಿ, ಸೇರಿದಂತೆ ಅನೇಕರು ಭಾಗವಹಿಸಿ ಅಂತಿಮ ದರ್ಶನ‌ ಪಡೆದರು.

ಬೈಟ್01:ಡಾ.ಚಂದ್ರಶೇಖರ ಕಂಬಾರ,ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು

ಬೈಟ್02:ಡಾ.ಸಿದ್ದಲಿಂಗಯ್ಯ, ಹಿರಿಯ ಸಾಹಿತಿBody:ಕಲಬುರಗಿ:ಅನಾರೋಗ್ಯದಿಂದ ಇಂದು ಇಹಲೋಕ ತ್ಯಜಿಸಿದ ಮಾಜಿ ಸಚಿವ, ಹಿರಿಯ ಹೋರಾಟಗಾರ ವೈಜನಾಥ ಪಾಟೀಲರ ಪಾರ್ಥಿವ ಶರೀರವನ್ನು ಇಂದು ಕಲಬುರ್ಗಿಗೆ ತರಲಾಗಿದೆ. ಹೆಲಿಕ್ಯಾಫ್ಟರ್ ಮೂಲಕ ತರಲಾದ ಪಾರ್ಥೀವ ಶರೀರವನ್ನು ಶಾಂತಿನಗರದ ಸ್ವಗೃಹಕ್ಕೆ ತೆಗೆದುಕೊಂಡು ಹೋಗಿ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸಲಾಯಿತು.ನಂತರ ಸರ್ದಾರ್ ಪಟೇಲ್ ವೃತ್ತದ ಮೂಲಕ ಹಿಂದಿ ಪ್ರಚಾರ ಸಭೆಯ ಆವರಣದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.ಈ ವೇಳೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ದಲಿತ ಕವಿ ಡಾ.ಸಿದ್ಧಲಿಂಗಯ್ಯ, ಮಾಜಿ ಸಚಿವ ಎಸ್.ಕೆ.ಕಾಂತಾ, ಶಾಸಕ ಎಂ.ವೈ.ಪಾಟೀಲ, ಅಜಯಸಿಂಗ್ ಮತ್ತಿತರರು ಅಂತಿಮ ದರ್ಶನ ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಅಂತಿಮ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ವೈಜನಾಥ ಪಾಟೀಲ್ ಅವರು ಹೈದ್ರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅವಿರತವಾಗಿ ದುಡಿದವರು,ಈಭಾಗಕ್ಕೆ ಅವರ ಕೊಡುಗೆ ಅಪಾರವಾಗಿದೆ ಅವರ ಸಾವಿನ ಸುದ್ದಿ ಆಗಾತ ಉಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.ಇನ್ನು ಇದೇ ವೇಳೆ ಮಾತನಾಡಿದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವೈಜನಾಥ್ ಪಾಟೀಲ್ ಅವರು ಜನಪರ ನಾಯಕರಾಗಿದ್ದರು, ಬಡವರ ಹಿಂದುಳಿದವರ ಬಗ್ಗೆ ಅಪಾರ ಕಾಳಜಿ ಉಳ್ಳವರು, ಅವರ ಆದರ್ಶಗಳು ನಮಗೆ ಸ್ಪೂರ್ತಿಯಾಗಿವೆ ಎಂದು ಕಂಬನಿ‌‌ ಮಿಡಿದರು.

ಅಂತಿಮ ದರ್ಶನದ ನಂತರ ಪಾಟೀಲರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಯಿತು. ನಾಳೆ ಸಂಜೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ನಂತರ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.ಹಿಂದಿ ಪ್ರಚಾರ ಸಭೆಯಲ್ಲಿ ಆಯೋಜಿಸಿದ್ದ ಅಂತಿಮ‌ ದರ್ಶನದಲ್ಲಿ ಶಾಸಕರಾದ ಎಂ.ವೈ. ಪಾಟೀಲ, ಸುಭಾಷ್ ಗುತ್ತೇದಾರ, ಮಾಜಿ ಶಾಸಕ ದೊಡ್ಡಪ್ಪಗೌಡ,ಬಸವರಾಜ ಇಂಗಿನ್, ವಿಠ್ಠಲ ದೊಡ್ಡಮನಿ, ಸೇರಿದಂತೆ ಅನೇಕರು ಭಾಗವಹಿಸಿ ಅಂತಿಮ ದರ್ಶನ‌ ಪಡೆದರು.

ಬೈಟ್01:ಡಾ.ಚಂದ್ರಶೇಖರ ಕಂಬಾರ,ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು

ಬೈಟ್02:ಡಾ.ಸಿದ್ದಲಿಂಗಯ್ಯ, ಹಿರಿಯ ಸಾಹಿತಿConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.