ETV Bharat / state

ಕಲಬುರಗಿ ಡಿಸಿ ಕಚೇರಿ ಎದುರು ಪ್ರತಿಭಟಿಸಿ ಬಿಟ್ಟೋದ ಕಸ ಸ್ವಚ್ಛಗೊಳಿಸಿದ ಇನ್ಸ್​ಪೆಕ್ಟರ್: ವಿಡಿಯೋ ವೈರಲ್​

author img

By

Published : Dec 15, 2022, 1:15 PM IST

ಕಲಬುರಗಿಯ ಅಶೋಕ ನಗರ ಠಾಣೆಯ ಸಿಪಿಐ ಪಂಡಿತ್ ಸಾಗರ್​ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದ ಕಸ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಕಲಬುರಗಿಯ ಪೊಲೀಸ್ ಇನ್ಸ್​ಪೆಕ್ಟರ್​ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

viral video
ವೈರಲ್​ ವಿಡಿಯೋ
ವೈರಲ್​ ವಿಡಿಯೋ

ಕಲಬುರಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಾಸಕ‌ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ರೈತರು ಬುಧವಾರ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮುಕ್ತಾಯವಾದ ಬಳಿಕ ಅವರು ತಮ್ಮೊಂದಿಗೆ ತಂದಿದ್ದ ತೊಗರಿ ಗಿಡಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಹೀಗೆ ಬಿಸಾಡಿ ಹೋಗಿದ್ದ ಕಸವನ್ನು ಸ್ವಚ್ಛಗೊಳಿಸುವ ಮೂಲಕ ಅಶೋಕ​ ನಗರ ಪೊಲೀಸ್ ಇನ್ಸ್​ಪೆಕ್ಟರ್ ಪಂಡಿತ್​ ಸಾಗರ್ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ.

ಜಿಲ್ಲೆಯಲ್ಲಿ ನೆಟೆ ರೋಗಕ್ಕೆ ತುತ್ತಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಟ್ರ್ಯಾಕ್ಟರ್​ಗಳಲ್ಲಿ ನೆಟೆ ರೋಗ ಬಾಧೆಯಿಂದ ಒಣಗಿದ ತೊಗರಿ ಗಿಡಗಳನ್ನು ತಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಬಿಟ್ಟು ತೆರಳಿದ್ದರು.

ಇದನ್ನ ಗಮನಿಸಿದ ಅಶೋಕ ನಗರ ಪೊಲೀಸ್ ಠಾಣೆ ಸಿಪಿಐ ಪಂಡಿತ್​ ಸಾಗರ್ ಸ್ವತಃ ತಾವೇ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಕಲಬುರಗಿಯ ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಸಿಬ್ಬಂದಿ​ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗ್ತಿದೆ.

ಇದನ್ನೂ ಓದಿ: ಯಾರೂ ಇಲ್ಲದ ಮನೆಯಲ್ಲಿ ಸಾವಿರಾರು ಚೇಳುಗಳು ವಾಸ! ವಿಡಿಯೋ ವೈರಲ್​

ವೈರಲ್​ ವಿಡಿಯೋ

ಕಲಬುರಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಾಸಕ‌ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ರೈತರು ಬುಧವಾರ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮುಕ್ತಾಯವಾದ ಬಳಿಕ ಅವರು ತಮ್ಮೊಂದಿಗೆ ತಂದಿದ್ದ ತೊಗರಿ ಗಿಡಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಹೀಗೆ ಬಿಸಾಡಿ ಹೋಗಿದ್ದ ಕಸವನ್ನು ಸ್ವಚ್ಛಗೊಳಿಸುವ ಮೂಲಕ ಅಶೋಕ​ ನಗರ ಪೊಲೀಸ್ ಇನ್ಸ್​ಪೆಕ್ಟರ್ ಪಂಡಿತ್​ ಸಾಗರ್ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ.

ಜಿಲ್ಲೆಯಲ್ಲಿ ನೆಟೆ ರೋಗಕ್ಕೆ ತುತ್ತಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಟ್ರ್ಯಾಕ್ಟರ್​ಗಳಲ್ಲಿ ನೆಟೆ ರೋಗ ಬಾಧೆಯಿಂದ ಒಣಗಿದ ತೊಗರಿ ಗಿಡಗಳನ್ನು ತಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಬಿಟ್ಟು ತೆರಳಿದ್ದರು.

ಇದನ್ನ ಗಮನಿಸಿದ ಅಶೋಕ ನಗರ ಪೊಲೀಸ್ ಠಾಣೆ ಸಿಪಿಐ ಪಂಡಿತ್​ ಸಾಗರ್ ಸ್ವತಃ ತಾವೇ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಕಲಬುರಗಿಯ ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಸಿಬ್ಬಂದಿ​ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗ್ತಿದೆ.

ಇದನ್ನೂ ಓದಿ: ಯಾರೂ ಇಲ್ಲದ ಮನೆಯಲ್ಲಿ ಸಾವಿರಾರು ಚೇಳುಗಳು ವಾಸ! ವಿಡಿಯೋ ವೈರಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.