ETV Bharat / state

Krishna Byre Gowda: ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ, ಅಧಿಕಾರಿಗಳಿಗೆ ನಿರ್ದೇಶನ

author img

By

Published : Jul 26, 2023, 8:39 AM IST

ನೈಸರ್ಗಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 56 ಕೋಟಿ ರೂಪಾಯಿ ಇದ್ದು, ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದರು.

ಸಚಿವ ಕೃಷ್ಣ ಬೈರೇಗೌಡ ಕೊಡಗು ಭೇಟಿ
ಸಚಿವ ಕೃಷ್ಣ ಬೈರೇಗೌಡ ಕೊಡಗು ಭೇಟಿ

ಕೊಡಗು: ಜಿಲ್ಲಾ ಉಸ್ತುವಾರಿ ಸಚಿವ ಎನ್​.ಎಸ್.ಬೋಸರಾಜು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ‌‌ ಮಳೆ ಹಾನಿ ಪ್ರದೇಶಗಳಾದ ಭಾಗಮಂಡಲ, ಬೆಂಗೂರು, ಚೆರಂಬಾಣೆ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿದರು. ಪ್ರವಾಹಪೀಡಿತ ಕುಶಾಲನಗರದ ಸಾಯಿ ಬಡಾವಣೆ, ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಸಂತ್ರಸ್ಥರ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ನೈಸರ್ಗಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಧಿಕಾರಿಯ ಪಿಡಿ ಖಾತೆಯಲ್ಲಿ 56 ಕೋಟಿ ರೂಪಾಯಿ ಹಣವಿದ್ದು, ಪ್ರಸಕ್ತ ಅವಧಿಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಿದಲ್ಲಿ 20 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದರು.

ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಒಂದು ತಿಂಗಳಲ್ಲಿ ಮನೆ ಕಾಮಗಾರಿಗಳು, ಇತರೆ ಹಳೇ ಕಾಮಗಾರಿಗಳ ಕೆಲಸ ಆಗಿದ್ದಲ್ಲಿ ಹಣ ಪಾವತಿಸಬೇಕು. ಕಾಮಗಾರಿ ಆರಂಭಿಸದಿದ್ದಲ್ಲಿ ನೋಟಿಸ್ ನೀಡಿ ಮಾಹಿತಿ ಪಡೆದು ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಖಾತೆಯಲ್ಲಿ 540 ಕೋಟಿ ರೂ: ಕಾಮಗಾರಿ ಬಾಕಿ ಇದ್ದಲ್ಲಿ ಸರ್ಕಾರದ ಹಂತದಲ್ಲಿ ಮಾಹಿತಿ ನೀಡುವುದು ಕಷ್ಟವಾಗುತ್ತದೆ. ಆದ್ದರಿಂದ ಮನೆ ಕಾಮಗಾರಿಗಳು ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದಡಿ ತೆಗೆದುಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಂದಾಯ ಸಚಿವರು ನಿರ್ದೇಶನ ನೀಡಿದರು. ನೈಸರ್ಗಿಕ ವಿಕೋಪ ಎದುರಿಸಲು ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 540 ಕೊಟಿ ರೂ ಇದ್ದು, ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ 32 ಕೋಟಿ ರೂ ಬಿಡುಗಡೆ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮಳೆ ಹಾನಿ ಕಾಮಗಾರಿಗಳ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಮನೆ ಮತ್ತು ಇತರೆ ಕಾಮಗಾರಿಗಳು ಆರಂಭ ಆಗದಿರುವುದಕ್ಕೆ ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು. ಮಳೆಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚು ಎಚ್ಚರವಹಿಸಿ ಕೆಲಸ ಮಾಡಬೇಕು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರಲ್ಲಿ ಧೈರ್ಯ ತುಂಬಬೇಕು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ಹೇಳಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಅಷ್ಟಾಗಿ ಮಳೆ ಆಗಿಲ್ಲ. ಜುಲೈ 22ರಿಂದ ವ್ಯಾಪಕ ಮಳೆ ಆಗುತ್ತಿದೆ. ಆದ್ದರಿಂದ ಎಲ್ಲ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಬಿರುನಾಣಿ ಮತ್ತು ನಾಪೋಕ್ಲು ಭಾಗದಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಇಲ್ಲದೆ ನಾಗರಿಕರು ಪರಿತಪಿಸುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಈ ಬಾರಿ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಿ ಹೆಚ್ಚಿನ ಹಾನಿ ಆಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ 4 ರ್ಯಾಪಿಡ್ ರೆಸ್ಪಾನ್ಸ್ ತಂಡಗಳು, ಸೆಸ್ಕ್ ವಿಭಾಗದಿಂದ 19 ತಂಡಗಳು ಹಾಗೂ ಅರಣ್ಯ ಇಲಾಖೆಯಿಂದ ಹಲವು ವಿಭಾಗಗಳು ಪ್ರಾಕೃತಿಕ ವಿಕೋಪದಲ್ಲಿ ತೊಡಗಿಸಿಕೊಂಡಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Karnataka Rain update: ಕಲಬುರಗಿಗೆ ಭಾರಿ ಮಳೆ ಮುನ್ಸೂಚನೆ, ರೆಡ್‌ ಅಲರ್ಟ್: ಇಂದು ಎಲ್ಲೆಲ್ಲಿ ಶಾಲೆಗೆ ರಜೆ ಗೊತ್ತೇ?

ಕೊಡಗು: ಜಿಲ್ಲಾ ಉಸ್ತುವಾರಿ ಸಚಿವ ಎನ್​.ಎಸ್.ಬೋಸರಾಜು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ‌‌ ಮಳೆ ಹಾನಿ ಪ್ರದೇಶಗಳಾದ ಭಾಗಮಂಡಲ, ಬೆಂಗೂರು, ಚೆರಂಬಾಣೆ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿದರು. ಪ್ರವಾಹಪೀಡಿತ ಕುಶಾಲನಗರದ ಸಾಯಿ ಬಡಾವಣೆ, ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಸಂತ್ರಸ್ಥರ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ನೈಸರ್ಗಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಧಿಕಾರಿಯ ಪಿಡಿ ಖಾತೆಯಲ್ಲಿ 56 ಕೋಟಿ ರೂಪಾಯಿ ಹಣವಿದ್ದು, ಪ್ರಸಕ್ತ ಅವಧಿಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಿದಲ್ಲಿ 20 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದರು.

ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಒಂದು ತಿಂಗಳಲ್ಲಿ ಮನೆ ಕಾಮಗಾರಿಗಳು, ಇತರೆ ಹಳೇ ಕಾಮಗಾರಿಗಳ ಕೆಲಸ ಆಗಿದ್ದಲ್ಲಿ ಹಣ ಪಾವತಿಸಬೇಕು. ಕಾಮಗಾರಿ ಆರಂಭಿಸದಿದ್ದಲ್ಲಿ ನೋಟಿಸ್ ನೀಡಿ ಮಾಹಿತಿ ಪಡೆದು ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಖಾತೆಯಲ್ಲಿ 540 ಕೋಟಿ ರೂ: ಕಾಮಗಾರಿ ಬಾಕಿ ಇದ್ದಲ್ಲಿ ಸರ್ಕಾರದ ಹಂತದಲ್ಲಿ ಮಾಹಿತಿ ನೀಡುವುದು ಕಷ್ಟವಾಗುತ್ತದೆ. ಆದ್ದರಿಂದ ಮನೆ ಕಾಮಗಾರಿಗಳು ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದಡಿ ತೆಗೆದುಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಂದಾಯ ಸಚಿವರು ನಿರ್ದೇಶನ ನೀಡಿದರು. ನೈಸರ್ಗಿಕ ವಿಕೋಪ ಎದುರಿಸಲು ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 540 ಕೊಟಿ ರೂ ಇದ್ದು, ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ 32 ಕೋಟಿ ರೂ ಬಿಡುಗಡೆ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮಳೆ ಹಾನಿ ಕಾಮಗಾರಿಗಳ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಮನೆ ಮತ್ತು ಇತರೆ ಕಾಮಗಾರಿಗಳು ಆರಂಭ ಆಗದಿರುವುದಕ್ಕೆ ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು. ಮಳೆಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚು ಎಚ್ಚರವಹಿಸಿ ಕೆಲಸ ಮಾಡಬೇಕು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರಲ್ಲಿ ಧೈರ್ಯ ತುಂಬಬೇಕು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ಹೇಳಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಅಷ್ಟಾಗಿ ಮಳೆ ಆಗಿಲ್ಲ. ಜುಲೈ 22ರಿಂದ ವ್ಯಾಪಕ ಮಳೆ ಆಗುತ್ತಿದೆ. ಆದ್ದರಿಂದ ಎಲ್ಲ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಬಿರುನಾಣಿ ಮತ್ತು ನಾಪೋಕ್ಲು ಭಾಗದಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಇಲ್ಲದೆ ನಾಗರಿಕರು ಪರಿತಪಿಸುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಈ ಬಾರಿ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಿ ಹೆಚ್ಚಿನ ಹಾನಿ ಆಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ 4 ರ್ಯಾಪಿಡ್ ರೆಸ್ಪಾನ್ಸ್ ತಂಡಗಳು, ಸೆಸ್ಕ್ ವಿಭಾಗದಿಂದ 19 ತಂಡಗಳು ಹಾಗೂ ಅರಣ್ಯ ಇಲಾಖೆಯಿಂದ ಹಲವು ವಿಭಾಗಗಳು ಪ್ರಾಕೃತಿಕ ವಿಕೋಪದಲ್ಲಿ ತೊಡಗಿಸಿಕೊಂಡಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Karnataka Rain update: ಕಲಬುರಗಿಗೆ ಭಾರಿ ಮಳೆ ಮುನ್ಸೂಚನೆ, ರೆಡ್‌ ಅಲರ್ಟ್: ಇಂದು ಎಲ್ಲೆಲ್ಲಿ ಶಾಲೆಗೆ ರಜೆ ಗೊತ್ತೇ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.