ETV Bharat / state

ಕರ್ತವ್ಯದಲ್ಲಿದ್ದಾಗಲೇ ಠಾಣೆಯೊಳಗೆ ಪೊಲೀಸ್ ಪೇದೆ ಸಾವು.. ಕಂಬನಿ ಮಿಡಿದ ಸಹೋದ್ಯೋಗಿಗಳು - kannada news

ಹೃದಯಾಘಾತದಿಂದ ಸಾವನ್ನಪ್ಪಿದ ಪೊಲೀಸ್ ಪೇದೆಯ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದ ಸಹೋದ್ಯೋಗಿಗಳು ಮತ್ತು ಸಾರ್ವಜನಿಕರು.

ಹೃದಯಾಘಾತದಿಂದ ಸಾವನ್ನಪ್ಪಿದ ಪೊಲೀಸ್ ಪೇದೆ
author img

By

Published : May 3, 2019, 6:07 PM IST

ಕಲಬುರಗಿ : ಕರ್ತವ್ಯನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಅಫ್ಜಲಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ತಾಲೂಕಿನ ಅಂಕಲಗಾ ಗ್ರಾಮದ ಚಂದ್ರಕಾಂತ್ ಮೃತ ದುರ್ದೈವಿ. ಕಳೆದ 20 ವರ್ಷಗಳಿಂದ ಚಂದ್ರಕಾಂತ್‌ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಹೋದ್ಯೋಗಿಯ ಸಾವಿಗೆ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕಂಬನಿ ಮಿಡಿದರು.

ಹೃದಯಾಘಾತದಿಂದ ಸಾವನ್ನಪ್ಪಿದ ಪೊಲೀಸ್ ಪೇದೆ

ಸರಳ, ಸಜ್ಜನ ಪೇದೆ ಎನಿಸಿಕೊಂಡಿದ್ದ ಚಂದ್ರಕಾಂತ್ ನಿಧನಕ್ಕೆ ಸಹೋದ್ಯೋಗಿಗಳು, ನಾಗರಿಕರು ಕಣ್ಣೀರಾಗಿದ್ದಾರೆ. ಎಂದಿನಂತೆ ಇಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಚಂದ್ರಕಾಂತ್, ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಎದೆನೋವು , ಹೃದಯಾಘಾತ ಆಗುತ್ತಿದ್ದಂತೆಯೇ ಸಹೋದ್ಯೋಗಿಗಳು ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆ ಆವರಣದಲ್ಲಿಯೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವೇಳೆ ಸಾರ್ವಜನಿಕರು, ಪೊಲೀಸ್ ಸಿಬ್ಬಂದಿ ಮೃತ ಚಂದ್ರಕಾಂತ್‌ ಜತೆಗಿನ ಒಡನಾಟ ಸ್ಮರಿಸಿದರು.

ಕಲಬುರಗಿ : ಕರ್ತವ್ಯನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಅಫ್ಜಲಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ತಾಲೂಕಿನ ಅಂಕಲಗಾ ಗ್ರಾಮದ ಚಂದ್ರಕಾಂತ್ ಮೃತ ದುರ್ದೈವಿ. ಕಳೆದ 20 ವರ್ಷಗಳಿಂದ ಚಂದ್ರಕಾಂತ್‌ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಹೋದ್ಯೋಗಿಯ ಸಾವಿಗೆ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕಂಬನಿ ಮಿಡಿದರು.

ಹೃದಯಾಘಾತದಿಂದ ಸಾವನ್ನಪ್ಪಿದ ಪೊಲೀಸ್ ಪೇದೆ

ಸರಳ, ಸಜ್ಜನ ಪೇದೆ ಎನಿಸಿಕೊಂಡಿದ್ದ ಚಂದ್ರಕಾಂತ್ ನಿಧನಕ್ಕೆ ಸಹೋದ್ಯೋಗಿಗಳು, ನಾಗರಿಕರು ಕಣ್ಣೀರಾಗಿದ್ದಾರೆ. ಎಂದಿನಂತೆ ಇಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಚಂದ್ರಕಾಂತ್, ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಎದೆನೋವು , ಹೃದಯಾಘಾತ ಆಗುತ್ತಿದ್ದಂತೆಯೇ ಸಹೋದ್ಯೋಗಿಗಳು ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆ ಆವರಣದಲ್ಲಿಯೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವೇಳೆ ಸಾರ್ವಜನಿಕರು, ಪೊಲೀಸ್ ಸಿಬ್ಬಂದಿ ಮೃತ ಚಂದ್ರಕಾಂತ್‌ ಜತೆಗಿನ ಒಡನಾಟ ಸ್ಮರಿಸಿದರು.

Intro:ಕಲಬುರಗಿ:ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಹೆಡ್ ಕಾನಸ್ಟೇಬಲ್ ಚಂದ್ರಕಾಂತ ಅಂಕಲಗಿ ಎಂದು ಗುರುತಿಸಲಾಗಿದೆ. ಸರಳ, ಸಜ್ಜನ ಪೇದೆ ಎನಿಸಿಕೊಂಡಿದ್ದ ಚಂದ್ರಕಾಂತ ನಿಧನಕ್ಕೆ ಸಹೋದ್ಯೋಗಿಗಳು, ನಾಗರೀಕರು ಕಣ್ಣೀರು ಹಾಕಿದ್ದಾರೆ. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಚಂದ್ರಕಾಂತ್, ಇದ್ದಕ್ಕಿದ್ದಂತೆ ಎದೆನೋವು ಎಂದು ಬಳಲಿದ್ದಾರೆ. ಹೃದಯಾಘಾತ ಆಗುತ್ತಿದ್ದಂತೆಯೇ ಸಹೋದ್ಯೋಗಿಗಳು ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆ ಆವರಣದಲ್ಲಿಯೇ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಲಬುರ್ಗಿ ತಾಲೂಕಿನ ಅಂಕಲಗಾ ಗ್ರಾಮದ ಚಂದ್ರಕಾಂತ್, 20 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಹೋದ್ಯೋಗಿಯ ಸಾವಿಗೆ ಪೊಲೀಸ್ ಸಿಬ್ಬಂದಿ ಕಣ್ಣೀರಿಟ್ಟು, ಅಶ್ರುತರ್ಪಣ ಸಲ್ಲಿಸಿದ್ದಾರೆ.Body:ಕಲಬುರಗಿ:ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಹೆಡ್ ಕಾನಸ್ಟೇಬಲ್ ಚಂದ್ರಕಾಂತ ಅಂಕಲಗಿ ಎಂದು ಗುರುತಿಸಲಾಗಿದೆ. ಸರಳ, ಸಜ್ಜನ ಪೇದೆ ಎನಿಸಿಕೊಂಡಿದ್ದ ಚಂದ್ರಕಾಂತ ನಿಧನಕ್ಕೆ ಸಹೋದ್ಯೋಗಿಗಳು, ನಾಗರೀಕರು ಕಣ್ಣೀರು ಹಾಕಿದ್ದಾರೆ. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಚಂದ್ರಕಾಂತ್, ಇದ್ದಕ್ಕಿದ್ದಂತೆ ಎದೆನೋವು ಎಂದು ಬಳಲಿದ್ದಾರೆ. ಹೃದಯಾಘಾತ ಆಗುತ್ತಿದ್ದಂತೆಯೇ ಸಹೋದ್ಯೋಗಿಗಳು ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆ ಆವರಣದಲ್ಲಿಯೇ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಲಬುರ್ಗಿ ತಾಲೂಕಿನ ಅಂಕಲಗಾ ಗ್ರಾಮದ ಚಂದ್ರಕಾಂತ್, 20 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಹೋದ್ಯೋಗಿಯ ಸಾವಿಗೆ ಪೊಲೀಸ್ ಸಿಬ್ಬಂದಿ ಕಣ್ಣೀರಿಟ್ಟು, ಅಶ್ರುತರ್ಪಣ ಸಲ್ಲಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.