ETV Bharat / state

ಗುಂಡು ಹಾರಿಸಿ ಹೆಂಡತಿ ಕೊಂದ ಗಂಡ.. ಬೆಚ್ಚಿಬಿದ್ದ ಕೊಡಗು

author img

By

Published : Aug 11, 2022, 8:20 AM IST

ಕೊಡಗು ಜಿಲ್ಲೆಯಲ್ಲಿ ಕೌಟುಂಬಿಕ ಕಲಹಕ್ಕೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ. ಗಂಡನೊಬ್ಬ ಹೆಂಡ್ತಿ ಮೇಲೆ ಗುಂಡು ಹಾರಿಸಿ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಜತೆಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

man Shot and killed his wife in Kodagu  Kodagu crime news  woman murder in Kodagu  ಹೆಂಡ್ತಿಯನ್ನು ಗುಂಡು ಹಾರಿಸಿ ಕೊಂದ ಗಂಡ  ಕೊಡಗು ಜಿಲ್ಲೆಯಲ್ಲಿ ಕೌಟುಂಬಿಕ ಕಲಹಕ್ಕೆ ಮಹಿಳೆಯೊಬ್ಬಳು ಬಲಿ  ಹೆಂಡ್ತಿ ಮೇಲೆ ಗುಂಡು ಹಾರಿಸಿ ಬರ್ಬರ ಕೊಲೆ  ಗಂಡ ಮತ್ತು ಹೆಂಡ್ತಿ ಜಗಳ  ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣ
ಹೆಂಡ್ತಿಯನ್ನು ಗುಂಡು ಹಾರಿಸಿ ಕೊಂದ ಗಂಡ

ಕೊಡಗು: ವ್ಯಕ್ತಿಯೊಬ್ಬ ತನ್ನ ಹೆಂಡ್ತಿ ಮೇಲೆ ಗುಂಡು ಹಾರಿಸಿ ಬರ್ಬರ ಕೊಲೆ ಮಾಡಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಘಟನೆ ಬುಧವಾರ ರಾತ್ರಿ ನಡೆದಿದೆ. ಚಸ್ಮಾ(43) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಕಿಶನ್ ಅಲಿಯಾಸ್ ಗೋಪಾಲ್ ನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಕಳೆದ ರಾತ್ರಿ ಇಬ್ಬರ ಮಧ್ಯೆ ಯಾವುದೋ ವಿಷಯಕ್ಕೆ ಜಗಳವಾದಂತೆ ಕಾಣಿಸುತ್ತದೆ. ಈ ವೇಳೆ, ಗಂಡ ಮತ್ತು ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಕಿಶನ್​ ಕೋಪದಲ್ಲಿ ತನ್ನ ಹೆಂಡ್ತಿ ಚಸ್ಮಾ ಮೇಲೆ ಗುಂಡು ಹಾರಿಸಿದಂತೆ ಕಾಣಿಸುತ್ತದೆ. ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸುದ್ದಿ ತಿಳಿದಾಕ್ಷಣ ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕೊಲೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಓದಿ: ಕೌಟುಂಬಿಕ ಕಲಹದಿಂದ ಬೇಸತ್ತು ಅಪ್ರಾಪ್ತ ಮಗನ ಸಹಾಯದಿಂದ ಪತಿ ಕೊಂದ ಪತ್ನಿ

ಕೊಡಗು: ವ್ಯಕ್ತಿಯೊಬ್ಬ ತನ್ನ ಹೆಂಡ್ತಿ ಮೇಲೆ ಗುಂಡು ಹಾರಿಸಿ ಬರ್ಬರ ಕೊಲೆ ಮಾಡಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಘಟನೆ ಬುಧವಾರ ರಾತ್ರಿ ನಡೆದಿದೆ. ಚಸ್ಮಾ(43) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಕಿಶನ್ ಅಲಿಯಾಸ್ ಗೋಪಾಲ್ ನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಕಳೆದ ರಾತ್ರಿ ಇಬ್ಬರ ಮಧ್ಯೆ ಯಾವುದೋ ವಿಷಯಕ್ಕೆ ಜಗಳವಾದಂತೆ ಕಾಣಿಸುತ್ತದೆ. ಈ ವೇಳೆ, ಗಂಡ ಮತ್ತು ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಕಿಶನ್​ ಕೋಪದಲ್ಲಿ ತನ್ನ ಹೆಂಡ್ತಿ ಚಸ್ಮಾ ಮೇಲೆ ಗುಂಡು ಹಾರಿಸಿದಂತೆ ಕಾಣಿಸುತ್ತದೆ. ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸುದ್ದಿ ತಿಳಿದಾಕ್ಷಣ ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕೊಲೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಓದಿ: ಕೌಟುಂಬಿಕ ಕಲಹದಿಂದ ಬೇಸತ್ತು ಅಪ್ರಾಪ್ತ ಮಗನ ಸಹಾಯದಿಂದ ಪತಿ ಕೊಂದ ಪತ್ನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.