ETV Bharat / state

ಜಮೀನು ವಿಚಾರದಲ್ಲಿ ಮಹಿಳೆ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ, ಆರೋಪಿ ಬಂಧನ

ಜಮೀನಿನ‌ ದಾರಿ ವಿಚಾರದಲ್ಲಿ ಗಲಾಟೆಯಾಗಿದೆ ಎನ್ನಲಾಗಿದೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಆರೋಪಿ ನಾಗರಾಜನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ..

author img

By

Published : Aug 4, 2021, 5:50 PM IST

woman-shot-by-a-man-for-land-dispute-in-kalburgi
ಜಮೀನು ವಿಚಾರದಲ್ಲಿ ಮಹಿಳೆ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ..ಆರೋಪಿ ಅರೆಸ್ಟ್​

ಕಲಬುರಗಿ : ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದಿದೆ. ಕಡಗಂಚಿ ಗ್ರಾಮದ ನಿವಾಸಿ ನಿರ್ಮಲಾ ಸಾತಲಿಂಗಪ್ಪ ಎಂಬುವರ ಮೇಲೆ ಅದೇ ಗ್ರಾಮದ ನಾಗರಾಜ ವಾಣಿ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಮೊದಲು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ 2ನೇ ಗುಂಡು ನೇರವಾಗಿ ನಿರ್ಮಲಾ ಭುಜಕ್ಕೆ ತಗುಲಿದೆ. ನಿರ್ಮಲಾ ಅವರ ಬಲ ಭುಜಕ್ಕೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಮೀನಿನ‌ ದಾರಿ ವಿಚಾರದಲ್ಲಿ ಗಲಾಟೆಯಾಗಿದೆ ಎನ್ನಲಾಗಿದೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಆರೋಪಿ ನಾಗರಾಜನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಓದಿ: ಭೂ ವಿವಾದ: ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ.. ಐವರ ಕಗ್ಗೊಲೆ

ಕಲಬುರಗಿ : ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದಿದೆ. ಕಡಗಂಚಿ ಗ್ರಾಮದ ನಿವಾಸಿ ನಿರ್ಮಲಾ ಸಾತಲಿಂಗಪ್ಪ ಎಂಬುವರ ಮೇಲೆ ಅದೇ ಗ್ರಾಮದ ನಾಗರಾಜ ವಾಣಿ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಮೊದಲು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ 2ನೇ ಗುಂಡು ನೇರವಾಗಿ ನಿರ್ಮಲಾ ಭುಜಕ್ಕೆ ತಗುಲಿದೆ. ನಿರ್ಮಲಾ ಅವರ ಬಲ ಭುಜಕ್ಕೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಮೀನಿನ‌ ದಾರಿ ವಿಚಾರದಲ್ಲಿ ಗಲಾಟೆಯಾಗಿದೆ ಎನ್ನಲಾಗಿದೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಆರೋಪಿ ನಾಗರಾಜನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಓದಿ: ಭೂ ವಿವಾದ: ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ.. ಐವರ ಕಗ್ಗೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.