ETV Bharat / state

ಮಡಿಕೇರಿ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು - ಮೈಸೂರಿನ ಆಸ್ಪತ್ರೆಯಲ್ಲಿ ಯುವಕ ಸಾವು

ಬೈಕ್ ಹಾಗೂ ಜೀಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕನೋರ್ವ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಸಾವು
author img

By

Published : Sep 25, 2019, 11:41 AM IST

Updated : Sep 25, 2019, 12:31 PM IST

ಮಡಿಕೇರಿ: ಕುಟ್ಟ-ಶ್ರೀಮಂಗಲ ನಡುವಿನ ಪೂಜೆಕಲ್​ ಬಳಿ ಬೈಕ್ ಹಾಗೂ ಜೀಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಪೂಜೆಕಲ್​ ನಿವಾಸಿ ಗಣೇಶ್ (27) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಯುವಕ. ಸೋಮವಾರ ಸಂಜೆ ಬೈಕ್​ನಲ್ಲಿ ಗಣೇಶ್ ಮತ್ತು ಆತನ ಸ್ನೇಹಿತ ಅಕ್ಷಯ್ ಶ್ರೀಮಂಗಲ ಕಡೆಯಿಂದ ಕುಟ್ಟ ಕಡೆಗೆ ಹೊರಟಿದ್ದರು. ಈ ವೇಳೆ ಕುರ್ಕೆ ಗ್ರಾಮದ ನಿವಾಸಿ ಸಂಜು ಎಂಬುವರ ಜೀಪ್ ಡಿಕ್ಕಿಯಿಂದ ನೆಲಕ್ಕೆ ಬಿದ್ದಿದ್ದ ಗಣೇಶನ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಹಿಂಬದಿ ಕುಳಿತಿದ್ದ ಅಕ್ಷಯ್‌ಗೂ ಗಾಯಗಳಾಗಿದ್ದವು‌. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಗಣೇಶ್​ ಮೃತಪಟ್ಟಿದ್ದಾನೆ.

ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಸಾವು

ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿ: ಕುಟ್ಟ-ಶ್ರೀಮಂಗಲ ನಡುವಿನ ಪೂಜೆಕಲ್​ ಬಳಿ ಬೈಕ್ ಹಾಗೂ ಜೀಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಪೂಜೆಕಲ್​ ನಿವಾಸಿ ಗಣೇಶ್ (27) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಯುವಕ. ಸೋಮವಾರ ಸಂಜೆ ಬೈಕ್​ನಲ್ಲಿ ಗಣೇಶ್ ಮತ್ತು ಆತನ ಸ್ನೇಹಿತ ಅಕ್ಷಯ್ ಶ್ರೀಮಂಗಲ ಕಡೆಯಿಂದ ಕುಟ್ಟ ಕಡೆಗೆ ಹೊರಟಿದ್ದರು. ಈ ವೇಳೆ ಕುರ್ಕೆ ಗ್ರಾಮದ ನಿವಾಸಿ ಸಂಜು ಎಂಬುವರ ಜೀಪ್ ಡಿಕ್ಕಿಯಿಂದ ನೆಲಕ್ಕೆ ಬಿದ್ದಿದ್ದ ಗಣೇಶನ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಹಿಂಬದಿ ಕುಳಿತಿದ್ದ ಅಕ್ಷಯ್‌ಗೂ ಗಾಯಗಳಾಗಿದ್ದವು‌. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಗಣೇಶ್​ ಮೃತಪಟ್ಟಿದ್ದಾನೆ.

ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಸಾವು

ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಫಘಾತ: ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಸಾವು

ಕೊಡಗು: ಕುಟ್ಟ-ಶ್ರೀಮಂಗಲ ನಡುವಿನ ಪೂಜೆಕಲ್ಲ್‌ ಬಳಿ ನೆನ್ನೆ ಬೈಕ್ ಹಾಗೂ ಜೀಪ್ ನಡುವೆ ನಡೆದಿದ್ದ ಅಫಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಪೂಜೆಕಲ್ಲ್ ನಿವಾಸಿ ಗಣೇಶ್ (27) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಯುವಕ. ನೆನ್ನೆ ಸಂಜೆ ಬೈಕಿನಲ್ಲಿ ಗಣೇಶ್ ಮತ್ತು ಆತನ ಸ್ನೇಹಿತ ಅಕ್ಷಯ್ ಶ್ರೀಮಂಗಲ ಕಡೆಯಿಂದ ಕುಟ್ಟ ಕಡೆಗೆ ಹೊರಟಿದ್ದರು.ಈ ವೇಳೆ ಕುರ್ಕೆ ಗ್ರಾಮದ ನಿವಾಸಿ ಸಂಜು ಎಂಬುವರ ಜೀಪ್ ಡಿಕ್ಕಿಗೆ ಅಪಘಾತವಾಗಿ ತಲೆ ಭಾಗಕ್ಕೆ ಗಂಭೀರವಾದ ಗಾಯಗಳಾಗಿ ಹಿಂಬದಿ ಕುಳಿತಿದ್ದ ಅಕ್ಷಯ್‌ಗೂ ಗಾಯಗಳಾಗಿದ್ದವು‌.ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
Last Updated : Sep 25, 2019, 12:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.